ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಸರಕಾರ ಅಸ್ಥಿರಗೊಳಿಸುವ ಬಗ್ಗೆ ದೇವೇಗೌಡ್ರ ಸ್ಪಷ್ಟನೆ

|
Google Oneindia Kannada News

Recommended Video

ಯಡಿಯೂರಪ್ಪ ಸರಕಾರ ಅಸ್ಥಿರಗೊಳಿಸುವ ಬಗ್ಗೆ ದೇವೇಗೌಡ್ರ ಸ್ಪಷ್ಟನೆ | Oneindia Kannada

ಬೆಂಗಳೂರು, ಆ 4: ಈಗ ತಾನೇ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಗೌಡ್ರು, 'ಒಂಬತ್ತು ದಿನಗಳ ಯಡಿಯೂರಪ್ಪನವರ ಸರಕಾರವನ್ನು ಪತನಗೊಳಿಸುವ ಕೆಲಸಕ್ಕೆ ಕೈಹಾಕುವುದಿಲ್ಲ' ಎಂದು ಗೌಡ್ರು ಹೇಳಿದರು.

ಕೆಆರ್ ಪೇಟೆ: ಗೌಡ್ರ ಕುಟುಂಬದ ಸ್ಪರ್ಧೆ 'ವಿರುದ್ದ' ಆಗಲೇ ಮಾಸ್ಟರ್ ಪ್ಲ್ಯಾನ್ಕೆಆರ್ ಪೇಟೆ: ಗೌಡ್ರ ಕುಟುಂಬದ ಸ್ಪರ್ಧೆ 'ವಿರುದ್ದ' ಆಗಲೇ ಮಾಸ್ಟರ್ ಪ್ಲ್ಯಾನ್

ಹದಿನೇಳು ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಯ ಬಗ್ಗೆ ಮಾತನಾಡುತ್ತಾ, ' ನಾವು ಕಾಂಗ್ರೆಸ್ ಜೊತೆ ಮೈತ್ರಿಗೆ ಮುಕ್ತವಾಗಿದ್ದೇವೆ. ಆದರೆ, ಕಾಂಗ್ರೆಸ್ ನಮ್ಮೊಂದಿಗೆ ಸಹಕರಿಸಿದರೆ ಮಾತ್ರ ಇದು ಸಾಧ್ಯ' ಎಂದು ದೇವೇಗೌಡ್ರು ಸ್ಪಷ್ಟ ಪಡಿಸಿದರು.

We Will Not Try To Topple Yeddyurappa Led BJP Government: JDS Supremo Deve Gowda Clarification

'ಬಿಜೆಪಿ ಹಾಲೀ ಅಸೆಂಬ್ಲಿಯ 3.8ವರ್ಷವನ್ನು ಪೂರೈಸಲಿ. ನಾವಂತೂ ಸರಕಾರ ಅಸ್ಥಿರಗೊಳಿಸುವ ಕೆಲಸಕ್ಕೆ ಮುಂದಾಗುವುದಿಲ್ಲ' ಎಂದು ಗೌಡ್ರು ಹೇಳಿದರು.

'ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಗಿದ ಅಧ್ಯಾಯ' ಎಂದಿದ್ದ ದೇವೇಗೌಡ್ರು, 'ಭವಿಷ್ಯದಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇರುವುದಿಲ್ಲ' ಎಂದು ಒಂದು ವಾರದ ಹಿಂದೆ ಕಾರ್ಯಕರ್ತರ ಸಭೆಯ ನಂತರ ಹೇಳಿದ್ದರು.

ಆಷಾಢದ ಕೊನೆಯ ದಿನದ ಮುನ್ನಾ ದೇವೇಗೌಡರಿಂದ ಕಾಂಗ್ರೆಸ್ಸಿಗೆ ಸ್ಪಷ್ಟ ಸಂದೇಶ ಆಷಾಢದ ಕೊನೆಯ ದಿನದ ಮುನ್ನಾ ದೇವೇಗೌಡರಿಂದ ಕಾಂಗ್ರೆಸ್ಸಿಗೆ ಸ್ಪಷ್ಟ ಸಂದೇಶ

'ಕಾಂಗ್ರೆಸ್ ಸೇರಿದಂತೆ, ಯಾವುದೇ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಬಾರದು ಎನ್ನುವುದು ಒಕ್ಕೂರಿಲಿನ ಕೂಗಾಗಿತ್ತು. ಜೆಡಿಎಸ್ ಪಕ್ಷದ ಬಲವೃದ್ದನೆಗೆ ಏಕಾಂಗಿಯಾಗಿ ಸ್ಪರ್ಧಿಸುವುದೇ ಸೂಕ್ತ ಎನ್ನುವ ನಿರ್ಧಾರಕ್ಕೆ ಬರಲಾಗಿದೆ' ಎಂದು ಗೌಡ್ರು ಸಭೆಯಲ್ಲಿ ಹೇಳಿದ್ದರು.

English summary
We Will Not Try To Topple Yeddyurappa Led BJP Government In Karnataka: JDS Supremo Deve Gowda Clarification
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X