ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರ ಪಟ್ಟಿ ಪರಿಷ್ಕರಿಸಬಹುದು- ಹೈಕೋರ್ಟ್
ಬೆಂಗಳೂರು. ಏಪ್ರಿಲ್ 8: ಕರ್ನಾಟಕ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕೃತ ಮಾಡುವುದಕ್ಕೆ ಅವಕಾಶವಿದೆ. ಹೀಗೆಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯ ಪೀಠ ಈ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರ ಪಟ್ಟಿ ಪರಿಷ್ಕರಿಸಬಹುದು ಎಂದು ತಿಳಿಸಿದೆ.

ಅಲ್ಲದೇ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರನ್ನು ಆ ಕ್ಷೇತ್ರದ ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತಹ ಕಾರ್ಯ ಆಗಬಾರದು. ಈ ರೀತಿಯ ವಿಚಾರಗಳನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಹಾಗೂ, ಶಾಸಕರ ಹೆಸರನ್ನೇ ಪಟ್ಟಿಯಿಂದ ತೆಗೆದು ಹಾಕುವ ಪ್ರಸಂಗಗಳು ಎದುರಾಗದಂತೆ ಕ್ರಮ ವಹಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಅರ್ಜಿದಾರರ ವಾದ ನಿರಾಕರಿಸಿದ ಕೋರ್ಟ್
ಮತದಾರರ ಅಂತಿಮ ಪಟ್ಟಿ ಪ್ರಕಟದ ಆದನಂತರ ಪಟ್ಟಿಯನ್ನು ಮತ್ತಷ್ಟು ಪರಿಷ್ಕರಿಸಲು ಅವಕಾಶವಿಲ್ಲ ಎಂಬುದಾಗಿ ಅರ್ಜಿದಾರರ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ, ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 22ರ ಪ್ರಕಾರ ಮತದಾರರ ಪಟ್ಟಿ ನಾಮನಿರ್ದೇಶನ ಮಾಡುವುದಕ್ಕಾಗಿ ಕೊನೆಯ ದಿನಾಂಕದವರೆಗೂ ತಿದ್ದುಪಡಿ ಮಾಡುವುದಕ್ಕೆ ಅವಕಾಶವಿದೆ ಎಂದು ಕೋರ್ಟ್ ತಿಳಿಸಿದೆ.
ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಸ್ಥಳಾಂತರಗೊಂಡವರು ಮತ್ತು ಮೃತಪಟ್ಟವರ ಹೆಸರನ್ನು ಪಟ್ಟಿಯನ್ನು ತೆಗೆದುಹಾಕುವುದಕ್ಕೆ ಚುನಾವಣಾ ಆಯೋಗಕ್ಕೆ ಅವಕಾಶವಿದೆ. ಅಲ್ಲದೇ, ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟು ಹೋಗಿರುವ ವ್ಯಕ್ತಿಗಳು ಯಾವ ಸಂದರ್ಭದಲ್ಲಿ ಬೇಕಾದರೂ ತನ್ನ ಹೆಸರನ್ನು ನೋಂದಣಿ ಅಧಿಕಾರಿಯ ಮುಂದೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಕೊಳ್ಳಬಹುದು. ಹಾಗೂ ನಿರ್ದಿಷ್ಟ ಕ್ಷೇತ್ರದಲ್ಲಿ ನಾಮ ನಿರ್ದೇಶನ ಮಾಡುವುದು ಮತ್ತು ಅಂತಹ ಕ್ಷೇತ್ರದಿಂದ ವರ್ಗಾವಣೆ ಹಾಗೂ ಮತದಾರರ ಪಟ್ಟಿಯನ್ನು ತಿದ್ದುಪಡಿ ಮಾಡಬಹುದಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.t
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications