ಬೆಂಗಳೂರಲ್ಲಿ ಗೋಡೆ ಕುಸಿದು 3 ಕಾರ್ಮಿಕರ ದುರ್ಮರಣ
ಬೆಂಗಳೂರು, ಸೆ. 20: ಬೊಮ್ಮಸಂದ್ರದ ಡೆಕ್ಕನ್ ಇಂಡಸ್ಟ್ರೀಸ್ನ ನಿರ್ಮಾಣ ಹಂತದ ಗೋಡೆ ಕುಸಿದು ಮೂವರು ಕಾರ್ಮಿಕರು ಶನಿವಾರ ಮೃತಪಟ್ಟಿದ್ದಾರೆ.
ನಿರ್ಮಾಣ ಹಂತದಲ್ಲಿದ್ದ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದ ಪರಿಣಾಮ ಸಮೀರ್ ಎಂಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡಿದ್ದ ಪಾಂಚು ಮತ್ತು ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.(ಬೆಂಗಳೂರು : ಮೂವರ ಜೀವ ತಗೆದ 6 ಅಂತಸ್ತಿನ ಕಟ್ಟಡ)

ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿದ್ದು ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ. ಅವಘಡ ಸಂಭವಿಸಲು ಕಳಪೆ ಕಾಮಗಾರಿಯೇ ಕಾರಣ. ನಿಗದಿತ ಪ್ರಮಾಣದಲ್ಲಿ ಸಿಮೆಂಟ್ ಮತ್ತು ಕಬ್ಬಿಣ ಬಳಸದಿರುವುದರಿಂದ ಗೋಡೆ ಕುಸಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದವರು ಎನ್ಒಸಿ ಪಡೆದಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದ್ದು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.(ರಾಮನಗರದಲ್ಲಿ ಜೀತ ಕಾರ್ಮಿಕರಿಗೆ ಸ್ವಾತಂತ್ರ್ಯ ಸಿಕ್ಕಿತು)
ಈ ಬಗ್ಗೆ ಪ್ರತಿಕ್ರಿಯಿಸಿದ ಡೆಕ್ಕನ್ ಇಂಡಸ್ಟ್ರೀಸ್ನ ಪ್ರತಿನಿಧಿ, ಇಲ್ಲಿ ಯಾವುದೇ ಕಳಪೆ ಕಾಮಗಾರಿಯಾಗಿಲ್ಲ. ದಾಖಲೆಗಳೆಲ್ಲ ಸರಿಯಾಗಿದೆ. ಆಕಸ್ಮಿಕವಾಗಿ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ. ಹೆಬ್ಬಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications