ಶಾಲಾ ಮಕ್ಕಳಿಗೆ ಖಂಡಗ್ರಾಸ ಚಂದ್ರಗ್ರಹಣ ವೀಕ್ಷಣೆ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು, ಜನವರಿ 29: ಜನವರಿ 31 ರಂದು ಸಂಭವಿಸುವ ಪೂರ್ಣ ಚಂದ್ರಗ್ರಹಣವನ್ನು ಸರ್ಕಾರಿ ಶಾಲಾ ಮಕ್ಕಳು ಪೋಷಕರೊಡನೆ ಕಡ್ಡಾಯವಾಗಿ ವೀಕ್ಷಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಜನವರಿ 31 ರಂದು ಸಂಜೆ6.30 ರ ಸಮಯದಲ್ಲಿ ಪೂರ್ಣಚಂದ್ರಗ್ರಹಣ ಸಂಭವಿಸುತ್ತದೆ. ಈ ಗ್ರಹಣದ ನೇರ ವೀಕ್ಷಣೆಯಿಂದ ಕಣ್ಣುಗಳಿಗೆ ಯಾವುದೇ ರೀತಿಯ ಅಪಾಯ ಸಂಭವಿಸುವುದಿಲ್ಲ. ಈ ಸಂದರ್ಭದಲ್ಲಿ ಕೆಂಪು ಛಾಯೆಯ ಚಂದ್ರ ಕರ್ನಾಟಕದೆಲ್ಲಡೆ ಗೋಚರಿಸುತ್ತದೆ.
ಪ್ರಕೃತಿಯ ಈ ಚಿತ್ತಾಕರ್ಷಕ ಬೆಳಕು ನೆರಳಿನಾಟವನ್ನು ಶಾಲಾ ವಿದ್ಯಾರ್ಥಿಗಳು, ಪೋಷಕರು ವೀಕ್ಷಿಸಬೇಕು. ಶಿಕ್ಷಕರ ಮೂಲಕ ತಿಳಿವಳಿಕೆ ನೀಡುವಂತೆ ಕೋರಿ ಭಾರತೀಯ ಖಬೌತ ಸಂಸ್ಥೆಯ ವಿಜ್ಞಾನಿ ಪ್ರೊ. ಪ್ರಜ್ವಲ್ ಶಾಸ್ತ್ರಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯು ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು.

ಜನವರಿ ೩೧ರಂದು ಪೂರ್ಣ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ತಾಮ್ರ ಬಣ್ಣ ತಾಳುವುದರಿಂದ ಕರ್ನಾಕಾದ್ಯಂತ ತಾಮ್ರ ಚಂದ್ರೋದಯವಾಗಲಿದೆ. ಈ ಗ್ರಹಣವು ಸೂಪರ್ ಮೂನ್ ದಿನದಂದು ಸಂಭವಿಸುತ್ತದೆ. ಈ ಅಪರೂಪದ ಚಂದ್ರಗ್ರಹಣವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ತಮ್ಮ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ವೀಕ್ಷಿಸುವಂತೆ ಆದೇಶ ಹೊರಡಿಸಿದೆ.
ಗ್ರಹಣವು ಸಂಜೆ ಚಂದ್ರೋದಯದ ಸಂದರ್ಭದಲ್ಲಿ ಸಂಭವಿಸುವುದರಿಂದ ಸಾಧ್ಯವಿರುವೆಡೆ ಶಾಲಾ ಶಿಕ್ಷಕರು ತಮ್ಮ ಶಾಲಾ ವಿದ್ಯಾರ್ಥಿಗಳು, ಸಮುದಾಯ ಮತ್ತು ಎಸ್ ಡಿ ಎಂಸಿ ಯವರೊಂದಿಗೆ ವೀಕ್ಷಿಸಬೇಕು. ಈ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡುವುದರ ಜತೆಗೆ ಕೆಲವು ಖಗೋಳದ ವಿದ್ಯಾಮಾನಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications