ಬೆಂಗಳೂರಿನ ನೀರಿನ ಸಮಸ್ಯೆ ಶೀಘ್ರವೇ ಕೊನೆ, ಇಲ್ಲಿದೆ ಮಾಹಿತಿ!
ಬೆಂಗಳೂರು,ಜು.11: ಬೆಂಗಳೂರಿನಲ್ಲಿ ಕುಡಿಯುವ ನೀರು ನಿಲ್ಲದ ಸಮಸ್ಯೆಯಾಗಿದೆ. ಬೆಂಗಳೂರಿಗೆ ನೀರು ಒದಗಿಸುವ ಸವಾಲು ದಿನ ದಿನಕ್ಕೆ ಬೆಳೆಯುತ್ತಲೇ ಇದೆ. ಹಾಗಾಗಿ ಮುಂದಿನ 30 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಜಲಮಂಡಳಿ ಬೆಂಗಳೂರಿಗೆ ಹೆಚ್ಚುವರಿ ನೀರು ತರುವ ಪ್ರಯತ್ನಕ್ಕೆ ಮುಂದಾಗಿದೆ. ಈಗ ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಂಡಿದೆ.
ಜಪಾನ್ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆಯಿಂದ ಜಲಮಂಡಳಿ ಒಟ್ಟು 5500 ಕೋಟಿ ಸಾಲ ಪಡೆದಿದ್ದು, ಇದರಲ್ಲಿ 2940 ಕೋಟಿ ಹಣವನ್ನು ಕಾವೇರಿ 5ನೇ ಹಂತದ ಯೋಜನೆಗೆ ಹಾಗೂ ಒಳಚರಂಡಿ, ಪೈಪ್ಲೈನ್, ಕಾಮಗಾರಿಗಳಿಗೆ ಬಳಸಲು ಉದ್ದೇಶಿಸಲಾಗಿದೆ. ಯೋಜನೆ ಪೂರ್ಣಗೊಳಿಸಲು ಜಪಾನ್ ಸಂಸ್ಥೆ 2023ರ ಮಾರ್ಚ್ ಇಲ್ಲವೇ ಆಗಸ್ಟ್ವರೆಗೆ ಗಡುವು ನೀಡಿದೆ. ಆದರೆ ಕಾಮಗಾರಿ ಕೆಲಸ ತ್ವರಿತಗತಿಯಲ್ಲಿ ಮುಗಿಸುತ್ತಿರುವ ಬೆಂಗಳೂರು ಜಲಮಂಡಳಿಯು ಇದೇ ಡಿಸೆಂಬರ್ ವೇಳೆಗೆ ಎಲ್ಲ ಕೆಲಸ ಮುಗಿಸುವ ಗುರಿ ಹಾಕಿಕೊಂಡಿದೆ. ಹೀಗಾಗಿ ಮುಂದಿನ ಆರೇ ಬೆಂಗಳೂರಿಗೆ 775 ಎಂಎಲ್ಡಿ ನೀರು ಲಭ್ಯವಾಗಲಿದೆ.

ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಕೆರೆಕಟ್ಟೆಗಳು ತುಂಬುತ್ತಿವೆ. ಅಂತರ್ಜಲ ಮಟ್ಟವೂ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯ ಇರುವ 1.30 ಕೋಟಿ ಜನರಿಗೆ ನಿತ್ಯ ಸುಮಾರು 1430ಕ್ಕೂ ಅಧಿಕ ದಶಲಕ್ಷ ಲೀಟರ್(ಎಂಎಲ್ಡಿ) ನೀರನ್ನು ಬೆಂಗಳೂರು ಜಲಮಂಡಳಿ ಪೂರೈಸುತ್ತಿದೆ. 2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿದ ಒಟ್ಟು 225 ಚದರ ಕಿಲೋಮಿಟರ್ನ 110 ಹಳ್ಳಿಗಳ ಜನರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದ ಜೊತೆಗೆ ಭವಿಷ್ಯದಲ್ಲಿ ಹೆಚ್ಚಾಗಲಿರುವ ಜನಸಂಖ್ಯೆ ಆಧಾರದಲ್ಲಿ ಜಲಮಂಡಳಿಯು ಕಾವೇರಿ ನೀರಿನ ಐದನೇ ಹಂತದ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಯೋಜನೆಯಡಿ ಮುಂದಿನ 30 ವರ್ಷಕ್ಕೆ ಬೇಕಾಗುವಷ್ಟು ಹೆಚ್ಚುವರಿ 775 ಎಂಎಲ್ಡಿ ನೀರು ಬೆಂಗಳೂರಿಗೆ ಲಭ್ಯವಾಗಲಿದೆ.

ಬೆಂಗಳೂರು ನಗರಕ್ಕೆ ಸೇರ್ಪಡೆಗೊಂಡ ಹಳ್ಳಿಗಳು ಸೇರಿದಂತೆ ನಗರದಲ್ಲಿ2049ರ ವೇಳೆಗೆ 50 ಲಕ್ಷ ಜನಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಅಷ್ಟು ಜನರಿಗೆ ಲಭ್ಯವಾಗುವ ನೀರನ್ನು ಏದನೇ ಹಂತದ ಯೋಜನೆಯಡಿ ಪೈಪ್ಲೈನ್ಗಳ ಮೂಲಕ ನೀರು ಶುದ್ದೀಕರಣ ಘಟಕಗಳಿಗೆ ಹರಿಸಿ ನೆಲಮಟ್ಟದ ನೀರು ಸಂಗ್ರಹಾಗಾರಗಳ ಮೂಲಕ ಮನೆ ಮನೆಗೆ ನೀರು ಪೂರೈಸಲಾಗುವುದು. ಈ ಸಂಬಂಧ ಈಗಾಗಲೇ 2686 ಕಿಮೀ. ಕೊಳವೆ ಜೋಡಣಾ ಕಾರ್ಯ ಹಮ್ಮಿಕೊಂಡಿತ್ತು. ಏಳು ಕಡೆಗಳಲ್ಲಿ 260 ಎಂಎಲ್ಡಿ ಸಾಮಾರ್ಥ್ಯದ ಜಲಸಂಗ್ರಹಾರಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ.
Recommended Video
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications