Water Supply Cut: ಬೆಂಗಳೂರಿನಲ್ಲಿ ಎರಡು ದಿನ ಕಾವೇರಿ ನೀರು ಸರಬರಾಜು ವ್ಯತ್ಯಯ
ಬೆಂಗಳೂರು, ಜೂನ್. 03: ಸಿಲಿಕಾನ್ ಸಿಟಿ ಬೆಂಗಳೂರು ಇಷ್ಟು ದಿನ ನೀರಿನ ಬಿಕ್ಕಟ್ಟಿನಿಂದ ಸುದ್ದಿಯಲ್ಲಿತ್ತು. ಈಗ ಮಳೆ ಅನಾಹುತಗಳಿಂದ ಸುದ್ದಿಯಾಗುತ್ತಿದೆ. ಇದರ ನಡುವೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BSWWB) ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ವ್ಯತ್ಯಯವಾಗುವ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಜೂನ್ 6 ಮತ್ತು ಜೂನ್ 7, 2024 ರಂದು ನಗರದ ಹಲವಾರು ಭಾಗಗಳಲ್ಲಿ 24 ಗಂಟೆಗಳ ಕಾವೇರಿ ನೀರು ಸರಬರಾಜು ಕಡಿತವನ್ನು ಘೋಷಿಸಿದೆ. ಕಾವೇರಿ ನೀರು ಸರಬರಾಜು ಘಟಕಗಳನ್ನು ಸ್ಥಗಿತಗೊಳಿಸುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ನೀರು ಸರಬರಾಜು ವ್ಯತ್ಯಯಕ್ಕೆ ಮುಖ್ಯ ಕಾರಣವೆಂದರೆ ಕಾವೇರಿ 5ನೇ ಹಂತದ ಯೋಜನೆಯಲ್ಲಿ ಕೆಲಸ ಆರಂಭವಾಗಿದೆ ಈ ಕಾರಣಕ್ಕಾಗಿ, ಮಂಡಳಿಯು ತನ್ನ ಎಲ್ಲಾ ಪಂಪಿಂಗ್ ಸ್ಟೇಷನ್ಗಳನ್ನು ಜೂನ್ 6 ರಂದು ಮುಚ್ಚಲಿದೆ. ಈ ಬಗ್ಗೆ ನೀರು ಕೊರತೆ ಅನುಭವಿಸಲಿರುವ ಪ್ರದೇಶಗಳಿಗೆ ಮಾಹಿತಿ ನೀಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೇಳಿರುವುದೇನು?
ಕಾವೇರಿ ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ. ದಿನಾಂಕ: 06-06-2024ರಂದು ಕಾವೇರಿ ನೀರು ಸರಬರಾಜು ಘಟಕಗಳನ್ನು ಸ್ಥಗಿತಗೊಳಿಸುತ್ತಿರುವುದರಿಂದ, ದಿನಾಂಕ: 06-06-2024 ಮತ್ತು ದಿನಾಂಕ: 07-06-2024 ರಂದು ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ, ದಿನಾಂಕ: 04-06-2024 ರಂದು ಕಾವೇರಿ ನೀರು ಸರಬರಾಜು ಘಟಕಗಳನ್ನು ಸ್ಥಗಿತಗೊಳಿಸಲಾಗುವುದೆಂದು ಈ ಹಿಂದೆ ಪ್ರಕಟಿಸಲಾಗಿತ್ತು. ಇದರಿಂದ, ದಿನಾಂಕ: 04-06-2024 ಮತ್ತು 05-06-2024 ರಂದು ಬೆಂಗಳೂರು ನಗರಕ್ಕೆ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುವುದೆಂದು ದಿನಾಂಕ: 29-05-2024 ರಂದು ಪತ್ರಿಕಾ ಪ್ರಕಟಣೆಯನ್ನು ನೀಡಲಾಗಿತ್ತು.
ಆದರೆ, ಕಾವೇರಿ ನೀರು ಸರಬರಾಜು ಘಟಕಗಳನ್ನು ಸ್ಥಗಿತಗೊಳಿಸುವ ದಿನಾಂಕ: 04-06- 2024ನ್ನು ಕಾರಣಾಂತರಗಳಿಂದ ದಿನಾಂಕ 06-06-2024ಕ್ಕೆ ಮುಂದೂಡಲಾಗಿದೆ. ಅಂದು, ಕಾವೇರಿ 1, 2 ಮತ್ತು 3ನೇ ಹಂತಗಳ ನೀರು ಸರಬರಾಜು ಘಟಕಗಳನ್ನು 12 ಘಂಟೆಗಳ ಕಾಲ (ಬೆಳಗ್ಗೆ 06-00 ರಿಂದ ಸಂಜೆ 06-00 ರವರೆಗೆ) ಹಾಗೂ ಕಾವೇರಿ 4ನೇ ಹಂತ, 1ನೇ ಮತ್ತು 2ನೇ ಘಟ್ಟಗಳ ನೀರು ಸರಬರಾಜು ಘಟಕಗಳನ್ನು 04 ಗಂಟೆಗಳ ಕಾಲ (ಬೆಳಗ್ಗೆ 10-00 ರಿಂದ ಮಧ್ಯಾಹ್ನ 02-00 ರವರೆಗೆ) ಸ್ಥಗಿತಗೊಳಿಸಲು ತೀರ್ಮಾನಿಸಲಾಗಿರುತ್ತದೆ.
ಆದುದರಿಂದ, ನೀರು ಸ್ಥಗಿತಗೊಳಿಸುವ ದಿನಾಂಕ: 06-06-2024 ಮತ್ತು ನಂತರದ ದಿನಾಂಕ: 07-06-2024 ರಂದು ಎರಡು ದಿನಗಳು ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಪ್ರದೇಶದಲ್ಲಿರುವ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications