ಕನ್ನಡ ಮಾತಾಡಿ ಕನ್ನಡಿಗರ ಮನಸ್ಸು ಗೆದ್ದ ವಾಷಿಂಗ್ಟನ್ "ಸುಂದರ"! , ಕೆ.ಎಲ್ ರಾಹುಲ್ ರಿಯಾಕ್ಷನ್ ಇಲ್ಲಿದೆ ವೈರಲ್ ವಿಡಿಯೋ!
ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಕರ್ನಾಟಕದ ಬಗ್ಗೆ ಹಾಗೂ ಕ್ರಿಕೆಟಿಗ ಕೆ.ಎಲ್ ರಾಹುಲ್ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಅವರು ಕನ್ನಡದಲ್ಲೇ ಮಾತನಾಡಿರುವುದು ಹಾಗೂ ಚೆನ್ನೈಗಿಂತ ಬೆಂಗಳೂರು ಚೆಂದ ಎನ್ನುವ ಬಗ್ಗೆ ಮಾತನಾಡಿರುವುದು ವೈರಲ್ ಆಗುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಕರ್ನಾಟಕಕ್ಕೆ ಭೇಟಿ ಕೊಟ್ಟಿರುವ ಅವರು ಕನ್ನಡದಲ್ಲೇ ಮಾತನಾಡಿರುವುದು ಸೊಗಸಾಗಿದೆ. ಈ ಚೆಂದದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಾಷಿಂಗ್ಟನ್ ಸುಂದರ್ ಅವರ ಕನ್ನಡದ ಹಾಡನ್ನೂ ಹಂಚಿಕೊಂಡಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಕ್ರಿಕೆಟಿಗ ವಾಷಿಂಗ್ಟನ್ ಸುದಂರ್ ಅವರು ಬ್ಲಾಗರ್ ಆಗಿ ಬದಲಾಗಿದ್ದಾರೆ. ಕರ್ನಾಟಕ ಮತ್ತು ಕನ್ನಡದ ಬಗ್ಗೆ ಮಾತನಾಡಿ, ಕನ್ನಡಗರಿಗೆ ಆಪ್ತರಾಗಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ಹಾಗೂ ನಂದಿಬೆಟ್ಟದ ಬಗ್ಗೆ ಅವರು ಮಾತನಾಡಿದ್ದಾರೆ. ಹುರಿದ ಜೋಳ ಮಾರುವವರೊಂದಿಗೆ "ಅಕ್ಕ ಕ್ರಿಕೆಟ್ ನೋಡ್ತೀರಾ" ಎಂದು ಸುಂದರ್ ಅವರು ಕನ್ನಡದಲ್ಲೇ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಇಲ್ಲ ಎಂದು ಮಹಿಳೆ ನಗುತ್ತಲ್ಲೇ ಉತ್ತರಿಸಿದ್ದಾರೆ.

ಬೆಂಗಳೂರಿನಲ್ಲಿ ನಾನು ಕಳೆದ ಕ್ಷಣಗಳು ಎನ್ನುವ ವಿಡಿಯೋವನ್ನು ಸುಂದರ್ ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ನಾನು ನಂದಿಬೆಟ್ಟಕ್ಕೆ ಬರಬೇಕು ಎಂದು ಕೊಂಡು ಬಂದಿದ್ದೀನಿ ಅಂತ ಹೇಳಿದ್ದಾರೆ. ಇನ್ನು ನಂದಿಬೆಟ್ಟದ ದೃಶ್ಯಗಳೊಂದಿಗೆ ಪ್ರೇಮಲೋಕದ ಹಾಡನ್ನೂ ಹಂಚಿಕೊಂಡಿದ್ದಾರೆ. ಈ ವೇಳೆ ಕೆ.ಎಲ್ ರಾಹುಲ್ ಅವರು ಚೆನ್ನೈಗಿಂತ ಬೆಂಗಳೂರು ಚೆನ್ನಾಗಿದೆ ಎಂದು ಹೇಳುತ್ತಿರುತ್ತಾರೆ. ಅದನ್ನು ನಾನು ಎಂದಿಗೂ ಒಪ್ಪಿಕೊಂಡಿರಲಿಲ್ಲ. ಇದನ್ನೆಲ್ಲ ನೋಡಿದ ಮೇಲೆ ಅವರ ಮಾತುಗಳಿಗೆ ಕ್ರೆಡಿಟ್ ಕೊಡಬೇಕು / ಅಥವಾ ಅವರು ಹೇಳುವುದರಲ್ಲಿ ಸತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆ.ಎಲ್ ರಾಹುಲ್ ಅವರ ಅನುಭವ ಹಾಗೂ ಬೆಂಗಳೂರಿನ ಬಗ್ಗೆ ಅವರಿಗೆ ಇರುವ ಅಭಿಮಾನ ದೊಡ್ಡದು ಎಂದಿದ್ದಾರೆ.
ಕೆ.ಎಲ್ ರಾಹುಲ್ ರಿಯಾಕ್ಷನ್: ಇನ್ನು ಈ ಪೋಸ್ಟ್ಗೆ ಕೆ.ಎಲ್ ರಾಹುಲ್ ಅವರು ಸಹ ರಿಯಾಕ್ಟ್ ಮಾಡಿದ್ದಾರೆ. "Nammuru Bengaluru 💕" ಎಂದು ಕೆ.ಎಲ್ ರಾಹುಲ್ ಅವರು ರಿಯಾಕ್ಟ್ ಮಾಡಿದ್ದಾರೆ. ಸುಂದರ್ ಅವರ ಕನ್ನಡದ ಮಾತುಗಳಿಗೆ ಮನಸೋತಿರುವ ಕನ್ನಡಿಗರು "ದೂರದಿಂತ ಬಂದಂತ ಸುಂದರಂಗಾ ಜಾಣ 😍" ಅಂತ ಕಮೆಂಟ್ ಮಾಡಿದ್ದಾರೆ. ಸುಂದರ ವ್ಲಾಗ್ 😍, ಕನ್ನಡದ ಮಾತು ಚೆನ್ನ, ಕನ್ನಡದ ನೆಲ ಚೆನ್ನ,ಕನ್ನಡ ಮಾತನಾಡುವವರು ಇನ್ನು ಚೆನ್ನ..♥️ ಎಂದು ಹಲವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications