ಅಸಭ್ಯ ಹೇಳಿಕೆ : ತೇಜಸ್ವಿನಿ ರಮೇಶ್- ಉಮಾಶ್ರೀ ಜಟಾಪಟಿ
ಬೆಂಗಳೂರು, ನ. 12: ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಪದೇ ಪದೆ ಅತ್ಯಾಚಾರಗಳು ಸಂಭವಿಸುತ್ತಿರುವಾಗ, ಮಹಿಳೆಯರಿಗೆ ಚುನಾವಣಾ ಟಿಕೆಟ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಖರ ಮಹಿಳಾ ರಾಜಕಾರಣಿಗಳು ಮಾತಿನ ಚಕಮಕಿಗಿಳಿದಿದ್ದಾರೆ. ಟಿಕೆಟ್ ಸಿಗದೆ ಬೇಸತ್ತು ಬಿಜೆಪಿ ಸೇರಿರುವ ಮಾತಿನ ಮಲ್ಲಿ ತೇಜಸ್ವಿನಿ ರಮೇಶ್ ಮತ್ತು ಟಿಕೆಟ್ ಪಡೆದು ಗೆದ್ದು ಸಚಿವೆಯಾಗಿರುವ ಉಮಾಶ್ರೀ ಈ ಇಬ್ಬರು ಮಹಿಳೆಯರು.
ಕಾಂಗ್ರೆಸ್ಸಲ್ಲಿ ಸೌಂದರ್ಯ ನೋಡಿ ಚುನಾವಣಾ ಟಿಕೆಟ್ ನೀಡಲಾಗುತ್ತಿದೆಯಾ? ಕಾಂಗ್ರೆಸ್ಸಿನಲ್ಲಿ ದುಶ್ಶಾಸನರಂಥ ಸಚಿವರಿದ್ದಾರಾ? ಇಂಥ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ಸಿನ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಅವರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸಚಿವೆ ಉಮಾಶ್ರೀ ಅವರು ಸರೀ ತರಾಟೆಗೆ ತೆಗೆದುಕೊಂಡಿದ್ದು, ತೇಜಸ್ವಿನಿ ರಮೇಶ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ತೇಜಸ್ವಿನಿ ಹೇಳಿಕೆಯನ್ನು ಖಂಡಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಇದೊಂದು ಅತ್ಯಂತ ಅಸಹ್ಯಕರ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆ ಅತ್ಯಂತ ಅವಮಾನಕರವಾದದ್ದು. ನಾನು ಕಾಂಗ್ರೆಸ್ನಲ್ಲಿ ದಿನದ 24 ಗಂಟೆಯೂ ಪುರುಷರೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೂ ಯಾವುದೇ ಸಮಸ್ಯೆ ಎದುರಾಗಿಲ್ಲ. ಮಹಿಳೆಯರು ರಾಜಕೀಯ ಪ್ರವೇಶಿಸದಂತೆ ತಡೆಯುವ ಹುನ್ನಾರ ಈ ಹೇಳಿಕೆಯ ಹಿಂದೆ ಅಡಗಿದೆ ಎಂದು ಆರೋಪಿಸಿದ್ದಾರೆ. [ಡಿಕೆಶಿಯನ್ನು ಹುಚ್ಚು ನಾಯಿ ಎಂದಿದ್ದ ತೇಜಸ್ವಿನಿ]
ಎಲುಬಿಲ್ಲದ ನಾಲಿಗೆ ಜಾರಬಾರದು. ಮಾತನಾಡುವ ವೇಳೆ ಪ್ರಜ್ಞೆ ಇರಬೇಕು. ತೇಜಸ್ವಿನಿ ರಮೇಶ ಕಾಂಗ್ರೆಸ್ನಲ್ಲಿ ಅಧಿಕಾರ ಅನುಭವಿಸಿ, ಪಕ್ಷ ಬಿಟ್ಟ ನಂತರ ಕೀಳು ಹೇಳಿಕೆ ನೀಡುತ್ತಿದ್ದಾರೆ. ಅವರು ಕಾಂಗ್ರೆಸ್ನಲ್ಲಿದ್ದಾಗ ಯಾರು ಕಿರುಕುಳ ನೀಡಿದ್ದರು ಎಂಬುದನ್ನು ಬಹಿರಂಗಪಡಿಸಲಿ. ಎಲ್ಲರನ್ನೂ ಒಂದೇ ದೃಷ್ಟಿಯಿಂದ ನೋಡುವುದು ಸರಿಯಲ್ಲ. ಪಕ್ಷಕ್ಕಾಗಿ ತಳಮಟ್ಟದಿಂದ ಕೆಲಸ ಮಾಡಿದ್ದೇನೆ. ಇದನ್ನು ಗುರುತಿಸಿಯೇ ಪಕ್ಷ ನನಗೆ ಸಚಿವ ಸ್ಥಾನ ನೀಡಿದೆ. ತೇಜಸ್ವಿನಿ ಅವರ ಹೇಳಿಕೆಯಿಂದ ರಾಜಕಾರಣದ ಕುರಿತು ಕೆಟ್ಟ ಸಂದೇಶ ಹೋಗುತ್ತದೆ. ಹೆಣ್ಣು ಮಕ್ಕಳು ರಾಜಕೀಯದಿಂದ ದೂರ ಉಳಿಯುವಂತೆ ಮಾಡುತ್ತದೆ. ಈ ಕುರಿತು ಅವರು ಬಹಿರಂಗ ಚರ್ಚೆಗೆ ಬರಲಿ. ನಾನು ತಯಾರಾಗಿದ್ದೇನೆಂದು ಉಮಾಶ್ರೀ ಸವಾಲು ಹಾಕಿದ್ದಾರೆ.
ತೇಜಸ್ವಿನಿ ರಮೇಶ ಹೇಳಿದ್ದೇನು?
ಕಾಂಗ್ರೆಸ್ನಲ್ಲಿ ಸುಂದರ ಮಹಿಳೆಯರನ್ನು ವಸ್ತುವಿನಂತೆ ಬಳಸಿಕೊಳ್ಳಲಾಗುತ್ತಿದೆ. ಆ ಪಕ್ಷದಲ್ಲಿ ದುಶ್ಯಾಸನನಂತಹ ಮಹಿಳಾ ಪೀಡಕರಿದ್ದಾರೆ. ಪುರುಷರು ಹೇಳಿದಂತೆ ಕೇಳಿದರೆ ಮಾತ್ರ ಮಹಿಳೆಯರಿಗೆ ಪದವಿ ಸಿಗುತ್ತದೆ. ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ, ಅಧಿಕಾರ ನೀಡುವುದಿಲ್ಲ. ಚಿತ್ರನಟಿ ರಮ್ಯಾ ಸುಂದರಿಯಾಗಿದ್ದು, ಸೆಲೆಬ್ರಿಟಿಯಾಗಿರುವ ಕಾರಣ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ದರಿಂದ ಮಹಿಳೆಯರು ಕಾಂಗ್ರೆಸ್ ಸೇರುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದರು.
ಅಲ್ಲದೆ, ಕಾಂಗ್ರೆಸ್ ಆಡಳಿತದ ವಿರುದ್ಧ ಕಿಡಿಕಾರಿದ್ದ ತೇಜಸ್ವಿನಿ, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಭಾವನೆ ಅನುಸರಿಸುತ್ತಿದೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದುಬಿದ್ದಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಾರ್ಜ್ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ತಮ್ಮ ಹುಟ್ಟುಹಬ್ಬದ ದಿನವೇ ತೇಜಸ್ವಿನಿ ರಮೇಶ ಆಗ್ರಹಿಸಿದ್ದರು.
ಅಲ್ಲದೆ, ನಂದಿತಾ ಸಾವು ಲವ್ ಜಿಹಾದ್ನಿಂದ ಆಗಿರುವ ಶಂಕೆಯಿದೆ. ಸರ್ಕಾರ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ. ಅತ್ಯಾಚಾರದಂತಹ ವಿಷಯದಲ್ಲಿ ಬಿಜೆಪಿ ಯಾವತ್ತೂ ರಾಜಕೀಯ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಬಾಲಂಗೋಚಿ : ಸೌಂದರ್ಯ, ಗ್ಲಾಮರ್ ನೋಡಿ ಟಿಕೆಟ್ ನೀಡಲಾಗುತ್ತಿದೆ ಅಂತ ಹೇಳ್ತಾರಲ್ಲಾ ಇವರೂ... 2004ರಲ್ಲಿ ಕನಕಪುರ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ಗೆದ್ದಾಗ, 2009ರ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಾಗ, ಇವರ ಸೌಂದರ್ಯವನ್ನು ನೋಡಿ ಕಾಂಗ್ರೆಸ್ ಪಕ್ಷ ತೇಜಸ್ವಿನಿ ರಮೇಶ್ ಅವರಿಗೆ ಟಿಕೆಟ್ ನೀಡಿತ್ತಾ?
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications