ಜನಾ ರೆಡ್ಡಿಗೆ 100 ಕೋಟಿ ಅರೇಂಜ್ ಮಾಡಿದ್ದು ಭೀಮಾ ನಾಯ್ಕ್, ಹೌದೇ?
ಬೆಂಗಳೂರು, ಡಿಸೆಂಬರ್ 7: ಮಂಡ್ಯದ ಮದ್ದೂರಿನ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಾಲಕ ರಮೇಶ್ ಬರೆದಿರುವ ಮರಣ ಪತ್ರದಿಂದ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಕೆಐಎಡಿಬಿಯ ವಿಶೇಷ ಭೂಸ್ವಾಧೀನಾಧಿಕಾರಿ ಭೀಮಾ ನಾಯ್ಕ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ನಾಯ್ಕ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಎಫ್ ಐಆರ್ ದಾಖಲಿಸಲಾಗಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿಯ ಮಗಳ ಮದುವೆಗೆ ನೂರು ಕೋಟಿ ರುಪಾಯಿ ಹಣವನ್ನು ಬದಲಿಸಿಕೊಟ್ಟವರು ಇದೇ ನಾಯ್ಕ್, ಮುಂದಿನ ಚುನಾವಣೆಗೆ ಟಿಕೆಟ್ ಗಾಗಿ ಕೂಡ ಹಣ ನೀಡಿದ್ದಾರೆ. ಲೋಕಾಯುಕ್ತದಲ್ಲಿ ದಾಖಲಾಗಿದ್ದ ತಮ್ಮ ವಿರುದ್ಧದ ಪ್ರಕರಣದಲ್ಲಿ ಪ್ರಭಾವ ಬೀರಲು ಜಡ್ಜ್ ಗೆ ಹಣ ನೀಡಿದ್ದಾರೆ ಎಂದು ಮರಣ ಪತ್ರದಲ್ಲಿ ದಿನ ಮತ್ತಿತರ ಮಾಹಿತಿಯನ್ನು ಕೂಡ ಬರೆದಿದ್ದಾರೆ.[ಹೊಗಳಿಕೆ ಟೀಕೆ ಅಪಹಾಸ್ಯಕ್ಕೀಡಾದ ರೆಡ್ಡಿ ಮಗಳ ಮದುವೆ!]

ಅಧಿಕಾರಿ ಭೀಮಾ ನಾಯ್ಕ್ ಅಕ್ರಮ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದ್ದು, ಮೃತನ ಸಂಬಂಧಿಕರು ತನಿಖೆಗಾಗಿ ಆಗ್ರಹಿಸಿದ್ದಾರೆ. ಇದೇ ವೇಳೆ ಭೀಮಾ ನಾಯ್ಕ್ ಬಗ್ಗೆ ಅದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಕಪ್ಪು ಹಣ ಕೈ ಬದಲಿಸಿದ ಬಗ್ಗೆ ಸಮಗ್ರವಾದ ತನಿಖೆಯಾಗುವ ಸಾಧ್ಯತೆ ಇದೆ.
ಭೀಮಾ ನಾಯ್ಕ್ ಗೊತ್ತಿಲ್ಲ: ಭೀಮಾ ನಾಯ್ಕ್ ಯಾರು ಅಂತಲೇ ಗೊತ್ತಿಲ್ಲ. ನಮಗೆ ಅತನ ಪರಿಚಯವೇ ಇಲ್ಲ. ನಮಗೆ ಅಗದವರು ಯಾರೋ ಡೆತ್ ನೋಟ್ ನಲ್ಲಿ ಹೆಸರು ಸೇರಿಸಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರರೆಡ್ಡಿ ಬಳ್ಳಾರಿಯಲ್ಲಿ ಬುಧವಾರ ಹೇಳಿಕೆ ನೀಡಿದ್ದಾರೆ.
ತನಿಖೆ ಆಗಲಿ: ಏನು ತನಿಖೆ ಆಗುತ್ತದೋ ಆಗಲಿ. ನಮಗೆ ಭೀಮಾ ನಾಯ್ಕ್ ಗೂ ಯಾವುದೇ ಸಂಬಂಧವಿಲ್ಲ. ಆತ ಒಬ್ಬ ನೌಕರ. ಅಂತಹವರ ಜತೆ ವ್ಯವಹಾರ ನಡೆಸಬೇಕಾದ ಅಗತ್ಯ ಇಲ್ಲ. ನಮ್ಮ ಮೇಲೆ ಯಾಕೆ ಇಂಥ ಆರೋಪ ಬರುತ್ತಿದೆಯೋ ಗೊತ್ತಿಲ್ಲ. ಅವನ್ಯಾರೋ ಡ್ರೈವರ್. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಮ್ಮ ಹೆಸರು ಯಾಕೆ ತಂದನೋ? ಒಟ್ಟಿನಲ್ಲಿ ಎಲ್ಲ ಆರೋಪ ಸುಳ್ಳು ಎಂದು ಸಂಸದ ಬಿ.ಶ್ರೀರಾಮುಲು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications