ಪಾರ್ಕಿಂಗ್ ಶುಲ್ಕ ಪರಿಷ್ಕರಿಸಲು ಬಿಬಿಎಂಪಿ ಚಿಂತನೆ
ಬೆಂಗಳೂರು, ಸೆ.20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಪಾರ್ಕಿಂಗ್ ನೀತಿಗೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಸರ್ಕಾರದ ನಿರ್ದೇಶನದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾರ್ಕಿಂಗ್ ನೀತಿ ಜಾರಿಗೆ ತರಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿತ್ತು.
ಆದರೆ, ಗಂಟೆಗಳ ಲೆಕ್ಕದಲ್ಲಿ ದ್ವಿಚಕ್ರ ವಾಹನಗಳಿಗೆ 15, 10, 5 ರೂ. ಮತ್ತು ಕಾರುಗಳಿಗೆ 30, 20, 15 ರೂ. ಶುಲ್ಕ ವಿಧಿಸಿರುವುದು ಹೆಚ್ಚಾಯಿತು ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದರು.
ಪಾಲಿಕೆ ಸಭೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವ ಕುರಿತು ಮಾತ್ರ ಒಪ್ಪಿಗೆ ಪಡೆಯಲಾಗಿದೆ. ಬಿಬಿಎಂಪಿ ಶುಲ್ಕವನ್ನು ಪರಿಷ್ಕರಣೆ ಮಾಡಿ ಸದ್ಯದಲ್ಲೇ, ಸಾರ್ವಜನಿಕರಿಗೆ ಹೊರೆಯಾಗದಂತೆ ಹೊಸ ದರ ಪ್ರಕಟಿಸಲಾಗುವುದು ಎಂದು ಮೇಯರ್ ಭರವಸೆ ನೀಡಿದರು. (ಪಾರ್ಕಿಂಗ್ ಎಲ್ಲಿ, ಎಷ್ಟು)
ನಗರದ ಎಲ್ಲಾ ರಸ್ತೆಗಳಲ್ಲಿ ಏಕಾಏಕಿ ಪಾರ್ಕಿಂಗ್ ಶುಲ್ಕ ವಿಧಿಸುವುದಿಲ್ಲ. ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ಪಾರ್ಕಿಂಗ್ ಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗುವುದು. ಮುಂದಿನ ಮೂರು ತಿಂಗಳಿನಲ್ಲಿ ಪೇ ಅಂಡ್ ಪಾರ್ಕ್ ನೀತಿ ಜಾರಿಗೆ ಬರಲಿದೆ ಎಂದರು.
ಒಟ್ಟಾರೆ ಸಾರ್ವಜನಿಕರ ಒತ್ತಡಕ್ಕೆ ಮಣಿದಿರುವ ಬಿಬಿಎಂಪಿ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಣೆ ಮಾಡುವ ಭರವಸೆ ನೀಡಿದೆ. ನೂತನ ಮೇಯರ್ ತಾವು ನೀಡಿದ ಭರವಸೆಯನ್ನು ಈಡೇರಿಸಿ ಬೆಂಗಳೂರಿಗರ ಮೆಚ್ಚುಗೆಗೆ ಪಾತ್ರರಾಗುತ್ತಾರೋ? ಕಾದು ನೋಡೋಣ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications