Hebbal Flyover: ಡಿಸಿಎಂ ಜಾಲಿ ರೈಡ್ ಮಾಡಿ ಉದ್ಘಾಟಿಸಿದ ಫ್ಲೈಓವರ್ನಿಂದ ಜಲಪಾತದಂತೆ ಸುರಿದ ನೀರು
ಬೆಂಗಳೂರಿನ ಉತ್ತರದ ಹೆಬ್ಬಾಗಿಲು ಎಂದು ಕರೆಸಿಕೊಂಡಿರುವ ಹೆಬ್ಬಾಳ ಮೇಲ್ಸೇತುವೆ ಅತಿ ಹೆಚ್ಚು ಟ್ರಾಫಿಕ್ ಉಂಟಾಗುವ ಜಂಕ್ಷನ್ಗಳಲ್ಲಿ ಒಂದು. ಈ ಕಾರಣಕ್ಕಾಗಿ ಇತ್ತೀಚೆಗೆ ಇಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಮೇಲ್ಸೇತುವೆಯನ್ನು ನಿರ್ಮಿಸಲಾಗಿದೆ. ಹೆಬ್ಬಾಳ ಜಂಕ್ಷನ್ನಲ್ಲಿ ಕೆ.ಆರ್.ಪುರಂ-ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಲೋಕಾರ್ಪಣೆ ಮಾಡಿದ್ದರು. ಈ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ತಗ್ಗಿದರೂ ಜಲಪಾತ ವೀಕ್ಷಿಸುವ ಸೌಭಾಗ್ಯವೂ ಸಾರ್ವಜನಿಕರಿಗೆ ಸಿಕ್ಕಿದೆ.
ಹೌದು, ಒಂದು ಜೋರು ಮಳೆಯಾದರೆ ಇಡೀ ಬೆಂಗಳೂರು ಅಲುಗಾಡುತ್ತೆ. ರಸ್ತೆಗಳಲ್ಲಿ ಗುಂಡಿ ಬಾಯ್ತೆರೆಯುತ್ತವೆ. ಈಗ ಮಳೆಯಿಂದ ಬೆಂಗಳೂರಿನಲ್ಲಿ ಜಲಪಾತಗಳು ಸೃಷ್ಟಿಯಾಗುತ್ತಿವೆ. ಈ ಹಿಂದೆ ಜಾಲಹಳ್ಳಿ ಕ್ರಾಸ್ ಬಳಿ ಇರುವ ಮೇಲ್ಸೇತುವೆಯಿಂದ ಭಾರಿ ಮಳೆಯಿಂದಾಗಿ ನೀರು ಜಲಪಾತದಂತೆ ಸುರಿದಿತ್ತು. ಈಗ ಹೆಬ್ಬಾಳ ಬಳಿ ಉದ್ಘಾಟನೆಗೊಂಡಿರುವ ನೂತನ ಫ್ಲೈಓವರ್ನಿಂದಲೂ ಜಲಪಾತದಂತೆ ನೀರು ಸುರಿದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಮೇಲ್ಸೇತುವೆ ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ರೋಡ್ಕಿಂಗ್ ಬೈಕ್ನಲ್ಲಿ ಜಾಲಿ ರೈಡ್ ಮಾಡಿದ್ದರು. ಫ್ಲೈಓವರ್ ಪರಿಶೀಲಿಸಿ ಅದ್ಧೂರಿಯಾಗಿ ಉದ್ಘಾಟನೆಯೂ ನೆರವೇರಿಸಿದ್ದರು. ಆದರೆ ಟ್ರಾಫಿಕ್ ತಗ್ಗಿತು ಎಂದು ರಿಲೀಫ್ ಆಗುವಷ್ಟರಲ್ಲಿ ಮಳೆ ಕಾಟ ಶುರುವಾಗಿದೆ. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹೆಬ್ಬಾಳದ ಈ ನೂತನ ಫ್ಲೈಓವರ್ ಮೇಲಿಂದ ನೀರು ಜಲಪಾತದಂತೆ ಕೆಳಕ್ಕೆ ಸುರಿದಿದೆ. ಈ ವಿಡಿಯೋ ಹಂಚಿಕೊಂಡಿರುವ ಹಲವರು, ಬ್ರ್ಯಾಂಡ್ ಬೆಂಗಳೂರು ಅಲ್ಲ, ಫಾಲ್ಸ್ ಬೆಂಗಳೂರು ಎಂದು ಕಾಮೆಂಟ್ ಮಾಡುತ್ತಿದ್ದಾರೆ.
80 ಕೋಟಿ ರೂ. ವೆಚ್ಚದ ಫ್ಲೈಓವರ್
ಇತ್ತೀಚಿನ ಮಳೆಯ ಸಮಯದಲ್ಲಿ ಸುಮಾರು 80 ಕೋಟಿ ರೂ. ವೆಚ್ಚದ 700 ಮೀಟರ್ ಉದ್ದದ ಈ ಫ್ಲೈಓವರ್ನ ಹಲವು ಭಾಗಗಳಲ್ಲಿ ನೀರು ಸುರಿಯುತ್ತಿರುವುದು ವಿಡಿಯೋದಲ್ಲಿದೆ. ಫ್ಲೈಓವರ್ ಕೆಳಗೆ ಸಂಚರಿಸುವವರಿಗೆ ಇದು ಅಕ್ಷರಶಃ ಜಲಪಾತದಂತೆಯೇ ಕಾಣುವಂತಿದೆ. ಬೆಂಗಳೂರು ಮಂದಿ ಈಗಾಗಲೇ ಮಳೆಯಿಂದ ಏನೇನೋ ಆಗ್ತಿದೆ, ಈಗ ಇದೊಂದು ಬಾಕಿ ಇತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ. ಫ್ಲೈಓವರ್ ನಿರ್ಮಾಣ ಗುಣಮಟ್ಟ ಮತ್ತು ಮಳೆನೀರು ಒಳಚರಂಡಿ ವಿನ್ಯಾಸವನ್ನು ಪ್ರಶ್ನಿಸುತ್ತಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವತಿಯಿಂದ ಹೊಸದಾಗಿ ನಿರ್ಮಿಸಲಾದ ಹೆಬ್ಬಾಳ ಫ್ಲೈಓವರ್ ಲೂಪ್ ನಗರದ ಅತಿ ಹೆಚ್ಚು ಟ್ರಾಫಿಕ್ ಉಂಟಾಗುವ ಈ ಜಂಕ್ಷನ್ನಲ್ಲಿ ಸಂಚಾರ ಅಡಚಣೆಗಳನ್ನು ಸುಮಾರು ಶೇ 30ರಷ್ಟು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಕೆ.ಆರ್.ಪುರಂ ಮತ್ತು ಮೇಖ್ರಿ ಸರ್ಕಲ್ ಅನ್ನು ಸಂಪರ್ಕಿಸುವ ಈ ಲೂಪ್, ಕೆಂಪೇಗೌಡ ಏರ್ಪೋರ್ಟ್, ಐಟಿ ಕಾರಿಡಾರ್ ಹಾಗೂ ಉತ್ತರದ ಉಪನಗರಗಳಿಂದ ನಗರದ ಮಧ್ಯಭಾಗಕ್ಕೆ ವಾಹನಗಳ ಪ್ರವೇಶಕ್ಕೆ ಅನುಕೂಲ ಕಲ್ಪಿಸಲು ನಿರ್ಮಿಸಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications