MLA ಮುನಿರತ್ನಂನಾಯ್ಡು ಗೆಲುವಿನ ಸಂಭ್ರಮದಲ್ಲೇ ಶಾಕ್
ಬೆಂಗಳೂರು ನ. 11 : ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಜಯ ಗಳಿಸಿ ಶಾಸಕರಾದ ಮುನಿರತ್ನಂ ಅವರಿಗೆ ಗೆಲುವಿನ ಸಂಭ್ರಮದ ಒಂದೇ ದಿನಕ್ಕೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಅಕ್ರಮ ವೋಟರ್ ಐಡಿ ತಯಾರಿಕೆ ಆರೋಪ ಎದುರಿಸುತ್ತಿರುವ ಮುನಿರತ್ನಂ ವಿರುದ್ಧದ ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ನಡೆಸುವಂತೆ ಹೈಕೋರ್ಟ್ ಆದೇಶ ಮಾಡಿದೆ.
ಮಂಗಳವಾರವಷ್ಟೇ ಭಾರೀ ಮತಗಳ ಅಂತರದಿಂದ ಜಯ ಗಳಿಸಿದ ಮುನಿರತ್ನಂ ರಾಜರಾಜೇಶ್ವರಿನಗರ ಶಾಸಕರಾಗಿ ಆಯ್ಕೆಯಾಗಿದ್ದರು. ಡಿ.ಕೆ ಸಹೋದರರನ್ನೇ ಉಪ ಸಮರದಲ್ಲಿ ಮಣಿಸಿದ ಸಂತಸದಲ್ಲಿದ್ದ ಮುನಿರತ್ನಂಗೆ ಒಂದೇ ದಿನಕ್ಕೆ ನಕಲಿ ವೋಟರ್ ಐಡಿ ಪ್ರಕರಣ ಶಾಕ್ ಕೊಟ್ಟಿದೆ. ಮುನಿರತ್ನಂ ವಿರುದ್ಧ ನಕಲಿ ವೋಟರ್ ಐಡಿ ತಯಾರಿಸಿದ ಆರೋಪ ಸಂಬಂಧ ಕ್ರಿಮಿನಲ್ ದಾವೆ ದಾಖಲಾಗಿದ್ದವು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಆನಂದ್ ಮತ್ತು ಸಂತೋಷ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠ ಬುಧವಾರ ಮಹತ್ವದ ಆದೇಶ ನೀಡಿದ್ದಾರೆ. ಅಕ್ರಮ ವೋಟರ್ ಐಡಿ ಪತ್ತೆ ಪ್ರಕರಣದ ಆರೋಪ ಪಟ್ಟಿಯನ್ನು ಉನ್ನತ ದರ್ಜೆಯ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಪರಮಾರ್ಶೆ ನಡೆಸಲು ನ್ಯಾಯಾಲಯ ಸೂಚಿಸಿದೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಕುರಿತು ನಿರ್ದೇಶನ ನೀಡಿರುವ ನ್ಯಾಯಾಲಯ, ಅರ್ಜಿದಾರರ ಸಮಸ್ಯೆ ಆಲಿಸಬೇಕು. ತನಿಖೆ ಸೂಕ್ತವಾಗಿ ನಡೆದಿದೆಯೋ ಇಲ್ಲವೋ ಪರಿಶೀಲಿಸಬೇಕು. ತನಿಖೆ ಮುಂದುವರೆಸುವ ಅಗತ್ಯತೆಯ ಬಗ್ಗೆ ಡಿಸೆಂಬರ್ 15ರೊಳಗೆ ವರದಿ ಸಲ್ಲಿಸಲು ಸೂಚಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications