ಮತದಾರರ ಐಡಿ ಕಾರ್ಡ್ ಪೊಲೀಸ್ ವಶ: ವ್ಯಕ್ತಿಗಳ ಪತ್ತೆ ಕಾರ್ಯ ಆರಂಭ
ಬೆಂಗಳೂರು, ಮೇ 10: ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದಲ್ಲಿ ಪತ್ತೆಯಾದ ಮತದಾರರ ಚೀಟಿಗಳ ವ್ಯಕ್ತಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದು, ವಶಪಡಿಸಿಕೊಂಡ 9 ಸಾವಿರಕ್ಕೂ ಹೆಚ್ಚು ಮತದಾರರ ಐಡಿಕಾರ್ಡ್ಗಳ ಪೈಕಿ ಕೆಲವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.
ಕಾರ್ಡ್ಗಳಲ್ಲಿರುವ ವ್ಯಕ್ತಿಗಳಿಗಾಗಿ ಈಗಾಗಲೇ ತನಿಖೆ ಆರಂಭಿಸಿರುವ ಪೊಲೀಸರು, ಐಡಿ ಕಾರ್ಡ್ಗಳನ್ನು ಒತ್ತೆಯಾಗಿಒಟ್ಟುಕೊಂಡು ಕೆಲವನ್ನು ಗೃಹಪಯೋಗಿ ವಸ್ತುಗಳನ್ನು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕೊಡುಗೆಯಾಗಿ ನೀಡಿದ್ದರು ಎಂದು ಪಲೀಸ್ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳ ಹಿಂದೆ ರಾಜರಾಜೇಶ್ವರಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಾಲಹಳ್ಳಿಯ ಅಪಾರ್ಟ್ಮೆಂಟ್ ಒಂದರ ಮೇಲೆ ದಾಳಿ ನಡೆಸಿ 9746 ಮತದಾರರ ಗುರುತಿನ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಅದರಲ್ಲಿ ಕೆಲವು ಗುರುತಿನ ಚೀಟಿಗಳನ್ನು ತನಿಖೆಗಾಗಿ ಪೊಲೀಸರು ತೆಗೆದುಕೊಂಡಿದ್ದಾರೆ. ಹಲವರು ರಾಜಕೀಯ ಪಕ್ಷಗಳಿಂದ ಹಣ ಪಡೆದು ತಮ್ಮ ಮತದಾರರ ಚೀಟಿಯನ್ನು ಮಾರಿಕೊಂಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ ಎಷ್ಟೇ ತನಿಖೆ ನಡೆಸಿದರೂ ಈ ಅಕ್ರಮದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಭಾಗಿಯಾಗಿರುವ ಕುರಿತು ಸುಳಿವು ದೊರೆತಿಲ್ಲ.
ಅಪಾರ್ಟ್ಮೆಂಟ್ನಲ್ಲಿ 200 ಮತದಾರರ ಚೀಟಿಗಳನ್ನೊಳಗೊಂಡಿದ್ದ ಸಾಕಷ್ಟು ಬಂಡಲ್ಗಳು ಪತ್ತೆಯಾಗಿದೆ. ಆ ಬಂಡಲ್ನ್ನು ಮತದಾರರ ಹೆಸರಿರುವ ಪಟ್ಟಿಯಿಂದ ಸುತ್ತುವರೆದಿದೆ. ಇದರಿಂದ ಒಂದೇ ಪಕ್ಷಕ್ಕೆ ಮತ ಹಾಕಲು ನಿರ್ಧರಿಸಿದ್ದ ಗುಂಪೊಂದು ಈ ರೀತಿ ಗುರುತಿನ ಚೀಟಿಯನ್ನು ಒಟ್ಟು ಮಾಡಿರಬಹುದು ಎಂದು ಸಂಶಯ ವ್ಯಕ್ತವಾಗಿದೆ. ಅಥವಾ ಆ ಅಪಾರ್ಟ್ಮೆಂಟ್ನಲ್ಲಿರುವ ಪ್ರಭಾವಿ ವ್ಯಕ್ತಿ ಯಾರೋ ಈ ಕೆಲಸ ಮಾಡಿರಬಹುದು ಎಂದು ಕೂಡ ಅಂದಾಜಿಸಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications