ಪಾರ್ಕಿಂಗ್ ಶುಲ್ಕ ಪರಿಷ್ಕರಿಸಲು ಬಿಬಿಎಂಪಿ ಚಿಂತನೆ
ಬೆಂಗಳೂರು, ಸೆ.20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಪಾರ್ಕಿಂಗ್ ನೀತಿಗೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಸರ್ಕಾರದ ನಿರ್ದೇಶನದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾರ್ಕಿಂಗ್ ನೀತಿ ಜಾರಿಗೆ ತರಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿತ್ತು.
ಆದರೆ, ಗಂಟೆಗಳ ಲೆಕ್ಕದಲ್ಲಿ ದ್ವಿಚಕ್ರ ವಾಹನಗಳಿಗೆ 15, 10, 5 ರೂ. ಮತ್ತು ಕಾರುಗಳಿಗೆ 30, 20, 15 ರೂ. ಶುಲ್ಕ ವಿಧಿಸಿರುವುದು ಹೆಚ್ಚಾಯಿತು ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದರು.
ಪಾಲಿಕೆ ಸಭೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವ ಕುರಿತು ಮಾತ್ರ ಒಪ್ಪಿಗೆ ಪಡೆಯಲಾಗಿದೆ. ಬಿಬಿಎಂಪಿ ಶುಲ್ಕವನ್ನು ಪರಿಷ್ಕರಣೆ ಮಾಡಿ ಸದ್ಯದಲ್ಲೇ, ಸಾರ್ವಜನಿಕರಿಗೆ ಹೊರೆಯಾಗದಂತೆ ಹೊಸ ದರ ಪ್ರಕಟಿಸಲಾಗುವುದು ಎಂದು ಮೇಯರ್ ಭರವಸೆ ನೀಡಿದರು. (ಪಾರ್ಕಿಂಗ್ ಎಲ್ಲಿ, ಎಷ್ಟು)
ನಗರದ ಎಲ್ಲಾ ರಸ್ತೆಗಳಲ್ಲಿ ಏಕಾಏಕಿ ಪಾರ್ಕಿಂಗ್ ಶುಲ್ಕ ವಿಧಿಸುವುದಿಲ್ಲ. ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ಪಾರ್ಕಿಂಗ್ ಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗುವುದು. ಮುಂದಿನ ಮೂರು ತಿಂಗಳಿನಲ್ಲಿ ಪೇ ಅಂಡ್ ಪಾರ್ಕ್ ನೀತಿ ಜಾರಿಗೆ ಬರಲಿದೆ ಎಂದರು.
ಒಟ್ಟಾರೆ ಸಾರ್ವಜನಿಕರ ಒತ್ತಡಕ್ಕೆ ಮಣಿದಿರುವ ಬಿಬಿಎಂಪಿ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಣೆ ಮಾಡುವ ಭರವಸೆ ನೀಡಿದೆ. ನೂತನ ಮೇಯರ್ ತಾವು ನೀಡಿದ ಭರವಸೆಯನ್ನು ಈಡೇರಿಸಿ ಬೆಂಗಳೂರಿಗರ ಮೆಚ್ಚುಗೆಗೆ ಪಾತ್ರರಾಗುತ್ತಾರೋ? ಕಾದು ನೋಡೋಣ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications