'ಅಸಹ್ಯ ಸರ್ಕಾರ'ಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆ!
ಬೆಂಗಳೂರು, ಡಿಸೆಂಬರ್.09: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸೇಫ್ ಆಗಿದೆ. ಉಪ ಚುನಾವಣೆಯಲ್ಲಿ ನಡೆದ 15 ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದ್ದು, ಸ್ಥಿರ ಆಡಳಿತಕ್ಕೆ ಮತದಾರಪ್ರಭು ಮನ್ನಣೆ ನೀಡಿದ್ದಾರೆ. ಈ ಕುರಿತು ಸ್ವತಃ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಉಪ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಿದ್ದು ಹೋಗುತ್ತದೆ. ರಾಜಕೀಯ ಚಿತ್ರಣವೇ ಬದಲಾಗುತ್ತದೆ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಅವರಿಗೆ ಆದ ಗತಿಯೇ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪರಿಗೆ ಆಗುತ್ತದೆ. ಹೀಗೆಲ್ಲ ಬಿಜೆಪಿ ವಿರುದ್ಧ ಟ್ವೀಟಾಸ್ತ್ರ ಬಿಟ್ಟಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇದೀಗ ಕಮಲ ನಾಯಕರಿಗೆ ಶುಭಾಷಯ ಕೋರಿದ್ದಾರೆ.
ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದೊಂದು ಅಸಹ್ಯ ಸರ್ಕಾರ:
ಸರ್ಕಾರಕ್ಕೆ ಶುಭಾಷಯ ಕೋರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿಗರನ್ನು ಟೀಕಿಸುವುದನ್ನೂ ಬಿಡಲಿಲ್ಲ. ತಾವು ಮಾಡಿರುವ ಒಂದೇ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇರುವುದು ಅಸಹ್ಯ ಸರ್ಕಾರ ಎಂದು ಮೂದಲಿಸಿದ್ದ ಬಿಜೆಪಿ ನಾಯಕರೊಬ್ಬರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ.
ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
-
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications