'ಏ.28ರಂದು 'ಬಾಹುಬಲಿ 2' ಬಿಡುಗಡೆ ದಿನ ಬೆಂಗ್ಳೂರು ಬಂದ್'
ಬಾಹುಬಲಿ– 2 ಚಿತ್ರದ ನಟ ಸತ್ಯರಾಜ್ (ಕಟ್ಟಪ್ಪ) ಕನ್ನಡಿಗರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ಕರ್ನಾಟಕದಲ್ಲಿ ಏ 28ರಂದು ಚಿತ್ರ ಮಾಡದಂತೆ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಬಿಡುಗಡೆಯಾದರೆ ಪ್ರತಿಭಟನೆ ಮಾಡಲಾಗುವುದು ಎಂ
ಬೆಂಗಳೂರು, ಏಪ್ರಿಲ್ 11 : 'ತಮಿಳುನಾಡಿನ ನಟ ಸತ್ಯರಾಜ್ ಕನ್ನಡಿಗರ ಕ್ಷಮೆಯಾಚಿಸುವವರೆಗೂ ರಾಜ್ಯದಲ್ಲಿ ಬಾಹುಬಲಿ- 2 ಸಿನಿಮಾ ಬಿಡುಗಡೆಗೆ ಅವಕಾಶ ನೀಡಲ್ಲ' ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಏಪ್ರಿಲ್ 28ರಂದು ನಗರದಲ್ಲಿ ಬಾಹುಬಲಿ-2 ಸಿನಿಮಾ ಬಿಡುಗಡೆ ಮಾಡಿದರೆ ಬೆಂಗಳೂರು ಬಂದ್ ಮಾಡುತ್ತೇವೆ. ಸಿನಿಮಾ ವಿರೋಧಿಸಿ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ' ಎಂದರು.[ಸದನಕ್ಕೆ ಜನಪ್ರತಿನಿಧಿಗಳ ಗೈರು: ವಾಟಾಳ್ ಕತ್ತೆ ಮೆರವಣಿಗೆ]

'ರಾಜ್ಯದ ಯಾವುದೇ ಭಾಗದಲ್ಲಿ ಈ ಚಲನಚಿತ್ರ ಪ್ರದರ್ಶನಕ್ಕೆ ಮುಂದಾದರೆ ಅಂತಹ ಚಿತ್ರಮಂದಿರಗಳ ಮುಂದೆ ನಮ್ಮ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ.
ನಮ್ಮ ಹೋರಾಟ ಬಾಹುಬಲಿ-2 ಸಿನಿಮಾದ ವಿರುದ್ಧವಲ್ಲ. ಕಾವೇರಿ ನೀರಿನ ವಿಚಾರವಾಗಿ ಕನ್ನಡಿಗರನ್ನು ಕೀಳು ಮಾತುಗಳಿಂದ ನಿಂದಿಸಿದ ಸತ್ಯರಾಜ್ ವಿರುದ್ಧ ಮಾತ್ರ ಎಂದರು.
ಅವರು ನನ್ನ ಬಗ್ಗೆ ಮಾಡಿದ ವೈಯಕ್ತಿಕ ನಿಂದನೆಯನ್ನು ನಾನು ಸಹಿಸಿಕೊಳ್ಳುವೆ. ಆದರೆ, ಕನ್ನಡಿಗರಿಗೆ ಮಾಡಿದ ಅಪಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಅವರು ಕ್ಷಮೆ ಕೇಳಲೇ ಬೇಕು' ಎಂದು ಆಗ್ರಹಿಸಿದರು.
ಕನ್ನಡ ಒಕ್ಕೂಟದ ಮುಖಂಡ ಸಾ.ರಾ.ಗೋವಿಂದು ಮಾತನಾಡಿ, 'ಸತ್ಯರಾಜ್ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ್ದಾರೆ. ಅವರು ಕ್ಷಮೆ ಕೋರದ ಹೊರತು ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ.
ಸಿನಿಮಾ ಹಂಚಿಕೆದಾರರು ಹಾಗೂ ಪ್ರದರ್ಶಕರು ಸಹ ಸಿನಿಮಾ ಬಿಡುಗಡೆಗೆ ಮುಂದಾಗಬಾರದು' ಎಂದು ಮನವಿ ಮಾಡಿದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications