ಹೊರ ರಾಜ್ಯದಲ್ಲಿ ಸಿಲುಕಿರುವ ಕನ್ನಡಿಗರ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭ
ಬೆಂಗಳೂರು, ಮೇ 7: ಹೊರ ರಾಜ್ಯಗಳಲ್ಲಿ ಸಿಲುಕಿರುವ ರಾಜ್ಯದ ಕಾರ್ಮಿಕರನ್ನು ಇನ್ನೊಂದೆರಡು ದಿನಗಳಲ್ಲಿ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲು ಸಿಎಂ ಸಮ್ಮತಿ ನೀಡಿದ್ದು ರಾಜ್ಯದ ಕಾರ್ಮಿಕರು ಆತಂಕಪಡಬಾರದು ಎಂದು ಶಾಸಕ ರಾಜುಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೋವಾ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿ ನಮ್ಮ ರಾಜ್ಯದ ಕಾರ್ಮಿಕರು ಲಾಕ್ ಡೌನ್ ನಲ್ಲಿ ಸಿಲುಕಿದ್ದಾರೆ. ನನ್ನ ಕ್ಷೇತ್ರದ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದವರ ಸಂಖ್ಯೆ ಹೆಚ್ಚಿದೆ ಅವರ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ನಮ್ಮ ಕೂಲಿ ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂಧಿಸಿಸಿದ್ದಾರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಭೆ ಮಾಡಿ ಆದಷ್ಟು ಬೇಗ ಅವರನ್ನು ಕರೆಸಿಕೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ನಮ್ಮ ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳಲು ತಗಲುವ ವೆಚ್ಚವನ್ನು ಭರಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿಕೆ ನೀಡಿದ್ದೆವು. ಆದರೆ, ಅದಕ್ಕೆ ಸಿಎಂ ನಮ್ಮ ಸರ್ಕಾರ ಬಡವರ ಪರ ಸರ್ಕಾರ ಎಷ್ಟು ಖರ್ಚಾದರೂ ಅದನ್ನು ನಮ್ಮ ಸರ್ಕಾರವೇ ಭರಿಸಲಿದೆ ಎಂದಿದ್ದಾರೆ. ಹಾಗಾಗಿ ಹೊರ ರಾಜ್ಯದಲ್ಲಿರುವ ಕಾರ್ಮಿಕರು ಆತಂಕಪಡಬೇಕಿಲ್ಲ ಒಂದೆರಡು ದಿನಗಳಲ್ಲಿ ಅವರನ್ನೆಲ್ಲಾ ಕರೆಸಿಕೊಳ್ಳಲಾಗುತ್ತದೆ ಎಂದರು.

ಹೊರ ರಾಜ್ಯದಿಂದ ಬಂದವರ ಕ್ವಾರಂಟೈನ್ ಗೆ ಶಾಲೆಗಳು, ಹಾಸ್ಟೆಲ್, ಕಿತ್ತೂರಾಣಿ ಚೆನ್ನಮ್ಮ ಶಾಲೆ, ಮೊರಾರ್ಜಿ ದೇಸಾಯಿ ಶಾಲೆ ಈ ರೀತಿ ಎಲ್ಲವನ್ನೂ ಕೂಡ ವಶಕ್ಕೆ ತೆಗೆದುಕೊಂಡು ಅಲ್ಲಿ ಅವರನ್ನು ಇರಿಸಲಾಗುತ್ತದೆ, 15 ದಿನಗಳ ನಂತರ ಅವರನ್ನು ಊರಿಗೆ ವಾಪಸ್ ಕಳುಹಿಸಿದ್ದೇವೆ ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications