ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಸ್ಪಷ್ಟ ಬಹುಮತ ಕಳೆದುಕೊಂಡಿದ್ದಾರೆ: ಯಡಿಯೂರಪ್ಪ

|
Google Oneindia Kannada News

Recommended Video

ಸೋಮವಾರ ಮೈತ್ರಿ ಸರ್ಕಾರದ ಭವಿಷ್ಯ ನಿರ್ಧಾರ | Oneindia Kannada

ಬೆಂಗಳೂರು, ಜುಲೈ 13: ಕುಮಾರಸ್ವಾಮಿ ಬಹುಮತ ಕಳೆದುಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದ್ಯಾವ ಧೈರ್ಯದಲ್ಲಿ ಬಹುಮತ ಸಾಬೀತು ಪಡಿಸಲು ಹೊರಟಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಒಂದೆಡೆ ರಾಜೀನಾಮೆ ಅರ್ಜಿಯನ್ನು ಪುರಸ್ಕರಿಸುವಂತೆ ಕೋರಿ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಪಕ್ಷೇತರ ಶಾಸಕರು ಅಧಿವೇಶದಲ್ಲಿ ವಿರೋಧ ಪಕ್ಷದವರ ಜೊತೆ ಕುಳಿತುಕೊಳ್ಳಲು ಅವಕಾಶ ಮಾಡಿಕೊಡುವಂತೆ ಸ್ಪೀಕರ್ ರಮೇಶ್ ಕುಮಾರ್‌ಗೆ ಮನವಿ ಮಾಡಿದ್ದಾರೆ. ಒಟ್ಟು 18 ಶಾಸಕರ ಬಹುಮತವನ್ನು ಕುಮಾರಸ್ವಾಮಿ ಕಳೆದುಕೊಂಡಿದ್ದಾಗಿದೆ. ಇನ್ನೂ ಯಾವ ಭರವಸೆ ಮೇಲೆ ಅವರು ನಿಂತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ಕಲಾಪಕ್ಕೆ ಹಾಜರಾಗಲು ರಾಮಲಿಂಗಾ ರೆಡ್ಡಿ ನಿರ್ಧಾರ ಸೋಮವಾರ ಕಲಾಪಕ್ಕೆ ಹಾಜರಾಗಲು ರಾಮಲಿಂಗಾ ರೆಡ್ಡಿ ನಿರ್ಧಾರ

ಹೌದು ಬೆಳಗ್ಗೆಯಿಂದಲೂ ಎಂಟಿಬಿ ಮನೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಹಾಗೂ ಸುಧಾಕರ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆಗಳಿಲ್ಲ ಎನ್ನುವ ಭರವಸೆ ನನಗಿದೆ ಎಂದರು.

we are ready to face the No Confidence Motion

ಸದನದ ಶಾಸಕರ ಬೆಂಬಲವಿಲ್ಲದೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಷ್ಟ ಪಡುವುದಿಲ್ಲ ಎಂದಿದ್ದರು.ಹಾಗಾಗಿ ಕಲಾಪ ಕೂಡ ಈಗ ನಡೆಯುವುದಿಲ್ಲ. ಸೋಮವಾರದ ವರೆಗೆ ಕಾಯುತ್ತೇವೆ, ಮಂಗಳವಾರ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮುಂದಿನ ನಿರ್ಧಾರವನ್ನು ಘೋಷಿಸುತ್ತೇವೆ.

English summary
BJP state chief BS Yeddyurappa alleges that Chief HD Kumarasway don't have the majority in assembly.dont have mejority he must resign and go, and allow for fresh government. we are ready to face the No Confidence Motion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X