ವಕ್ಫ್ ಆಸ್ತಿ ಪ್ರಕರಣದಲ್ಲಿ ಉಲ್ಟಾ ಹೊಡೆದ ಜಮೀರ್: ಬಿಜೆಪಿ ಆರೋಪ
ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸದೇ ಇದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸುವ ಕುರಿತು ವಿಧಾನ ಪರಿಷತ್ನಲ್ಲಿ ಚರ್ಚೆ ನಡೆದಿತ್ತು.
ಆಗ ಸಚಿವ ಜಮೀರ್ ಅಹಮದ್, 'ವರದಿಯಲ್ಲಿ ಸತ್ಯಾಂಶವಿದ್ದರೆ ನನ್ನ ತಂದೆ ತಪ್ಪು ಮಾಡಿದ್ದರೂ ನಾನು ಕ್ಷಮಿಸುವುದಿಲ್ಲ. ನೀವು ಇದನ್ನು ಸಿಬಿಐಗೆ ಕೊಡದಿದ್ದರೆ ನಾನು ಕೊಡಿಸುತ್ತೇನೆ' ಎಂದು ಹೇಳಿದ್ದರು. ಸಚಿವರು ಭರವಸೆ ನೀಡಿದ್ದರಿಂದ ಸಭಾಪತಿಗಳು ಚರ್ಚೆಯನ್ನು ಅಲ್ಲಿಗೆ ಮುಗಿಸಿದ್ದರು ಎಂದು ಹೇಳಿದರು.

'ಸರ್ಕಾರದ ಉತ್ತರವನ್ನು ನಾವು ಸ್ವಾಗತಿಸಿದ್ದೆವು. ಆದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಸದನದಲ್ಲಿ ಹೇಳಿದ್ದ ಸರ್ಕಾರ ಈಗ ನುಣುಚಿಕೊಳ್ಳುತ್ತಿದೆ.
ತಕ್ಷಣ ಇದನ್ನು ಸಿಬಿಐಗೆ ಕೊಡಬೇಕು. ಇದರಿಂದ ರಾಜಕೀಯ ತಲ್ಲಣ ಸೃಷ್ಟಿಯಾಗಬಹುದು. ಹಿರಿಯರ ತಲೆ ಉರುಳಲಿದೆ ಎನ್ನುವ ಭೀತಿ ಕಾಂಗ್ರೆಸ್ಗೆ ಇರಬಹುದು ಆದರೆ ಜೆಡಿಎಸ್ಗೆ ಈ ಸಂಕಷ್ಟಗಳು ಇಲ್ಲ.
15 ದಿನಗಳಲ್ಲಿ ವರದಿ ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ.

ಹಗರಣವನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಕುಮಾರಸ್ವಾಮಿ ಬುಡಕ್ಕೂ ಇದು ಬರಬಹುದು. ಅವರ ತಲೆದಂಡವೂ ಆದರೆ ಅದಕ್ಕೆ ಅವರೇ ಹೊಣೆ ಎಂದು ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಸದನದ ಬಳಿಕ ಖಾದರ್ ಹೋಗಿ ಜಮೀರ್ ಬಳಿ ಮಾತನಾಡಿದ್ದಾರೆ. ಅದಕ್ಕೆ ಜಮೀರ್ ಈಗ ನಿಲುವು ಬದಲಿಸಿಕೊಂಡಿದ್ದಾರೆ. ಮಾಣಿಪ್ಪಾಡಿ ವರದಿ ಯಥಾವತ್ತಾಗಿ ಮಂಡಿಸಿ ಎಂದಾಗ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅನ್ವರ್ ಮಾಣಿಪ್ಪಾಡಿ ಮಾತನಾಡಿ, 2012 ಮಾರ್ಚ್ 26 ರಂದು 7 ಸಾವಿರ ಪುಟದ ವರದಿ ನೀಡಿದ್ದೆ. ಆಗಿನ ನಮ್ಮ ಸರ್ಕಾರ ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಿ, ಸಂಪುಟದಲ್ಲಿ ಕೂಡ ಚರ್ಚಿಸಿ ಸದನದಲ್ಲಿ ಮಂಡನೆಗೆ ತೀರ್ಮಾನ ಮಾಡಿತ್ತು.
2013 ರಲ್ಲಿ ಸಂಪುಟದಲ್ಲಿ ಅನುಮೋದನೆ ಪಡೆದು ಉತ್ತಮ ವಿಧೇಯಕಗಳನ್ನು ತರಲಾಗಿತ್ತು. ಯಾವ ಆಸ್ತಿಯಲ್ಲಿ ಕಬಳಿಕೆ ಆಗಿದೆಯೋ ಆ ಆಸ್ತಿ ವಾಪಸ್ ತಂದುಕೊಡಲು ಎರಡು ಸಮಿತಿ ರಚನೆ ಮಾಡಲಾಗಿತ್ತು.

ರಾಜ್ಯ ಸಮಿತಿ, ಜಿಲ್ಲಾ ಸಮಿತಿ ರಚಿಸಲಾಗಿತ್ತು. ಯಾರೂ ಕೂಡ ಕೋರ್ಟ್ಗೆ ಹೋಗುವಂತಿಲ್ಲ. ಸಮಿತಿ ಮುಂದೆಯೇ ಬರಬೇಕು ಎಂದು ವಿಧೇಯಕ ರಚಿಸಲಾಗಿತ್ತು.
ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಪಂಚತಾರಾ ಹೋಟೆಲ್, ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಕಬಳಿಕೆಯಾದ ಆಸ್ತಿಯನ್ನು ಮರಳಿ ಬಿಡಿಸಿಕೊಳ್ಳುವ ಮಹತ್ವದ ವಿಧೇಯಕ ತಂದಿದ್ದೆವು. ಆದರೆ ನನ್ನ ಅವಧಿ ಮುಗಿದ ನಂತರ ವಿಧೇಯಕ ತಂದರು ಎಂಬ ತಪ್ಪು ಮಾಹಿತಿ ನೀಡಲಾಗಿದೆ ಎಂದು ಮಾಣಿಪ್ಪಾಡಿ ಹೇಳಿದರು.
ಅಂದಿನ ಸಭಾಪತಿ ಶಂಕರಮೂರ್ತಿ ಅವರು ತಮ್ಮ ಆದೇಶ ಅನುಷ್ಠಾನ ಆಗದಾಗ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂದು ತಿಳಿಸಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications