ಶಾಲೆಯಲ್ಲಿ ನೀರಿಲ್ಲ: ಮಕ್ಕಳಿಗೆ ರಜೆ ಘೋಷಣೆ
ಬನ್ನೇರ್ಘಟ್ಟ ಮಾರ್ಚ್ 7: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಆದರೀಗ ಈ ಸಮಸ್ಯೆ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೂ ಸಹ ಹರಡಿದೆ. ಹೀಗೆ ನೀರಿಲ್ಲ ಎಂಬ ಕಾರಣಕ್ಕೆ ಶಾಲೆಯನ್ನೇ ಮಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು... ನೀರಿನ ಸಮಸ್ಯೆಯಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಶಾಲೆವೊಂದು ಮಂಗಳವಾರದಿಂದ ಮುಚ್ಚಿದೆ. ಸುಮಾರು 100 ವಿದ್ಯಾರ್ಥಿಗಳಿರುವ ಖಾಸಗಿ ಶಾಲೆಯ ಅಭಿಕ್ ಅಕಾಡೆಮಿಯ ಆಡಳಿತ ಮಂಡಳಿಯು ಶಾಲೆಯಲ್ಲಿ ನೀರಿನ ಕೊರತೆಯ ಕಾರಣ ಮಾರ್ಚ್ 5 ರಿಂದ 10 ರವರೆಗೆ ರಜೆ ಘೋಷಿಸಿದೆ.

'ಶಾಲೆಯ ದೈನಂದಿನ ಬಳಕೆಗೆ ನಾವು ಬೋರ್ವೆಲ್ ನೀರನ್ನೇ ಅವಲಂಬಿಸಿದ್ದೇವೆ. ಆದರೆ ಈಗ ಆ ನೀರು ಸಂಪೂರ್ಣ ಬತ್ತಿ ಹೋಗಿದೆ. ಟ್ಯಾಂಕರ್ಗಳಿಂದ ನೀರು ಖರೀದಿಸಲು ನಾವು ಸಿದ್ಧರಿದ್ದೇವೆ. ಆದರೆ ಹೆಚ್ಚಿನ ಬೆಲೆಗೆ ನಾವು ಅದನ್ನು ಖರೀದಿಸಲು ಸಿದ್ಧರಿಲ್ಲ. ಆದ್ದರಿಂದ ನಾವು ನೀರಿನ ವ್ಯವಸ್ಥೆ ಮಾಡುವವರೆಗೂ ಶಾಲೆಯನ್ನು ಒಂದು ವಾರ ಮುಚ್ಚಿದ್ದೇವೆ. ಇದರ ಹೊರತುಪಡಿಸಿ ಬೇರೆ ದಾರಿಯಿಲ್ಲ' ಎಂದು ಶಾಲೆಯ ಸಿಬ್ಬಂದಿಯೊಬ್ಬರು ಹೇಳಿದರು.
ಹೊಸಕೆರೆಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಏಳು ತಿಂಗಳಿಂದ ನೀರಿನ ಸಮಸ್ಯೆ ಆರಂಭವಾಗಿದೆ. "ಶಾಲೆಯಲ್ಲಿ ಪ್ರತ್ಯೇಕ ಬೋರ್ವೆಲ್ ಇದೆ. ಆದರೆ ಅದು 2023ರ ಆಗಸ್ಟ್ನಲ್ಲಿ ಬತ್ತಿಹೋಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅದನ್ನು ಪುನಃ ಕೊರೆಸಿದೆ. ಆದರೆ ಅದು ಒಂದು ತಿಂಗಳಲ್ಲಿ ಬತ್ತಿಹೋಗಿದೆ. ಅಂದಿನಿಂದ ನಾವೇ ಟ್ಯಾಂಕರ್ ನೀರು ಖರೀದಿಸುತ್ತಿದ್ದೇವೆ. ಆದರೆ ಈಗ ಬೆಲೆಗಳು ಹೆಚ್ಚಾದಂತೆ ಅಷ್ಟು ಹಣ ಕೊಟ್ಟು ನೀರನ್ನು ನಾವು ಖರೀದಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಇಲ್ಲಿ 350 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಕುರಿತು ಇಲಾಖೆ ಅಧಿಕಾರಿಗಳಿಗೆ ಹಾಗೂ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ'' ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಎಂ ಗಂಗಮ್ಮ ತಿಳಿಸಿದರು.
ಈಗ ಸ್ಥಳೀಯ ಸಮುದಾಯದವರು ಶಾಲೆಗೆ ನೀರಿನ ವ್ಯವಸ್ಥೆ ಮಾಡಲು ಸಾಮಾಜಿಕ ಮಾಧ್ಯಮ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. "ನಮ್ಮ ಪ್ರಸ್ತಾವನೆಯು ಸರಳವಾದರೂ ಪರಿಣಾಮಕಾರಿಯಾಗಿದೆ: ನೀರಿನ ಸಮಸ್ಯೆ ಇರುವ ಶಾಲೆಗಳಲ್ಲಿ ವಾರಕ್ಕೆ ಎರಡು ಬಾರಿಯಾದರೂ ನೀರಿನ ಟ್ಯಾಂಕ್ ಪೂರೈಕೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಈ ಉದಾತ್ತ ಕಾರ್ಯದಲ್ಲಿ ನಮ್ಮೊಂದಿಗೆ ಸೇರಲು ಮತ್ತು ಜಿಎಚ್ಪಿಎಸ್ ಹೊಸಕೆರೆಹಳ್ಳಿಯಲ್ಲಿ ನೀರಿನ ಸಮಸ್ಯೆಗೆ ಸುಸ್ಥಿರ ಪರಿಹಾರವನ್ನು ಒದಗಿಸಲು ಕೊಡುಗೆ ನೀಡುವಂತೆ ನಾವು ನಿಮ್ಮನ್ನು ಒತ್ತಾಯಿಸುತ್ತೇವೆ, "ಎಂದು ಅಭಿಯಾನವು ಮನವಿ ಮಾಡಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications