Get Updates
Get notified of breaking news, exclusive insights, and must-see stories!

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆ ರಚನೆ: ಚುನಾವಣಾ ದಿನಾಂಕ ಫಿಕ್ಸ್- ಮಹತ್ವದ ಮಾಹಿತಿ, ವಿವರ ತಿಳಿಯಿರಿ

ಬೆಂಗಳೂರು, ಜುಲೈ15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಕರ್ನಾಟಕದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ದತೆ ನಡೆಸುತ್ತಿದೆ. ಬೆಂಗಳೂರು ಪಾಲಿಕೆಯ ಚುನಾವಣೆಯು ಕಳೆದ ಐದು ವರ್ಷಗಳಿಂದ ನಡೆದಿಲ್ಲ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆ ರಚನೆ ಮಾಡಿ, ಶೀಘ್ರವೇ ಚುನಾವಣೆ ನಡೆಸುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಹತ್ವದ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

We Will Form Five Corporations Under The Greater Bengaluru Authority DK Shivakumar

ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದರು.

ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೂಪಾಯಿ ಹಣ ನೀಡಿದೆ. 50 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚವಾದರೆ, 19 ಸಾವಿರ ಕೋಟಿ ಹಣವನ್ನು ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಸುಮಾರು 11 ಸಾವಿರ ಕೋಟಿಯನ್ನು ಪಿಂಚಣಿಗಳಿಗೆ ವೆಚ್ಚ ಮಾಡಲಾಗುತ್ತಿದೆ. ರಾಜ್ಯ ಬಜೆಟ್ಟಿನ 25% ಹಣವನ್ನು ಜನರಿಗೆ ನೀಡುತ್ತಿದ್ದೇವೆ. ಈ ಉಪಕಾರ ಸ್ಮರಣೆಯನ್ನು ಜನರಿಗೆ ಮನದಟ್ಟು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದರು.

ಈ ದೇಶದ ಇತಿಹಾಸದಲ್ಲಿ ಕಾಂಗ್ರೆಸ್ ನೀಡಿರುವ ಹಲವಾರು ಕಾರ್ಯಕ್ರಮಗಳನ್ನು ಯಾರೂ ಸಹ ನಿಲ್ಲಸಲು ಸಾಧ್ಯವಿಲ್ಲ. ಉಳುವವನೆ ಭೂಮಿಯ ಒಡೆಯ, ಅಂಗನವಾಡಿ, ಆಶಾ, ನರೇಗಾ ಹೀಗೆ ನೂರಾರು ಕಾರ್ಯಕ್ರಮಗಳು ಕಾಂಗ್ರೆಸ್ ಜನರಿಗೆ ನೀಡಿರುವ ಶಕ್ತಿ. ಅರಣ್ಯ ಭೂಮಿ ಹಕ್ಕು, ಆಹಾರ ಭದ್ರತಾ ಕಾಯ್ದೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಸಾಧ್ಯವಾಯಿತೇ? ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಿದ್ದು ಬಂಗಾರಪ್ಪ ಅವರು. ನಾವು ಯಾವುದೇ ರಾಜಕೀಯ ದೃಷ್ಟಿ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿಲ್ಲ.

ಜನರ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದ್ದೇವೆ. ಬ್ಯಾಂಕ್ ಗಳ ರಾಷ್ಟ್ರೀಕರಣದಿಂದ ಬ್ಯಾಂಕ್ ಗಳೇ ಮನೆ ಬಾಗಿಲಿಗೆ ಬಂದಿವೆ. ಬಿಸಿಯೂಟ, ಅನ್ನಭಾಗ್ಯ ಇದೆಲ್ಲವೂ ಕ್ರಾಂತಿಕಾರಕ ಯೋಜನೆಗಳು. ಹಟ್ಟಿ, ತಾಂಡಾಗಳಲ್ಲಿ ವಾಸವಿರುವ ಜನರು ಯಾವುದೇ ಭೂ ದಾಖಲೆಗಳನ್ನು ಹೊಂದಿರಲಿಲ್ಲ. ಅವರಿಗೆಲ್ಲ ಉಚಿತವಾಗಿ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಇತ್ತೀಚೆಗೆ 1,11,111 ದಾಖಲೆಗಳನ್ನು ನೀಡಲಾಯಿತು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+