ಬಿಬಿಎಂಪಿ ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಎಎಪಿ ನಿರ್ಧಾರ
ಬೆಂಗಳೂರು ಆಗಸ್ಟ 06: ರಾಜ್ಯ ಬಿಜೆಪಿ ಸರ್ಕಾರವು ಅಧಿಕಾರ ದುರ್ಬಳಕೆ ಮಾಡಿಕೊಂಡು ಹಾಗೂ ಆಮ್ ಆದ್ಮಿ ಪಾರ್ಟಿಯನ್ನು ಗುರಿಯಾಗಿಸಿ ಬಿಬಿಎಂಪಿ ಚುನಾವಣೆಗೆ ವಾರ್ಡ್ ಮೀಸಲಾತಿ ನಿಗದಿ ಮಾಡಿದೆ ಎಂದು ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆರೋಪಿಸಿದರು.
ಶನಿವಾರ ಬಿಬಿಎಂಪಿ ಚುನಾವಣೆ ವಾರ್ಡ ಮೀಸಲಾತಿ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಆಮ್ ಆದ್ಮಿ ಪಾರ್ಟಿ (ಎಎಪಿ) ಬೆಂಗಳೂರಿನಾದ್ಯಂತ ಹಲವು ರೀತಿಯ ಸಮಾಜಸೇವೆಗಳು ಕೈಗೊಂಡಿತ್ತು. ಎಎಪಿ ಕಾರ್ಯಕರ್ತರು ಕೋಟ್ಯಂತರ ಮಾಸ್ಕ್ಗಳನ್ನು ವಿತರಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಸ್ಯಾನಿಟೈಜರ್ ಸಿಂಪಡಿಸಿದ್ದೇವೆ. ಅಗತ್ಯವಿರುವವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿದ್ದೇವೆ ಎಂದರು.
ಎಎಪಿ ಬೆಂಗಳೂರಿನ ಜನರ ಭಾವನೆಗೆ ಸ್ಪಂದಿಸಿದೆ. ಅಲ್ಲದೇ ದೆಹಲಿ, ಪಂಜಾಬ್ನಲ್ಲಿನ ಆಡಳಿತವನ್ನು ಗಮನಿಸಿದ ಜನರು ಎಎಪಿಯನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಇದಕ್ಕೆ ಹೆದರಿರುವ ಬಿಜೆಪಿಯು ಅಧಿಕಾರ ದುರ್ಬಳಕೆ ಮಾಡಿಕೊಂಡ ಬಿಜೆಪಿ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡ್ಗಳಿಗೆ ಮೀಸಲಾತಿ ನಿಗದಿ ಪಡಿಸಿ ಕುತಂತ್ರ ಮಾಡಿದೆ ಎಂದು ದೂರಿದರು.

ವಾರ್ಡ್ ಮೀಸಲಾತಿಗೆ ಎಎಪಿ ಆಕ್ಷೇಪಣೆ
ಆಮ್ ಆದ್ಮಿ ಪಾರ್ಟಿಯು ಬೆಂಗಳೂರಿನ ಬಹುತೇಕ ವಾರ್ಡ್ಗಳಲ್ಲಿ ಮೂರು ಬಾರಿ ಮನೆಮನೆ ಪ್ರಚಾರ ಮಾಡಿದೆ. ಪ್ರತಿ ವಾರ್ಡ್ನಲ್ಲೂ
ಎಎಪಿಗೆ ಸಮರ್ಥ ನಾಯಕರು ಸಿಕ್ಕಿದ್ದಾರೆ. ವಕೀಲರು, ಎಂಜಿನಿಯರ್ಗಳು, ದಿಟ್ಟ ಮಹಿಳೆಯರು, ಸಮಾಜಸೇವಕರು ಸೇರಿದಂತೆ ಸೂಕ್ತ ಅಭ್ಯರ್ಥಿಗಳು ರೂಪುಗೊಂಡಿದ್ದಾರೆ. ಬಿಜೆಪಿಯು ಇದನ್ನೆಲ್ಲ ಸೂಕ್ಷ್ಮವಾಗಿ ಅಧ್ಯಯನ ಮಾಡಿ, ಎಎಪಿಯ ಸಂಭಾವ್ಯ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಯುವ ದುರುದ್ದೇಶದಿಂದ ಮೀಸಲಾತಿ ಪಟ್ಟಿಗೆ ತಿದ್ದುಪಡಿ ತಂದಿದೆ. ಹೀಗಾಗಿ ಮೀಸಲಾತಿ ಪಟ್ಟಿಗೆ ಎಎಪಿ ಆಕ್ಷೇಪಣೆ ಸಲ್ಲಿಸಲು ನಿರ್ಧರಿಸಿದೆ ಎಂದು ಅವರು ವಿವರಿಸಿದರು.

ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಆಮ್ ಆದ್ಮಿ ಪಾರ್ಟಿ ರಾಜಕೀಯ, ಜನಪರ ಕಾರ್ಯಕ್ರಮ ಕಂಡು ಭಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಧಿಕಾರ ಸಿಕ್ಕಿ ಮೂರು ವರ್ಷವಾದರೂ ಲೋಕಾಯುಕ್ತವನ್ನು ಬಲಪಡಿಸದ ಬಿಜೆಪಿಯು ಈಗ ಎಎಪಿಗೆ ಹೆದರಿ ಲೋಕಾಯುಕ್ತ ಸಬಲೀಕರಣದ ಬಗ್ಗೆ ಚಿಂತನೆ ನಡೆಸುತ್ತಿದೆ ವ್ಯಂಗ್ಯವಾಡಿದರು.
ರಾಜ್ಯ ಬಿಜೆಪಿಯ ಎಲ್ಲ ಕುತಂತ್ರಗಳಿಗೆ ಆಮ್ ಆದ್ಮಿ ಪಾರ್ಟಿಯು ಸೆಡ್ಡು ಹೊಡೆಯಲಿದೆ. ಬಿಬಿಎಂಪಿ ಚುನಾವಣೆಯಲ್ಲಿ 200ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಎಎಪಿ ಜಯಗಳಿಸುವುದು ನಿಶ್ಚಿತ ಎಂದು ಮೋಹನ್ ದಾಸರಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications