ರಂಗಶಂಕರದಲ್ಲಿ 'ಮಾಗಡಿ ಡೇಸ್' ನೋಡಿ ಆನಂದಿಸಿ
ಬೆಂಗಳೂರು, ಏಪ್ರಿಲ್ 30: ಅಮೆರಿಕಾದ ಕ್ಯಾಲಿಫೋರ್ನಿಯಾ ಹಾಗು ಭಾರತದ ವಿವಿಧೆಡೆ ಪ್ರದರ್ಶನ ಕಂಡ ಬಳಿಕ 'ಮಾಗಡಿ ಡೇಸ್; ಮತ್ತೊಮ್ಮೆ ಬೆಂಗಳೂರಿನಲ್ಲಿ ಪ್ರದರ್ಶನವಾಗುತ್ತಿದೆ.
ವಿಮೂವ್ ಥೀಯೇಟರ್ ತಂಡದ, 'ಮಾಗಡಿ ಡೇಸ್' ನಾಟಕವನ್ನು ಮೇ 3ರಂದು ರಂಗಶಂಕರದಲ್ಲಿ ಪ್ರದರ್ಶಿಸುತ್ತಿದೆ. ಅಭಿಷೇಕ್ ಅಯ್ಯಂಗಾರ್ ಈ ನಾಟಕವನ್ನು ಬರೆದು ನಿರ್ದೇಶನ ಮಾಡಿದ್ದಾರೆ.

ಮಾಗಡಿ ಡೇಸ್ : ಕಲಾವಿದರಿಗ್ಯಾಕೆ ರಾಜಕೀಯ ? ಅನ್ನೋ ಪ್ರಶ್ನೆಗೆ ಸರಳ ಉತ್ತರ, ಸಾಮಾಜಿಕ ಕಳಕಳಿಯಷ್ಟೇ , ಮತ್ಯಾವ ಉದ್ದೇಶವೂ ಎಲ್ಲ ಎನ್ನುವ ವಿಮೂವ್ ಥೀಯೇಟರ್ ನ ಈ ನಾಟಕ ಯಾವುದೇ ಪಕ್ಷ ಅಥವಾ ಸಂಘಟನೆಯ ಪರ ಅಥವಾ ವಿರೋಧವಾಗಿಲ್ಲ. ಇದು ಬರಹಗಾರನ ಒಂದು ಕಾಲ್ಪನಿಕ ಕಥೆಯಾಗಿದ್ದು ಇಂದಿನ ನೈಜ ಜೀವನಕ್ಕೆ ಹಾಗೂ ಪ್ರಸ್ತುತ ರಾಜಕೀಯಕ್ಕೆ ತುಂಬಾ ಹತ್ತಿರವಾಗಿದೆ.

ಸಾಫ್ಟವೇರ್ ಇಂಜಿನೀಯರ್ 'ಅನಂತ್' ಕೆಲಸ ಬಿಟ್ಟು ರಾಜಕಾರಣ ಸೇರಿ, ಮುಖ್ಯಮಂತ್ರಿಯಾಗಿ 'ಸ್ಪೆಂಡ್ ಲೆಸ್ ಗವೆರ್ಮೆಂಟ್ 'ಅಂತ ಕರೆಸಿಕೊಳ್ಳೋ ಯೋಜನೆಗಳನ್ನು ಜಾರಿಗೊಳಿಸಿ, ನಂತರ ಜನರಿಗೆ ಹತ್ತಿರವಾಗೋ ದೃಷ್ಟಿಯಿ೦ದ ರಾಜಕಾರಣದಲ್ಲಿ 'ಫೇಸ್ ಬುಕ್' ನ ಬಳಕೆ ಕಡ್ಡಾಯಗೊಳಿಸಲು ಹೋಗಿ ಅದರಿಂದ ಆವಾಂತರಗಳಿಗೆ ಸಿಕ್ಕಿಹಾಕಿಕೊಂಡು, ಸರಳವಾಗಿದ್ದ ಮನುಷ್ಯ ನಿಧಾನವಾಗಿ ಇಂದಿನ ರಾಜಕಾರಣಿಗಳಂತೆ 'ಚುನಾವಣೆಗೆ ಮುನ್ನ'ವೇ ಜನರ 'ಬೇಡಿಕೆ'ಗಳನ್ನು ಈಡೇರಿಸುವ ರಾಜಕಾರಣಿಯಾಗಿ ಬದಲಾಗುತ್ತಾನೆ. ಆದರೆ ಆ ಆವಾಂತರಗಳಿಗೆ 'ಅನಂತ' ನೇ ಕಾರಣವೇ ಅಥವಾ ಅನಂತನ ಹಿಂದಿರುವ ಅನೇಕರೇ? ಎನ್ನುವುದು ನಾಟಕದ ಕಥೆ
ನಮ್ಮ ಮೆಟ್ರೋ, ನನ್ನವಳ ಕಾಗದ, ಪಿ.ಎಸ್ ಐ ಡೋಂಟ್ ಲವ್ ಯು, ತತ್ಯನ ಮೋಹ, ಮಾಗಡಿ ಡೇಸ್, ಕಾಕ್ ಟೇಲ್ ಮುಂತಾದ ನಾಟಕಗಳ ಮೂಲಕ ಬೆಂಗಳೂರು, ಮೈಸೂರು, ಚೆನ್ನೈ ಹಾಗೂ ಹೈದರಾಬಾದಿನ ನಾಟಕ ಪ್ರಿಯರ ಮನಸ್ಸಿನಲ್ಲಿ ವಿಮೂವ್ ಥೀಯೇಟರ್ ತಂಡ ಮನೆ ಮಾಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications