ಇಸ್ಕಾನ್ನ ಕೃಷ್ಣ ಜನ್ಮಾಷ್ಟಮಿ ಪೂಜೆ ಆನ್ಲೈನ್ನಲ್ಲಿ ವೀಕ್ಷಿಸಿ
ಬೆಂಗಳೂರು, ಜುಲೈ 27: ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಶ್ರಾಮಣ ಮಾಸ ಬಂದಿದೆ. ಸಾಲು-ಸಾಲು ಹಬ್ಬಗಳು ಆರಂಭವಾಗಿವೆ. ಆಗಸ್ಟ್ ತಿಂಗಳಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಬರಲಿದ್ದು, ದೇವಾಲಯಕ್ಕೆ ಭೇಟಿ ನೀಡಲು ಭಕ್ತರು ಕಾತುರರಾಗಿದ್ದಾರೆ.
Recommended Video
ಕೋವಿಡ್ -19 ಪರಿಸ್ಥಿತಿ ಹಿನ್ನಲೆಯಲ್ಲಿ ಬೆಂಗಳೂರಿನ ಇಸ್ಕಾನ್ ದೇವಾಲಯಕ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತರಿಗೆ ಪ್ರವೇಶ ನೀಡುತ್ತಿಲ್ಲ. ಆದರೆ, ಭಕ್ತರು ನಿರಾಸೆಗೊಳ್ಳುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಪೂಜೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ.
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಹಾಗೂ ಹಾರೈಕೆಗಳನ್ನು ಜಗತ್ತಿನಾದ್ಯಂತ ಇರುವ ಲಕ್ಷಾಂತರ ಭಕ್ತರಿಗೆ ತಲುಪಿಸಲು ಯೋಜನೆ ರೂಪಸಿದ್ದೇವೆ ಎಂದು ಇಸ್ಕಾನ್ ಆಡಳಿತ ಮಂಡಳಿ ಹೇಳಿದೆ. ಆಗಸ್ಟ್ 11 ಹಾಗೂ 12ರಂದು ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ಆನ್ಲೈನ್ ಮೂಲಕ ಪ್ರಸಾರ ಮಾಡಲಾಗುತ್ತದೆ.

'ಸ್ವಾಗತಂ ಕೃಷ್ಣ ಲೈವ್' ಎಂಬ ಶೀರ್ಷಿಕೆಯಡಿ ಇಸ್ಕಾನ್ ಬೆಂಗಳೂರಿನ ಎಲ್ಲಾ ಸಾಮಾಜಿಕ ಜಾಲತಾಣದ ಮೂಲಕ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತದೆ. ಜನರು ಮನೆಯಲ್ಲಿಯೇ ಕುಳಿತು ದೇವಾಲಯದಲ್ಲಿ ನಡೆಯುವ ಕಾರ್ಯಕ್ರಮಗಳನ್ನು ನೋಡಬಹುದು.
ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳನ್ನು ರೆಕಾರ್ಡ್ ಮಾಡಿ ಯೂಟ್ಯೂಬ್ನಲ್ಲಿ ಪ್ರಸಾರ ಮಾಡಲಾಗುತ್ತದೆ. ಅಭಿಷೇಕ, ಪೂಜೆ ನೇರವಾಗಿ ಲೈವ್ನಲ್ಲಿ ಲಭ್ಯವಾಗಲಿದೆ.
ಮನೆಯಲ್ಲಿಯೇ ಕುಳಿತುಕೊಂಡು ಭಕ್ತರು ಮುಂಜಾನೆ ನಡೆಯುವ ಶ್ರೀ ಶ್ರೀ ರಾಧಾಕೃಷ್ಣಚಂದ್ರ ಸ್ವಾಮಿ ಅವರ ನೌಕಾ ವಿಹಾರ (ತೆಪ್ಪೋತ್ಸವ) ವೀಕ್ಷಿಸಬಹುದು. ಅಭಿಷೇಕ. ಪಂಚಗವ್ಯ, ಪಂಚಾಮೃತ, ಔಷಧೋಪಚಾರ, ಫಲರಸ, ಗಂಧೋದಕಾದಿ ಅಭಿಷೇಕಗಳು. ದೀಪೋತ್ಸವ, ಪುಷ್ಪವೃಷ್ಟಿ, ಚಾಮರ ಸೇವೆ ಹಾಗೂ ಉಯ್ಯಾಲೆ ಸೇವೆಯ ನೇರ ಪ್ರಸಾರವಾಗಲಿದೆ.
ಅನೂಪ್ ಜೋಲಾಟ ಅವರಿಂದ ಸಂಗೀತ ಕಛೇರಿ, ಅನುರಾಧಾ ಪೌಡ್ವಾಲ್ ಅವರಿಂದ ಸಂಗೀತ ಕಾರ್ಯಕ್ರಮ, ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಮೊಮ್ಮಕ್ಕಳಿಂದ ಸಂಗೀತ ಕಛೇರಿ, ಅಗಂ ತಂಡದಿಂದ ಸಂಗೀತ ಕಾರ್ಯಕ್ರಮ, ಇಸ್ಕಾನ್ ಬೆಂಗಳೂರಿನ ಸ್ಫೂರ್ತಿದಾಯಕ ಪಯಣ ಮತ್ತು ಸಂದೇಶಗಳ ಬಗ್ಗೆ ಸಂವಾದ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಆನ್ ಲೈನ್ನಲ್ಲಿ ಲಭ್ಯವಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications