ರಂಗಶಂಕರದಲ್ಲಿ 'ಮಾಗಡಿ ಡೇಸ್' ನೋಡಿ ಆನಂದಿಸಿ
ಬೆಂಗಳೂರು, ಏಪ್ರಿಲ್ 30: ಅಮೆರಿಕಾದ ಕ್ಯಾಲಿಫೋರ್ನಿಯಾ ಹಾಗು ಭಾರತದ ವಿವಿಧೆಡೆ ಪ್ರದರ್ಶನ ಕಂಡ ಬಳಿಕ 'ಮಾಗಡಿ ಡೇಸ್; ಮತ್ತೊಮ್ಮೆ ಬೆಂಗಳೂರಿನಲ್ಲಿ ಪ್ರದರ್ಶನವಾಗುತ್ತಿದೆ.
ವಿಮೂವ್ ಥೀಯೇಟರ್ ತಂಡದ, 'ಮಾಗಡಿ ಡೇಸ್' ನಾಟಕವನ್ನು ಮೇ 3ರಂದು ರಂಗಶಂಕರದಲ್ಲಿ ಪ್ರದರ್ಶಿಸುತ್ತಿದೆ. ಅಭಿಷೇಕ್ ಅಯ್ಯಂಗಾರ್ ಈ ನಾಟಕವನ್ನು ಬರೆದು ನಿರ್ದೇಶನ ಮಾಡಿದ್ದಾರೆ.

ಮಾಗಡಿ ಡೇಸ್ : ಕಲಾವಿದರಿಗ್ಯಾಕೆ ರಾಜಕೀಯ ? ಅನ್ನೋ ಪ್ರಶ್ನೆಗೆ ಸರಳ ಉತ್ತರ, ಸಾಮಾಜಿಕ ಕಳಕಳಿಯಷ್ಟೇ , ಮತ್ಯಾವ ಉದ್ದೇಶವೂ ಎಲ್ಲ ಎನ್ನುವ ವಿಮೂವ್ ಥೀಯೇಟರ್ ನ ಈ ನಾಟಕ ಯಾವುದೇ ಪಕ್ಷ ಅಥವಾ ಸಂಘಟನೆಯ ಪರ ಅಥವಾ ವಿರೋಧವಾಗಿಲ್ಲ. ಇದು ಬರಹಗಾರನ ಒಂದು ಕಾಲ್ಪನಿಕ ಕಥೆಯಾಗಿದ್ದು ಇಂದಿನ ನೈಜ ಜೀವನಕ್ಕೆ ಹಾಗೂ ಪ್ರಸ್ತುತ ರಾಜಕೀಯಕ್ಕೆ ತುಂಬಾ ಹತ್ತಿರವಾಗಿದೆ.

ಸಾಫ್ಟವೇರ್ ಇಂಜಿನೀಯರ್ 'ಅನಂತ್' ಕೆಲಸ ಬಿಟ್ಟು ರಾಜಕಾರಣ ಸೇರಿ, ಮುಖ್ಯಮಂತ್ರಿಯಾಗಿ 'ಸ್ಪೆಂಡ್ ಲೆಸ್ ಗವೆರ್ಮೆಂಟ್ 'ಅಂತ ಕರೆಸಿಕೊಳ್ಳೋ ಯೋಜನೆಗಳನ್ನು ಜಾರಿಗೊಳಿಸಿ, ನಂತರ ಜನರಿಗೆ ಹತ್ತಿರವಾಗೋ ದೃಷ್ಟಿಯಿ೦ದ ರಾಜಕಾರಣದಲ್ಲಿ 'ಫೇಸ್ ಬುಕ್' ನ ಬಳಕೆ ಕಡ್ಡಾಯಗೊಳಿಸಲು ಹೋಗಿ ಅದರಿಂದ ಆವಾಂತರಗಳಿಗೆ ಸಿಕ್ಕಿಹಾಕಿಕೊಂಡು, ಸರಳವಾಗಿದ್ದ ಮನುಷ್ಯ ನಿಧಾನವಾಗಿ ಇಂದಿನ ರಾಜಕಾರಣಿಗಳಂತೆ 'ಚುನಾವಣೆಗೆ ಮುನ್ನ'ವೇ ಜನರ 'ಬೇಡಿಕೆ'ಗಳನ್ನು ಈಡೇರಿಸುವ ರಾಜಕಾರಣಿಯಾಗಿ ಬದಲಾಗುತ್ತಾನೆ. ಆದರೆ ಆ ಆವಾಂತರಗಳಿಗೆ 'ಅನಂತ' ನೇ ಕಾರಣವೇ ಅಥವಾ ಅನಂತನ ಹಿಂದಿರುವ ಅನೇಕರೇ? ಎನ್ನುವುದು ನಾಟಕದ ಕಥೆ
ನಮ್ಮ ಮೆಟ್ರೋ, ನನ್ನವಳ ಕಾಗದ, ಪಿ.ಎಸ್ ಐ ಡೋಂಟ್ ಲವ್ ಯು, ತತ್ಯನ ಮೋಹ, ಮಾಗಡಿ ಡೇಸ್, ಕಾಕ್ ಟೇಲ್ ಮುಂತಾದ ನಾಟಕಗಳ ಮೂಲಕ ಬೆಂಗಳೂರು, ಮೈಸೂರು, ಚೆನ್ನೈ ಹಾಗೂ ಹೈದರಾಬಾದಿನ ನಾಟಕ ಪ್ರಿಯರ ಮನಸ್ಸಿನಲ್ಲಿ ವಿಮೂವ್ ಥೀಯೇಟರ್ ತಂಡ ಮನೆ ಮಾಡಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications