Get Updates
Get notified of breaking news, exclusive insights, and must-see stories!

ಸೆ.12, 13ರಂದು ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆ ವ್ಯತ್ಯಯ

ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ಕಾವೇರಿ 3ನೇ ಹಂತದಲ್ಲಿ ನೀರು ಪೂರೈಸಲಾಗುವ ಸ್ಥಳಗಳಲ್ಲಿ ದಿನಾಂಕ ಸೆಪ್ಟೆಂಬರ್ 12, 2021 ಮತ್ತು ಸೆಪ್ಟೆಂಬರ್ 13, 2021ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ತಿಳಿಸಿದೆ.

ಕಾವೇರಿ 3ನೇ ಹಂತದ ಪಂಪಿಂಗ್ ಸ್ಟೇಶನ್​ಗೆ ಸಂಬಂಧಪಟ್ಟ ಲೈನ್​ನಲ್ಲಿ ಲೀಕೇಜ್​ಗಳನ್ನು ಸರಿಪಡಿಸಲು ತುರ್ತಾಗಿ ದುರಸ್ತಿ ಮಾಡಬೇಕಾಗಿರುವುದರಿಂದ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಬೆಂಗಳೂರಿನ ಯಾವ ಪ್ರದೇಶಗಳಲ್ಲಿ ನೀರು ಪೂರೈಕೆ ವ್ಯತ್ಯಯ?
ಗಾಂಧಿನಗರ, ಕುಮಾರಪಾರ್ಕ್ ಈಸ್ಟ್, ವಸಂತನಗರ, ಹೈ ಗ್ರೌಂಡ್ಸ್, ಸಂಪಂಗಿ ರಾಮನಗರ, ಸಿಕೆಸಿ ಗಾರ್ಡನ್, ಕೆ.ಎಸ್. ಗಾರ್ಡನ್, ಟೌನ್‌ಹಾಲ್, ಲಾಲ್‌ಬಾಗ್ ರಸ್ತೆಯ 1ರಿಂದ 4ನೇ ಕ್ರಾಸ್​, ಲಾಲ್‌ಬಾಗ್ ರಸ್ತೆ, ಧರ್ಮರಾಯ ಸ್ವಾಮಿ ಟೆಂಪಲ್ ವಾರ್ಡ್, ಕಬ್ಬನ್​ ಪೇಟೆ, ನಗರ್ತಪೇಟೆ, ಕುಂಬಾರಪೇಟೆ, ಕಾಟನ್​ಪೇಟೆ, ಚಿಕ್ಕಪೇಟೆ, ಬಕ್ಷಿ ಗಾರ್ಡನ್, ಭಾರತಿ ನಗರ, ಸೇಂಟ್ ಜಾನ್ಸ್ ರೋಡ್, ಹೈನ್ಸ್ ರೋಡ್, ನಾರಾಯಣ ಪಿಳ್ಳೈ ಸ್ಟ್ರೀಟ್, ಸಂಗಮ್​ ರೋಡ್, ಕಾಮರಾಜ್ ರೋಡ್, ವೀರ ಪಿಳ್ಳೈ ಸ್ಟರೀಟ್, ಇನ್ಫೆಂಟ್ರಿ ರೋಡ್, ಶಿವಾಜಿ ನಗರ, ಲಾವೆಲ್ಲೆ ರೋಡ್, ಫ್ರೇಜರ್ ಟೌನ್- ಬ್ಯಾಡರಹಳ್ಳಿ, ವಿಲಿಯಮ್ಸ್ ಟೌನ್, ಸಿಂಡ್ಲಿ ಕಾಲೋನಿ, ಎನ್.​ಸಿ. ಕಾಲೋನಿಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Water Supply To Be Disrupted For 2 Days On Sep 12 And 13 In These Areas Of Bengaluru

ಇದಲ್ಲದೆ ಕೋಲ್ಸ್ ರಸ್ತೆ, ಮಚಲಿಬೆಟ್ಟ, ಕಾಕ್ಸ್ ಟೌನ್, ದೊಡ್ಡಿಗುಂಟ, ಜೀವನಹಳ್ಳಿ, ವಿವೇಕಾನಂದ ನಗರ, ದೇವಿಸ್ ರಸ್ತೆ, ಕುಕ್ಸ್ ಟೌನ್, ಹಳೆಯ ಬೈಯಪ್ಪನಹಳ್ಳಿ, ನಾಗಯ್ಯನಪಾಳ್ಯ, ಸತ್ಯನಗರ, ಮಾರುತಿ ನಗರ, ಮುಸ್ಲಿಂ ಕಾಲೊನಿ, ಕುಶಾಲ್ ನಗರ, ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ, ನಾಗವಾರ, ಸಮಾಧಾನ ನಗರ, ಹೊಸ ಬಾಗಲೂರು, ಹಳೆ ಬಾಗಲೂರು, ಲಿಂಗರಾಜಪುರ, ಚಾಮರಾಜ ಪೇಟೆ, ಬ್ಯಾಂಕ್ ಕಾಲೊನಿ, ಶ್ರೀನಿವಾಸ ನಗರ, ಗವಿಪುರ, ಹನುಮಂತ ನಗರ, ಗಿರಿನಗರ, ಬ್ಯಾಟರಾಯನಪುರ, ರಾಘವೇಂದ್ರ ಬ್ಲಾಕ್, ಅವಲಹಳ್ಳಿ, ಮುನೇಶ್ವರ ಬ್ಲಾಕ್, ಕಾಳಿದಾಸ ಬಡಾವಣೆ, ಶ್ರೀನಗರ, ಬನಶಂಕರಿ ಮೊದಲನೇ ಹಂತ, ಯಶವಂತಪುರ, ಮಲ್ಲೇಶ್ವರ, ಕುಮಾರ ಪಾರ್ಕ್, ಜಯಮಹಲ್, ಶೇಷಾದ್ರಿಪುರಗಳಲ್ಲಿ ನೀರು ಪೂರೈಕೆ ಇರುವುದಿಲ್ಲ.

ಇನ್ನು ನಂದಿ ದುರ್ಗ ರಸ್ತೆ, ಜೆ.ಸಿ. ನಗರ, ಸದಾಶಿವನಗರ, ಪ್ಯಾಲೇಸ್ ಗುಟ್ಟಹಳ್ಳಿ, ಬಿ.ಇ.ಎಲ್ ರಸ್ತೆ, ಸಂಜಯ್ ನಗರ, ಡಾಲರ್ಸ್ ಕಾಲೊನಿ, ಆರ್.ಎಂ.ವಿ, ಗೆದ್ದಲಹಳ್ಳಿ, ಭೂಪಸಂದ್ರ, ಕಾವಲ್‍ ಬೈರಸಂದ್ರ, ಗಂಗಾನಗರ, ಆರ್.ಟಿ. ನಗರ, ಮನೋರಾಯನಪಾಳ್ಯ, ಆನಂದನಗರ, ವಿ. ನಾಗೇನಹಳ್ಳಿ, ಸುಲ್ತಾನ್ ಪಾಳ್ಯ, ಶಾಂತಲಾ ನಗರ, ಅಶೋಕ ನಗರ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಎಚ್ಎಎಲ್ 2ನೇ ಹಂತದ ಭಾಗ, ದೂಪನಹಳ್ಳಿ, ಇಂದಿರಾನಗರ, ಕದಿರಯ್ಯನ ಪಾಳ್ಯ, ಕಲ್ಹಳ್ಳಿ, ಆಂಧ್ರ ಕಾಲೊನಿ, ಎಚ್‌ಎಎಲ್ 3ನೇ ಹಂತ, ಜೀವನ್ ಬಿಮಾ ನಗರ, ಕೋಡಿಹಳ್ಳಿ, ಎಂ.ಜಿ. ರಸ್ತೆ, ಹನುಮಂತಪ್ಪ ಬಡಾವಣೆ, ಬಜಾರ್ ಸ್ಟ್ರೀಟ್, ಹಲಸೂರು, ಎಂ. ವಿ. ಗಾರ್ಡನ್, ಮರ್ಫಿ ಟೌನ್, ಜೋಗುಪಾಳ್ಯ, ಕೇಂಬ್ರಿಜ್ ಬಡಾವಣೆ, ದೀನಬಂಧು ನಗರ, ಲಿಂಗರಾಜಪುರ, ಜಾನಕಿರಾಮ್ ಬಡಾವಣೆ, ಸಿದ್ದರಾಮಪ್ಪ ಗಾರ್ಡನ್ ಪ್ರದೇಶಗಳಲ್ಲಿ ನೀರು ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದು, ವ್ಯತ್ಯಯಕ್ಕೆ ನಾಗರಿಕರು ಸಹಕರಿಸಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮನವಿ ಮಾಡಿಕೊಂಡಿದೆ.

ನಗರದಲ್ಲಿ ನೀರು ಪೂರೈಕೆ ವ್ಯತ್ಯಯದ ಕುರಿತು ಬೆಂಗಳೂರು ಜಲಮಂಡಳಿ ಸುತ್ತೋಲೆ ಹೊರಡಿಸಿದೆ.

Recommended Video

      ನೀವು ಧರ್ಮಸ್ಥಳಕ್ಕೆ ಹೋಗಬೇಕಾ ? ಹಾಗಾದ್ರೆ ಈ ಸ್ಟೋರಿ ನೋಡಿ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+