ನನ್ನ ಮತದಾರರಿಗೆ ಎಂದೂ ಅಗೌರವ ತಂದಿಲ್ಲ: ಸದಾನಂದಗೌಡ
Recommended Video

ಬೆಂಗಳೂರು, ಏಪ್ರಿಲ್ 08: ಜನಪ್ರತಿನಿಧಿ ಲಂಚಕೋರನಾದರೆ ಚುನಾಯಿಸಿದ ಪ್ರಜೆಗಳಿಗೆ ಅಪಮಾನವಾಗುತ್ತದೆ. ಆದ್ದರಿಂದ ಭ್ರಷ್ಟರನ್ನು ದೂರವಿರಿಸಿ ಪ್ರಜಾಪ್ರಭುತ್ವ ಮೌಲ್ಯವನ್ನು ಉಳಿಸಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಹೇಳಿದರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಚಿಕ್ಕಜಾಲದ ಕೆ.ಎನ್.ಎಸ್. ಕನ್ವೆನ್ಷನ್ ಹಾಲ್ನಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇತ್ತೀಚೆಗೆ ಹೋಟೆಲ್ ಒಂದರಲ್ಲಿ ಲಂಚ ಪಡೆಯುತ್ತಿದ್ದವರು ಪೊಲೀಸರಿಗೆ ಸಿಕ್ಕಿಬಿದ್ದರು. ಇದು ಯಾವ ಇಲಾಖೆಗೆ ಸೇರಿದ್ದು ಎಂದು ಅವರು ಹೇಳಿಕೆ ನೀಡಿದ್ದರಿಂದ ಅದು ಜಗಜ್ಜಾಹೀರಾಗಿದೆ. ನಿಮಗೆ ಇಂತಹ ಜನಪ್ರತಿನಿಧಿ ಬೇಕೇ ಎಂದು ಪ್ರಶ್ನಿಸಿದರು.
ನಿಮಗೆ ಅಗೌರವ ಬರುವಂತೆ ನಾನು ಯಾವಾಗಲಾದರೂ ನಡೆದುಕೊಂಡಿದ್ದೇನೆಯೇ ? ಭ್ರಷ್ಟಾಚಾರ ನಡೆಸಿದ್ದೇನೆಯೇ ? ನಿಮ್ಮ ಕೆಲಸಗಳನ್ನು ಮಾಡಿಕೊಡಲು ನಾಳೆ ಬನ್ನಿ ಎಂದಿದ್ದೇನೆಯೇ ? ಜಾತಿ ಆಧಾರದಲ್ಲಿ ತಾರತಮ್ಯ ಮಾಡಿದ್ದೇನೆಯೇ ? ನನ್ನ ಕೆಲಸವನ್ನು ನೋಡಿ ಮೌಲ್ಯಮಾಪನ ಮಾಡಿ ಎಂದು ಮನವಿ ಮಾಡಿದರು. ಸಂಸದರ ಅನುದಾನವನ್ನು ಶೇ.100 ರಷ್ಟು ಬಳಸಿಕೊಂಡು ನಿಮಗೆ ಗೌರವ ಬರುವಂತೆ ಮಾಡಿಲ್ಲವೇ ? ಕಾರ್ಯಕರ್ತರು, ಮುಖಂಡರಿಗೆ ಯಾವಾಗಲಾದರೂ ನೋವುಂಟು ಮಾಡಿದ್ದೇನೆಯೇ ? ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿಲ್ಲವೇ ? ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರದ ವಿರುದ್ಧ ಸಮರ ಸಾರೋಣ. ಇದಕ್ಕಾಗಿ ನೀವೆಲ್ಲರೂ ನನಗೆ ಕೈಜೋಡಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರೂ ಭ್ರಷ್ಟಾಚಾರದ ಕಡುವಿರೋಧಿಗಳಾಗಿದ್ದು ಅವರನ್ನು ಪುನಃ ಪ್ರಧಾನಿ ಮಾಡೋಣ ಎಂದು ಕರೆ ನೀಡಿದರು.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
ನನಗೆ ನಗುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾನು ನಗದೇ ಅವರಂತೆ ಯಾವಾಗಲೂ ಮುಖ ಊದಿಸಿಕೊಂಡು ಇರಬೇಕಿತ್ತೇ. ಅವರಂತೆ ದುರಹಂಕಾರದ ಮಾತುಗಳನ್ನಾಡುವುದು ನನಗೆ ಬರುವುದಿಲ್ಲ ಎಂದು ಸದಾನಂದಗೌಡರು ವಾಗ್ದಾಳಿ ನಡೆಸಿದರು. ನನ್ನನ್ನು ಪುತ್ತೂರಿಗೆ ಓಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಿಂದಲೇ ಜನರು ಅವರನ್ನು ಓಡಿಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದವನಾಗಿ ನಾನು ಕೆಲಸ ಮಾಡುತ್ತಿಲ್ಲವೇ ಎಂದು ತಿರುಗೇಟು ನೀಡಿದರು.
ಕಳೆದ ಚುನಾವಣೆಯಲ್ಲಿ ಜಾಲದಲ್ಲಿ ನನಗೆ 37 ಸಾವಿರಕ್ಕೂ ಅಧಿಕ ಮತಗಳ ಲೀಡ್ ಸಿಕ್ಕಿತ್ತು. ಈ ಬಾರಿ ಅದು 50 ಸಾವಿರವನ್ನು ದಾಟಬೇಕು. ಇದಕ್ಕಾಗಿ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು. ನನ್ನ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ಪರಿಷತ್ ಸದಸ್ಯ ಎ.ರವಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ಪಿ.ಕೆ.ರಾಜಗೋಪಾಲ್, ಮುಖಂಡರಾದ ದೊಡ್ಡ ಬಸವರಾಜು, ಪ್ರಕಾಶ್, ದೀಪು, ರಮೇಶ್ ಗೌಡ, ಅಮುದಾ ಮತ್ತಿತರರು ಹಾಜರಿದ್ದರು.
ನಂತರ ಸದಾನಂದಗೌಡರು ಕೊಡಿಗೇಹಳ್ಳಿಯಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ಕಳೆದ ಐದು ವರ್ಷದಲ್ಲಿ ತಾವು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ವಿವರಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications