Water Supply Cut: ಬೆಂಗಳೂರಿನಲ್ಲಿ ಜೂನ್ 4,5 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು ಮೇ 30: ಲೋಕಸಭಾ ಚುನಾವಣೆ ಫಲಿತಾಂಶದ ದಿನ (ಜೂನ್ 4) ಬೆಂಗಳೂರಿನಲ್ಲಿ (Bengaluru) ನೀರು ವ್ಯತ್ಯಯವಾಗಲಿದೆ. ಕಾವೇರಿ 5ನೇ ಹಂತದ (Cauvery 5th Stage) ಕಾಮಗಾರಿಯಿಂದಾಗಿ ಇಡೀ ನಗರಕ್ಕೆ ಇದರ ಎಫೆಕ್ಟ್ ಆಗಲಿದೆ.
ಕಾವೇರಿ-5ನೇ ಹಂತದ ಅನುಷ್ಠಾನದ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 4 ಹಾಗೂ 5 ರಂದು ಇಡೀ ನಗರದಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ (Bangalore Water Supply and Sewerage Board) ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಜಲಮಂಡಳಿಯು ಜೂನ್ 4 ರಂದು ಒಟ್ಟು ಆರು ಕಡೆ ಕಾಮಗಾರಿಯನ್ನು ಎರಡು ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಿದೆ. ಕಾಮಗಾರಿ ನಡೆಯುವ ಅವಧಿಯಲ್ಲಿ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ನಂತರ ಜೂನ್ 5 ರಂದು ನಗರದಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಮೊದಲ ಹಂತದಲ್ಲಲಿ ಕಾವೇರಿ 1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 4 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕಾಮಗಾರಿ ನಡೆಸುವುದರಿಂದ 12 ಗಂಟೆ ನೀರು ಪೂರೈಕೆ ಇರುವುದಿಲ್ಲ.

ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್ನಲ್ಲಿ ಅದೇ ದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಸಹಕರಿಸುವಂತೆ ಜನಮಂಡಳಿ ಮನವಿ ಮಾಡಿದೆ.
ಕಾವೇರಿ 5ನೇ ಹಂತದ ಕಾಮಗಾರಿ
ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡಲು ಸಿದ್ಧತೆ ನಡೆಸಿದೆ. 110 ಗ್ರಾಮಗಳಿಗೆ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಕಾವೇರಿ-5ನೇ ಹಂತದ ಕಾಮಗಾರಿಯನ್ನು ಹಾರೋಹಳ್ಳಿ ಬಳಿ ಬುಧವಾರ ಅವರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, "ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಕೆಲವೇ ವಾರಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು ನೀರು ಸರಬರಾಜು ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ನೀರಿನ ಸಮರ್ಪಕ ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸುವುದು ಹಾಗೂ ಹೊಸ ಕನೆಕ್ಷನ್ಗಳನ್ನು ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕಾಗಿದೆ" ಎಂದರು.
"5ನೇ ಹಂತದ ಯೋಜನೆಯಿಂದ ಬೆಂಗಳೂರು ನಗರಕ್ಕೆ 750 ಎಂ.ಎಲ್.ಡಿಯಷ್ಟು ಹೆಚ್ಚು ನೀರು ಲಭ್ಯವಾಗಲಿದೆ. ಇದನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು 110 ಗ್ರಾಮಗಳಲ್ಲಿ ಎಲ್ಲರೂ ಕಾವೇರಿ ನೀರಿನ ಸಂಪರ್ಕ ಪಡೆಯಲು ಪ್ರೋತ್ಸಾಹಿಸಬೇಕು" ಎಂದರು.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications