Bengaluru Rains : ಮಳೆಯಿಂದ ಹಲವು ಪ್ರದೇಶ ಜಲಾವೃತ, ವಿದ್ಯುತ್ ಕಡಿತ, ಟ್ರಾಫಿಕ್ ಜಾಮ್- ಮತ್ತೆ ಸಾರ್ವಜನಿಕರ ಆಕ್ರೋಶ
ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ( ಈ ವರ್ಷದಲ್ಲಿ ) ಭಾರಿ ಮಳೆಯಾಗಿದ್ದು, ಹಲವು ಭಾಗಗಳಲ್ಲಿ ಸಂಚಾರ ದಟ್ಟಣೆ, ನೀರು ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಬೆಂಗಳೂರು, ಮಾರ್ಚ್ 18: ರಾಜಧಾನಿ ಬೆಂಗಳೂರಿನ ಹಲವೆಡೆ ಶುಕ್ರವಾರ ರಾತ್ರಿ ಉತ್ತಮ ಮಳೆಯಾಗಿದೆ. ಕೆಲವೆಡೆ ಶನಿವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ದಕ್ಷಿಣ ತಮಿಳುನಾಡು-ಕೊಂಕಣ ಕರಾವಳಿ ಪ್ರದೇಶದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇದು ಭಾನುವಾರದವರೆಗೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ನಗರದಲ್ಲಿ ಮೊದಲ ಬಾರಿಗೆ ( ಈ ವರ್ಷದಲ್ಲಿ ) ಭಾರಿ ಮಳೆಯಾಗಿದ್ದು, ಹಲವು ಭಾಗಗಳಲ್ಲಿ ಸಂಚಾರ ದಟ್ಟಣೆ, ನೀರು ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹಲವಾರು ನಿವಾಸಿಗಳು ತಮ್ಮ ಕೋಪವನ್ನು ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮ ಟ್ವಿಟರ್ ಮೊರೆ ಹೋಗಿದ್ದಾರೆ. ವಿದ್ಯುತ್ ಅಧಿಕಾರಿಗಳು ತಮ್ಮ ಸಂಕಷ್ಟದ ಕರೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
9 hours of no electricity so far, everytime, one drop of rain touches Bangalore and whoosh, bescom cuts the power. I'm sure i pay the bills on time. @mdbescom @NammaBESCOM @BescomHelpline @narendramodi @CMofKarnataka what is up?!
— Lav Gabri (@JalebiRanger) March 18, 2023
'ಬಿಟಿಎಂ 1 ನೇ ಹಂತದಲ್ಲಿ ಇಷ್ಟೊಂದು ಸಣ್ಣ ಮಳೆಗೂ ಗಂಟೆಗಟ್ಟಲೆ ವಿದ್ಯುತ್ ಸ್ಥಗಿತಗೊಂಡಿದೆ. ನಾನು ಹಳ್ಳಿಯಲ್ಲಿ ವಾಸಿಸುತ್ತಿದ್ದೆ. ಈಗ ಬೆಂಗಳೂರಿಗಿಂತ ಹಳ್ಳಿಯಲ್ಲಿ ಉತ್ತಮ ವಿದ್ಯುತ್ ಇದೆ ಎಂದು ತೋರುತ್ತದೆ. ಕೆಟ್ಟ ವಿದ್ಯುತ್ ಪೂರೈಕೆದಾರರ ಹೆಸರು ನಮ್ಮ ಬೆಸ್ಕಾಂ' ಎಂದು ನಗರ ನಿವಾಸಿ ಅನೀಶ್ ಬರೆದು ಕೊಂಡಿದ್ದಾರೆ.
ಮಳೆ ನಿಂತಿದ್ದರೂ ನಗರದ ಹಲವು ಪ್ರದೇಶಗಳಲ್ಲಿ ಗಂಟೆಗಟ್ಟಲೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಹಲವಾರು ನೆಟ್ಟಿಗರು ವಿದ್ಯುತ್ ವೈಫಲ್ಯ ಮತ್ತು ನೀರಿನ ವ್ಯತ್ಯಯದ ಬಗ್ಗೆ ಅಧಿಕಾರಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ.
@NammaBESCOM Please restore the power back in 560068 area. Seems like almost half of bangalore is in the dark. Rain has stopped long back. Then why is power still not there since 4 hrs !!!
— Kumkum Das (@_kumkumdas) March 17, 2023
ಮಳೆ ಸುರಿದ ಕೆಲವೇ ಗಂಟೆಗಳಲ್ಲಿ ನಗರದ ಹಲವು ರಸ್ತೆಗಳು ಮುಳುಗಡೆಯಾಗಿ ಸಂಚಾರಕ್ಕೆ ತೊಂದರೆಯಾಯಿತು. ಬೆಳ್ಳಂದೂರು, ಕಾಡುಬೀಸನಹಳ್ಳಿ, ಹೊರವರ್ತುಲ ರಸ್ತೆ ಸೇರಿದಂತೆ ಹಲವೆಡೆ ಜಲಾವೃತವಾಗಿತ್ತು.

ಮುಂಗಾರು ಮಳೆಯ ಅನಾಹುತದಿಂದ ನಮ್ಮ ಸರ್ಕಾರ ಯಾವುದೇ ಪಾಠ ಕಲಿತಿಲ್ಲ ಎಂಬುದಕ್ಕೆ ಇದು ಸಾಕ್ಷಿ. ಬೆಂಗಳೂರಿನ ಜನರು ಮೂಲಸೌಕರ್ಯಕ್ಕಾಗಿ ವ್ಯಯಿಸಿದ ಕೋಟ್ಯಂತರ ರೂಪಾಯಿಗಳಿಗೆ ಸರ್ಕಾರ ಉತ್ತರ ನೀಡಬೇಕು ಎಂದು ಮತ್ತೊಬ್ಬ ನಗರದ ನಿವಾಸಿ ಜಿತೇಶ್ ಎರಂಚೇರಿ ಅವರು ಜಲಾವೃತ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ್ದಾರೆ.
@NammaBESCOM still no luck, no power in koramangala 4th Block! Don't know how many more hrs we have to be without power in city like Bangalore...what a infrastructure, cannot stand 5 min rain! Its a shame!
— Vineet (@vineetkb1) March 17, 2023
ಕಳೆದ ವರ್ಷ ಅತಿವೃಷ್ಟಿಯಿಂದ ಮಳೆನೀರು ಚರಂಡಿ ಒತ್ತುವರಿ ತೆರವು ಮಾಡದ ಪೌರಾಡಳಿತ ಹಾಗೂ ರಾಜ್ಯ ಸರಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಐಟಿ ಕೇಂದ್ರಗಳು ಸೇರಿದಂತೆ ನಗರದ ಹಲವೆಡೆ ಮಳೆಯಿಂದಾಗಿ ಜಲಾವೃತವಾಗಿತ್ತು.
ಭಾರತೀಯ ಹವಾಮಾನ ಇಲಾಖೆಯು ಶನಿವಾರ ಮತ್ತು ಭಾನುವಾರದಂದು ಪ್ರತ್ಯೇಕವಾಗಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ.
Traffic advisory,due to rain water logged in kaadubeesanahalli,traffic movement towards belanduru bit slow,our staff and officers are present there and managing traffic, Commuters please be aware about this TQ.@SplCPTraffic @masaleemips @jointcptraffic @DCPTrEastBCP pic.twitter.com/CcvlIA9xRI
— HAL AIRPORT TRAFFIC BTP (@halairporttrfps) March 17, 2023
ಇದೇ ರೀತಿಯ ಅವಘಡ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಒಂದು ವಾರದ ನಂತರ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸುರಿದ ಸಣ್ಣ ಮಳೆಯ ನಂತರ ಜಲಾವೃತಗೊಂಡಿತು. ಇದು ಟ್ರಾಫಿಕ್ ಅಸ್ತವ್ಯಸ್ತತೆಗೆ ಕಾರಣವಾಯಿತು. ರಾಮನಗರ ಮತ್ತು ಬಿಡದಿ ನಡುವಿನ ಸಂಗಬಸವನ ದೊಡ್ಡಿ ಬಳಿಯ ಅಂಡರ್ಪಾಸ್ ಬಳಿ ಶನಿವಾರ ವಾಹನಗಳು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿದ್ದರಿಂದ ಅವ್ಯವಸ್ಥೆ ಉಂಟಾಗಿತ್ತು.
After a few minutes of rain and all the claims of Rajakaluve encroachments eviction, drain unclogging came falling. Nature wash is mightier than any eyewash! @BBMPCOMM @RAshokaBJP @CMofKarnataka https://t.co/q0gMH9ZRAM
— Citizens Movement, East Bengaluru (@east_bengaluru) March 17, 2023
'ನಾವು ಚರಂಡಿಗಾಗಿ ಜಾಗವನ್ನು ಬಿಟ್ಟಿದ್ದೇವೆ. ಆದರೆ ಕೆಲವು ಗ್ರಾಮಸ್ಥರು ಚರಂಡಿಯನ್ನು ಮಣ್ಣಿನಿಂದ ಮುಚ್ಚಿದ್ದಾರೆ. ಇದು ಪ್ರವಾಹಕ್ಕೆ ಕಾರಣವಾಗಿದೆ. ನಾವು ಅದನ್ನು ತೆರವುಗೊಳಿಸುತ್ತಿದ್ದೇವೆ. ರಸ್ತೆ ಎಂದಿನಂತೆ ತೆರೆದಿರುತ್ತದೆ' ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಯೋಜನಾ ನಿರ್ದೇಶಕ ಬಿ ಟಿ ಶ್ರೀಧರ್ 'ದಿ ಇಂಡಿಯನ್ ಎಕ್ಸ್ಪ್ರೆಸ್'ಗೆ ತಿಳಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿ, ಭಾರೀ ಮಳೆಯ ನಂತರ ಇದೇ ಪ್ರದೇಶವು ಜಲಾವೃತವಾಗಿತ್ತು. ಈ ವರ್ಷದ ಜನವರಿಯಲ್ಲಿ ರಸ್ತೆಗೆ ಭೇಟಿ ನೀಡಿದ್ದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪ್ರವಾಹದ ಬಗ್ಗೆ ಪ್ರತಿಕ್ರಿಯಿಸಿದ್ದರು. ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ











Click it and Unblock the Notifications