ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬದುಕಿರುವವರೆಗೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾಗಲು ಬಿಡೆವು: ಡಿಕೆಶಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 18: ನಾವಿನ್ನೂ ಸತ್ತಿಲ್ಲ, ಬದುಕಿದ್ದೇವೆ, ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, 'ಇಂದಿರಾ ಗಾಂಧಿ ಎಂಬುದು ದೇಶದ ಜನರ ಭಾವನಾತ್ಮಕ ವಿಷಯ ಭಾವನೆಗಳ ಜೊತೆ ರಾಜಕೀಯ ಮಾಡಲು ಪ್ರಯತ್ನಿಸಬೇಡಿ ಎಂದು ಬಿಜೆಪಿಯವರಿಗೆ ಎಚ್ಚರಿಕೆ ನೀಡುತ್ತೇನೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಡಿಕೆ ಶಿವಕುಮಾರ್ ಕಿಡಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಡಿಕೆ ಶಿವಕುಮಾರ್ ಕಿಡಿ

'ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಅಟಲ್ ಜನಸ್ನೇಹಿ ಕೇಂದ್ರ, ಅಟಲ್ ಸಾರಿಗೆ ಮಾಡಲಾಗಿತ್ತು. ಆದರೆ ನಾವು ಅಧಿಕಾರಕ್ಕೆ ಬಂದಾಗ ಅದನ್ನು ಬದಲಾಯಿಸಲಿಲ್ಲ, ಹೆಸರಿನ ರಾಜಕೀಯ ನಮಗೆ ಬೇಕಿರಲಿಲ್ಲ, ಅಟಲ್ ಹೆಸರು ದೇಶಕ್ಕೆ ಬೇಕಿತ್ತು' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

We Do Not Allow BJP To Change Indira Canteen Name: DK Shivakumar

ಕಂದಾಯ ಸಚಿವ ಆರ್.ಅಶೋಕ್ ಕನಸು ಕಾಣುತ್ತಿದ್ದಾರೆ. ನಾವಿನ್ನು ಬದುಕಿದ್ದೇವೆ, ಸತ್ತಿಲ್ಲ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಅವಕಾಶ ನೀಡುವುದಿಲ್ಲ. ಈ ಹಿಂದೆ ಸರ್ಕಾರಗಳು ಯಾವ ರೀತಿ ನಡೆದಿವೆ ಎಂಬುದನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮುಂದಾದ ಬಿಜೆಪಿ ಸರ್ಕಾರಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮುಂದಾದ ಬಿಜೆಪಿ ಸರ್ಕಾರ

ಪೌರತ್ವ ಕಾಯ್ದೆಯ ವಿರುದ್ಧವೂ ಕಿಡಿಕಾರಿದ ಡಿ.ಕೆ.ಶಿವಕುಮಾರ್, ಕಾಯ್ದೆಯು ಅಸಾಂವಿಧಾನಿಕ. ದೇಶವನ್ನು ಒಡೆಯುವ ಕಾಯ್ದೆ ಅದಾಗಿದೆ ಎಂದು ಹೇಳಿದರು.

English summary
Former minister DK Shivakumar said we are not died, we will not allow BJP government to change Indira canteen name.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X