ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ: ಮಳೆಯ ನಡುವೆ ಮತದಾನ
ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.
ಶ್ರೀನಗರದ ಪಿಇಎಸ್ ಕಾಲೇಜು, ಜಯನಗರದ ಎನ್ಎಂಕೆಆರ್ವಿ ಸೇರಿದಂತೆ ನಗರದ ವಿವಿಧೆಡೆ ಮತದಾನಕ್ಕೆ ಮತಗಟ್ಟೆಗಳನ್ನು ತೆರೆಯಲಾಗಿದೆ. ಸಂಜೆ 5ರವರೆಗೂ ಮತದಾನ ನಡೆಯಲಿದೆ.
ಬೆಂಗಳೂರಿನ ವಿವಿಧ ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಅದರ ನಡುವೆಯೇ ಪದವೀಧರರು ಮತ ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ, ಬಿಜೆಪಿಯಿಂದ ದೇವೇಗೌಡ ಮತ್ತು ಜೆಡಿಎಸ್ನಿಂದ ಅಚ್ಚೇಗೌಡ ಶಿವಣ್ಣ
ಸ್ಪರ್ಧಿಸುತ್ತಿದ್ದಾರೆ. ಅವರಲ್ಲದೆ, ಸಿಪಿಐ ಅಭ್ಯರ್ಥಿ ಕೆ. ಪ್ರಕಾಶ, ಭಾರತೀಯ ಜನತಾದಳದಿಂದ ವಿ.ಸುರೇಶ್ ಬಾಬು ಮತ್ತು 17 ಮಂದಿ ಪಕ್ಷೇತರರು ಸೇರಿದಂತೆ 22 ಮಂದಿ ಪದವೀಧರ ಕ್ಷೇತ್ರದ ಚುನಾವಣಾ ಕಣದಲ್ಲಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣೆ ನಡೆಯುತ್ತಿದೆ.
ಬೆಂಗಳೂರು ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 65,354 ಮತದಾರರಿದ್ದಾರೆ. ಅದರಲ್ಲಿ ಗಂಡು 38,451 ಪುರುಷರು, 26,891 ಮಹಿಳೆಯರು ಮತ್ತು 12 ಇತರೆ ಮತದಾರರು ಸೇರಿದ್ದಾರೆ.
ಈ ಕ್ಷೇತ್ರದ ವ್ಯಾಪ್ತಿಯಲ್ಲಿ 36 ಮುಖ್ಯ ಮತಗಟ್ಟೆಗಳು, 46 ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 82 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.
ಅರಮನೆ ರಸ್ತೆಯಲ್ಲಿರುವ ರಾಮನಾರಾಯಣ್ ಚಲ್ಲಾರಾಮ್ ಕಾಲೇಜಿನಲ್ಲಿ ಜೂನ್ 12 ರಂದು ಬೆಳಿಗ್ಗೆ 8.00 ಗಂಟೆಯಿಂದ 14 ಎಣಿಕೆ ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications