Bengaluru Toilets: ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ಮುನ್ನ ಜೇಬು ನೋಡಿಕೊಳ್ಳಿ!
ಬೆಂಗಳೂರು, ಏಪ್ರಿಲ್. 17: ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಆದರೆ, ಅದು ನೆಲ ನೆನೆಯುವಂತೆ ಮಾತ್ರ. ತಿಂಗಳುಗಳಿಂದ ಬಾಯ್ತೆರೆದಿರುವ ಭೂಮಿಯ ಒಡಲು ತುಂಬಿಸಲು ಈ ಮಳೆ ಯಾವುದೇ ಮೂಲೆಗೂ ಸಾಕಾಗುವುದಿಲ್ಲ. ಮಳೆರಾಯನ ಆಗಮನವನ್ನೇ ಕಾಯುತ್ತಿರುವ ರಾಜ್ಯದಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗಿ ಎದುರಿಸುತ್ತಿರುವುದು ರಾಜಧಾನಿ ಬೆಂಗಳೂರು.
ನೀರಿಗಾಗಿ ಪರದಾಡುತ್ತಿರುವ ಬೆಂಗಳೂರಿನಲ್ಲಿ ಈಗ ಸಾರ್ವಜನಿಕ ಶೌಚಾಲಯಗಳ ಮೇಲೂ ನೀರಿನ ಕೊರತೆ ಪರಿಣಾಮ ಬೀರಿದೆ. ಹೀಗಾಗಿಯೇ ಸಾರ್ವಜನಿಕ ಶೌಚಾಲಯ ಬಳಕೆಗೆ ಹೋಗುವಾಗ ನಿಮ್ಮ ಜೇಬು ಕೂಡ ನೋಡಿಕೊಳ್ಳಬೇಕು. ಏಕೆಂದರೆ, ಈಗ ಈ ಶೌಚಾಲಯಗಳ ಬಳಕೆಗೆ ಇರುವ ದರ ಕೂಡ ದುಪ್ಪಟ್ಟಾಗಿದೆ.

ಸಾರ್ವಜನಿಕ ಶೌಚಾಲಯ ಬಳಕೆಯ ದರ ಏರಿಕೆ!
ನೀರಿನ ಬಿಕ್ಕಟ್ಟು ಎದುರಾಗುವವರೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ವಹಿಸುವ ಸಾರ್ವಜನಿಕ ಶೌಚಾಲಯಗಳಲ್ಲಿ ಗ್ರಾಹಕರಿಗೆ ಮೂತ್ರ ವಿಸರ್ಜನೆಗೆ 2 ರೂಪಾಯಿ ಮತ್ತು ಮಲವಿಸರ್ಜನೆಗೆ 5 ರೂಪಾಯಿ ದರ ವಿಧಿಸಲಾಗುತ್ತಿತ್ತು. ಆದರೆ, ನೀರಿನ ಕೊರತೆ ಕಾಣಿಸಿಕೊಂಡ ಬಳಿಕ ಅವುಗಳನ್ನು ನಿರ್ವಹಿಸುವವರು ದುಪ್ಪಟ್ಟು ಮೊತ್ತಕ್ಕೆ ಬೇಡಿಕೆಯಿರುವುದರಿಂದ ಹೆಚ್ಚುವರಿ ಹಣ ನೀಡಬೇಕಾಗುತ್ತದೆ.
ಮೂತ್ರ ವಿಸರ್ಜನೆಗೆ 2 ರೂಪಾಯಿ ಮತ್ತು ಮಲವಿಸರ್ಜನೆಗೆ 5 ರೂಪಾಯಿ ಇದ್ದ ದರ ನಗರದಲ್ಲಿ ನೀರಿನ ಕೊರತೆ ಕಾಣಿಸಿಕೊಂಡಾಗಿನಿಂದ ದರಗಳು 5 ಮತ್ತು 10 ರೂಪಾಯಿಗೆ ಏರಿಕೆಯಾಗಿದೆ. ಇದಲ್ಲದೆ, ಸಣ್ಣ ಬಕೆಟ್ಗಳಲ್ಲಿ ನೀರು ನೀಡಲಾಗುತ್ತಿದ್ದು, ಹೆಚ್ಚುವರಿ ನೀರಿಗೆ ಹೆಚ್ಚುವರಿ ಹಣ ನೀಡಬೇಕಾಗುತ್ತದೆ!.
ಹೆಚ್ಚುವರಿ ಶುಲ್ಕ ವಿಧಿಸಲು ಕಾರಣ ಬೋರ್ವೆಲ್ಗಳು ಮತ್ತು ನೀರಿನ ಕೊರತೆ ಎಂದು ಶೌಚಾಲಯ ನಿರ್ವಾಹಕರು ದೂರುತ್ತಾರೆ. ನೀರಿನ ಟ್ಯಾಂಕರ್ಗಳು ಬೆಲೆಗಳನ್ನು ಹೆಚ್ಚಿಸಿವೆ. ಈ ಸಾರ್ವಜನಿಕ ಶೌಚಾಲಯಗಳನ್ನು ನಡೆಸುವ ಖರ್ಚು ವೆಚ್ಚ ಕೂಡ ಹೆಚ್ಚಾಗಿವೆ. ಹೀಗಾಗಿ ದರ ಏರಿಕೆ ಮಾಡಾಗಿದೆ ಎಂದಿದ್ದಾರೆ.
ಶುಲ್ಕ ಏರಿಕೆಯಾಗಿದ್ದರೂ ಸಾರ್ವಜನಿಕ ಶೌಚಾಲಯಗಳು ಕೊಳಕು, ದುರ್ವಾಸನೆಯಿಂದ ಕೂಡಿವೆ ಎಂದು ಬಿಎಂಟಿಸಿ ಬಸ್ ಚಾಲಕರೊಬ್ಬರು ಆರೋಪಿಸಿದ್ದಾರೆ. ಕೆಲವು ಶೌಚಾಲಯಗಳಲ್ಲಿ ಸ್ನಾನ ಮಾಡುವ ಸೇವೆಗಳನ್ನು ನಿಲ್ಲಿಸಿದರೆ, ಕೆಲವು ನೀರಿನ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ ಎಂದು ಮಾಹಿತಿ ನೀಡಿದ್ದಾರೆ.
ಮೆಜೆಸ್ಟಿಕ್ನಲ್ಲಿ ಸಾರ್ವಜನಿಕ ಶೌಚಾಲಯ ನಡೆಸುತ್ತಿರುವ ವ್ಯಕ್ತಿಯೊಬ್ಬರನ್ನು ಉಲ್ಲೇಖಿಸಿರುವ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್, "ನಮಗೆ ದಿನಕ್ಕೆ ಮೂರು ಟ್ಯಾಂಕರ್ ನೀರು ಬೇಕಾಗುತ್ತದೆ. ಪ್ರತಿ ಟ್ಯಾಂಕರ್ ನೀರಿನ ಬೆಲೆ 5,000 ರೂಪಾಯಿಯಿ ಇದೆ. ಇದು ನಮ್ಮ ಗಳಿಕೆಯ ಮೇಲೆ ಪರಿಣಾಮ ಬೀರಿದೆ. ಅದರಲ್ಲಿ ಹೆಚ್ಚಿನವು ನೀರಿನ ವೆಚ್ಚವನ್ನು ಸರಿದೂಗಿಸಲು ಬಳಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಮಾಹಿತಿ ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications