Holi Festival: ಹಬ್ಬದಾಚರಣೆಗೆ ಬೆಂಗಳೂರು ಜಲಮಂಡಳಿ ಸೂಚಿಸಿದ ನಿರ್ಬಂಧಗಳೇನು?
ಬೆಂಗಳೂರು, ಮಾರ್ಚ್ 20: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೋಳಿ ಹಬ್ಬ (Holi Festival) ಆಚರಣೆಗೆ ಸಜ್ಜಾಗುತ್ತಿದೆ. ಕ್ಯಾಲೆಂಡರ್ ಪ್ರಕಾರ ಮಾರ್ಚ್ 24ರಂದು ಹೋಳಿ ಹಬ್ಬ ಇದೆ. ಕೆಲವೆಡೆ ಶುಕ್ರವಾರದಿಂದಲೇ ಸಂಭ್ರಮಾಚರಣೆ ಆರಂಭವಾಗುತ್ತಿದೆ. ಈ ಕಾರಣಕ್ಕೆ ನಗರಕ್ಕೆ ಅನ್ವಯವಾಗುವಂತೆ ಬೆಂಗಳೂರು ಜಲಮಂಡಳಿ (BWSSNB) ಖಡಕ್ ಸೂಚನೆಗಳನ್ನು ನಿಡಿದೆ.
ಬೆಂಗಳೂರು ಹೋಳಿ ಹಬ್ಬ ಕುರಿತು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅವರು ಸಾರ್ವಜನಿಕ ಸಲಹಾ ರೂಪದ ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿ, ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ.

ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿರುತ್ತದೆ. ನೀರು ಉಳಿಸಬೇಕಿದೆ.
ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಬೇಡ
ಹೋಳಿ ಹಬ್ಬ ಸಾಂಸ್ಕೃತಿಕವಾದ ಆಚರಣೆಯ ಹಬ್ಬ. ಇದನ್ನ ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಸಾಂಸ್ಕೃತಿವಾಗಿ ಆಚರಣೆ ಮಾಡುವುದಕ್ಕೆ ಯಾವುದೇ ನಿಷೇಧ ಹೇರುವುದಿಲ್ಲ. ಆದರೆ, ಈ ಸಂದರ್ಭದಲ್ಲಿ ಮನೋರಂಜನೆಯಾಗಿ ವಾಣಿಜ್ಯ ಉದ್ದೇಶದಿಂದ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಆಯೋಜಿಸುವುದು ಬೇಡ ಎಂದು ಹೇಳಿದ್ದಾರೆ.
ಹಬ್ಬದ ಸಂದರ್ಭದಲ್ಲಿ ನೀವು ಮನರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವಂತಹ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಗಳಿಗೆ ಸಾರ್ವಜನಿಕ ಹಿತದೃಷ್ಠಿಯಿಂದ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸಬಾರದು. ಜಲಮಂಡಳಿಯ ಸೂಚನೆ ಪಾಲಿಸುವ ಮೂಲಕ ನೀರು ರಕ್ಷಣೆಗೆ ಮನವಿ ಮಾಡಿದ್ದೇವೆ ಎಂದರು.

ಅಂತರ್ಜಲ ಕುಸಿತ: ಕುಡಿಯುವ ನೀರಿಗೆ ಸಮಸ್ಯೆ
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿ ತಿಂಗಳು ಕಳೆಯುತ್ತಾ ಬಂದರೂ ಸಹ ಇನ್ನೂ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಕಾವೇರಿ ನೀರು ಪೂರೈಕೆಗೆ ಯಾವುದೇ ತೊಂದರೆ ಇಲ್ಲದಾದರೂ ಸಹಿತ, ಅಂತರ್ಜಲ ಕುಸಿತದಿದೆ. ಇದರಿಂದ ಬೋರ್ವೆಲ್ ನಲ್ಲಿ ನೀರು ಬರದೇ ಸಮಸ್ಯೆ ಉಂಟಾಗಿದೆ.
ಮಹಾನಗರದಲ್ಲಿ ಕಾವೇರಿ ನೀರಿನ ಜೊತೆಗೆ ಬೋರ್ವೆಲ್ ನೀರಿನ ಮೇಲಿನ ಅವಲಂಬನೆ ಸಾಕಷ್ಟು ಪ್ರಮಾಣದಲ್ಲಿ. ಇತ್ತ ನಿರೀಕ್ಷಿತ ಮಳೆ ಆಗದೇ ಜಲಾಶಯಗಳು ಬತ್ತಿ ಹೋಗಿವೆ. ಸದ್ಯ ನದಿಪಾತ್ರದಲ್ಲಿ ಇರುವ ನೀರು ಈ ಇಡೀ ಬೇಸಿಗೆಗೆ ಸಾಕಾಗುವುದು ಅನುಮಾನ. ಬೇಸಿಗೆ ಆರಂಭದಲ್ಲಿಯೇ ನೀರಿಗೆ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ.
ಆದ್ದರಿಂದ ಇರುವ ನೀರನ್ನು ಸುಸೂತ್ರವಾಗಿ, ಸಮರ್ಪಕವಾಗಿ ಬಳಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಹೋಳಿ ಹಬ್ಬದ ನೆಪದಲ್ಲಿ ಸುಖಾ ಸುಮ್ಮನೇ ನೀರು ಪೋಲಾಗುವುದು ಬೇಡ ಎಂದು ಜಲಮಂಡಳಿ ಬೆಂಗಳೂರಿನ ಜನರಿಗೆ ಮನವಿ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications