ಬೆಂಗಳೂರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದೇನು ?
2024ನೇ ಸಾಲಿನ ಲೋಕಸಭೆ ಚುನಾವಣೆಯಲ್ಲಿ ಭಾರೀ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರ ಆರೋಪ ಮಾಡಿದ್ದು. ಇದೇ ಮೊದಲ ಬಾರಿಗೆ ಸಾಕ್ಷಿಗಳನ್ನೂ ನೀಡಿದ್ದಾರೆ. ದೇಶದಲ್ಲಿ ಅಂದಾಜು 20ರಿಂದ 25 ಲೋಕಸಭಾ ಕ್ಷೇತ್ರಗಳಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಬೆಂಗಳೂರಿನ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಹೆಚ್ಚು ಕಳ್ಳ ಮತದಾನವಾಗಿದೆ ಎಂದು ರಾಹುಲ್ ಗಾಂಧಿ ಅವರು ಆರೋಪಿಸಿದ್ದು ಕೆಲವೊಂದು ಪ್ರಮುಖ ಸಾಕ್ಷಿಗಳನ್ನೂ ನೀಡಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಮಹಾರಾಷ್ಟ್ರದಲ್ಲಿ 5 ವರ್ಷಗಳಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಮತದಾರರ ಸಂಖ್ಯೆಗಿಂತ ಹೆಚ್ಚು ಕೇವಲ 5 ತಿಂಗಳಲ್ಲಿ ಸೇರ್ಪಡೆಯಾಗಿದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಸ್ಥಳೀಯ ಜನಸಂಖ್ಯೆಗಿಂತ ಮತದಾರರ ಪಟ್ಟಿಯಲ್ಲಿ ಹೆಚ್ಚು ಮತದಾರರಿದ್ದಾರೆ. ಸಂಜೆ 5 ಗಂಟೆಯ ನಂತರ ದಿಢೀರ್ ಮತದಾನ ಪ್ರಮಾಣ ಹೆಚ್ಚಳವಾಗಿದೆ. ಲೋಕಸಭೆಯಲ್ಲಿ ಅತಿ ಹೆಚ್ಚು ಮತಪಡೆದಿದ್ದ ನಮ್ಮ ಮೈತ್ರಿ, ಕೆಲವೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡಿದ್ದವು. ನಮಗೆ ಆಗಲೇ ಇಲ್ಲಿ ಘೋರ ತಪ್ಪು ನಡೆಯುತ್ತಿದೆ ಎಂಬ ಅರಿವಾಯಿತು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಇನ್ನು ಮತದಾರರ ಪಟ್ಟಿ ಜನರಿಗೆ ಸೇರಿದ್ದು. ಆದರೂ ಚುನಾವಣಾ ಆಯೋಗ ಯಾಂತ್ರಿಕ ಪರಿಶೀಲನಗೆ ಅನುಕೂಲವಾಗುವಂತೆ ಡಿಜಿಟಲ್ ಮಾದರಿಯಲ್ಲಿ ಮತದಾರರ ಪಟ್ಟಿ ಹಾಗೂ ಸಿಸಿಟಿವಿ ಮಾಹಿತಿ ನೀಡಲು ನಿರಾಕರಿಸಿದೆ. ಆ ಮೂಲಕ ಪಾರದರ್ಶಕತೆಯನ್ನು ದಮನ ಮಾಡಿದೆ. ಸಂಜೆ 5.30ರ ನಂತರ ಮತಗಟ್ಟೆಗಳಲ್ಲಿ ಮತದಾರರ ಸಾಲು ಇಲ್ಲದಿದ್ದರೂ ಮತದಾನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಇಲ್ಲಿ ಏನನ್ನೋ ಮುಚ್ಚಿಡಲಾಗುತ್ತಿದೆ ಎಂದು ನಮಗೆ ತಿಳಿಯಿತು. ಚುನಾವಣಾ ಆಯೋಗ ಪರಿಶೀಲನೆಯನ್ನು ಮಾತ್ರವಷ್ಟೇ ಅಲ್ಲ ಸಾಕ್ಷಿಗಳನ್ನೂ ನಾಶ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಅವರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.
ಅಲ್ಲದೇ ಒಬ್ಬ ವ್ಯಕ್ತಿಗೆ ಒಂದು ಮತದಾನ ಎಂಬುದೇ ಸಂವಿಧಾನದ ಅಡಿಪಾಯ. ಆದರೆ, ಚುನಾವಣೆಯ ಸಮಗ್ರತೆಯ ಮೇಲಿನ ಅನುಮಾನ, ಆಡಳಿತ ವಿರೋಧಿ ಅಲೆಯಿಂದ ಬಿಜೆಪಿಗೆ ವಿನಾಯಿತಿ, ಅನಿರೀಕ್ಷಿತ ಗೆಲುವಿನ ಅಂತರ, ಅಸ್ಪಷ್ಟವಾದ ಮತದಾನ, ಮಾಧ್ಯಮಗಳ ಗಲಾಟೆ, ಪ್ರಶ್ನೆ ಮೂಡಿಸುವಂತಹ ಚುನಾವಣಾ ವೇಳಾಪಟ್ಟಿ ಹಾಗೂ ತಿರುಚಲಾದ ಮತದಾರರ ಪಟ್ಟಿಗಳು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿವೆ ಎಂದೂ ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳಿದ ಐದು ಪ್ರಮುಖ ವಿಷಯಗಳು
1. ಮೊದಲ ಬಾರಿಗೆ ಮತ ಚಲಾಯಿಸಿದವರ ಪಟ್ಟಿಯಲ್ಲಿ 90ರ ವೃದ್ಧ - ವೃದ್ಧೆಯರು!
2. ಅಧಿಕೃತ ವಿಳಾಸವೇ ಇಲ್ಲದ 40 ಸಾವಿರ ಮತದಾರರಿಂದ ಮತ ಚಲಾವಣೆ
3. ಒಂದೇ ಕ್ಷೇತ್ರದ 2-4 ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವ ಸಾವಿರಾರು ನಕಲಿ ಮತದಾರರು!
4. ಮಹದೇವಪುರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ ನಡೆದಿದೆ.
5. ಮಹದೇವಪುರ ಕ್ಷೇತ್ರದ ಮತಗಳ್ಳತನ ಬಯಲಿಗೆಳೆಯಲು 30-40 ಮಂದಿ ಹಗಲಿರುಳು 6 ತಿಂಗಳು ಶ್ರಮಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications