ಪೊಲೀಸರಿಗೆ ವಾರದ ರಜೆ ಕಡ್ಡಾಯ: ಮೇಘರಿಖ್
ಬೆಂಗಳೂರು, ಜೂನ್ 03: ಪೊಲೀಸರ ಪ್ರತಿಭಟನೆ ಕೂಗಿಗೆ ಆರಂಭಿಕ ಜಯ ಸಿಕ್ಕಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಖ್ 'ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸಿ' ಎಂಬ ಆದೇಶ ಹೊರಡಿಸಿದ್ದಾರೆ.
ಪೊಲೀಸರು ಇಟ್ಟಿರುವ ಬೇಡಿಕೆಯಲ್ಲಿ ವಾರದ ರಜೆಯೂ ಪ್ರಮುಖವಾದದ್ದು. ಇದೀಗ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿವಿಲ್, ಸಂಚಾರ ಮತ್ತು ನಗರ ಸಶಸ್ತ್ರ ಮೀಸಲು ಪಡೆಯ ಎಲ್ಲ ಸಿಬ್ಬಂದಿಗೆ ಕಡ್ಡಾಯವಾಗಿ ವಾರದ ರಜೆ ನೀಡಬೇಕೆಂದು ಮೇಘರಿಖ್ ಗುರುವಾರ ಆದೇಶ ನೀಡಿದ್ದಾರೆ.[ನಯವಾದ ಮಾತಿಗೆ ಬಗ್ಗದ ಪೊಲೀಸರು ಕವನಕ್ಕೆ ಬಗ್ಗುವರೆ?]

ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಸಿಬ್ಬಂದಿಯ ವಾರದ ರಜೆ ತಡೆಹಿಡಿಯುವಂತಿಲ್ಲ. ಒಂದು ವೇಳೆ ರಜಾ ದಿನವೂ ಕೆಲಸ ಮಾಡಬೇಕಾಗಿ ಬಂದರೆ, ಕೆಲಸ ಮಾಡಿದ ಸಿಬ್ಬಂದಿ ಹಿರಿಯ ಅಧಿಕಾರಿಗಳಿಂದ ಲಿಖಿತ ಪತ್ರ ಪಡೆದು ಅಂದೇ ದಿನದ ರಜೆ ಭತ್ಯೆ ಪಡೆಯಬಹುದು ಎಂದು ಕಮಿಷನರ್ ಸುತ್ತೋಲೆಯಲ್ಲಿ ಹೇಳಿದ್ದಾರೆ.[ಪ್ರತಿಭಟನೆಗೆ ಮುಂದಾದ ಪೊಲೀಸರ 31 ಬೇಡಿಕೆಗಳು]
'ನಗರ ಸಶಸ್ತ್ರ ಮೀಸಲು ಪಡೆಗೆ ಹೊಸದಾಗಿ 300 ಕಾನ್ಸ್ಟೆಬಲ್ಗಳ ನೇಮಕವಾಗಿದೆ. ಅವರನ್ನು ಗಸ್ತು ಕಾರ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿಕೊಳ್ಳಲಾಗಿದೆ. ಇದರಿಂದ ಸಿಬ್ಬಂದಿಗೆ ಒತ್ತಡ ಕಡಿಮೆ ಆಗಲಿದೆ. ಹಾಗೆಯೇ ಗೃಹ ಇಲಾಖೆಯಿಂದ ಹೊಸದಾಗಿ 400 ಹೊಯ್ಸಳ ವಾಹನಗಳು ಮಂಜೂರಾಗಿದ್ದು, ಗಸ್ತು ಕೆಲಸ ಸುಲಭವಾಗಲಿದೆ ಎಂದು ಮೇಘರಿಖ್ ತಿಳಿಸಿದ್ದಾರೆ.[ಎಸ್ಮಾ ಎಂದರೇನು? ಜಾರಿಯಾದರೆ ಪರಿಣಾಮ ಏನಾಗತ್ತೆ?]
ಜೂನ್ 4 ರಂದು ರಾಜ್ಯದ ಪೊಲೀಸರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಪ್ರತಿಭಟನೆ ಮಾಡದಂತೆ ಎಚ್ಚರಿಕೆ ನೀಡಿದ್ದ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಮೇಲೆ ಎಸ್ಮಾ ಸಹ ಜಾರಿ ಮಾಡಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications