'ಬಿಜೆಪಿಯ ಹುಚ್ಚು ಕನಸು ನನಸಾಗೋಲ್ಲ,' ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 10: "ಹಣದ ಥೈಲಿ ಹಿಡಿದುಕೊಂಡು ಅಧಿಕಾರಕ್ಕೆ ಬರುವ ನಿಮ್ಮ ಹುಚ್ಚು ಕನಸು ನನಸಾಗುವುದಕ್ಕೆ ನಾವು ಬಿಡುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದಾರಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
"ಮುಂಬೈಯಲ್ಲಿ ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ತಂಗಿರುವ ರಿನೈಸಾನ್ಸ್ ಹೊಟೇಲ್ ಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲು ಅವಕಾಶ ನೀಡದೆ ಇರುವುದು ಮತ್ತು ಕರ್ನಾಟಕದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡದೆ ಇರುವುದು ಈ ಇಡೀ ಪ್ರಕರಣದಲ್ಲಿ ಬಿಜೆಪಿ ಕೈವಾಡವಿದೆ ಎಂಬುದಕ್ಕೆ ಸಾಕ್ಷಿ. ಈ ಎಲ್ಲ ಬೆಳವಣಿಗೆಯ ನಂತರವೂ ಇದರಲ್ಲಿ ಬಿಜೆಪಿ ಕೈವಾಡವಿಲ್ಲ ಎಂದರೆ ಯಾರಾದರೂ ನಂಬುತ್ತಾರಾ" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

"ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರ, ಸ್ವಾಭಿಮಾನಿ ಕರ್ನಾಟಕದಲ್ಲಿ ನಡೆಯದು. ಅಡ್ಡಹಾದಿಯ ಮೂಲಕ,ಹಣದ ಥೈಲಿ ಹಿಡಿದುಕೊಂಡು ಅಧಿಕಾರಕ್ಕೆ ಬರುವ ಬಿಜೆಪಿ ಹುಚ್ಚುಕನಸನ್ನು ನನಸು ಮಾಡಲು ನಾವು ಬಿಡುವುದಿಲ್ಲ. ನಮ್ಮ ಈ ಹೋರಾಟ ರಾಜ್ಯದಾದ್ಯಂತ ಮುಂದುವರಿಯಲಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದರು.











Click it and Unblock the Notifications