ಬೈಕ್ ಕಳ್ಳರ ಬಂಧನ: ಹತ್ತು ಲಕ್ಷ ಮೌಲ್ಯದ ಬೈಕ್ಗಳು ವಶ!
ಬೆಂಗಳೂರು, ಮೇ.24 : ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳರನ್ನ ಭಾರತೀನಗರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಲಕ್ಷ್ಮೀಪತಿ ಎಂಬುವವರನ್ನ ಬಂಧಿಸಿರುವ ಪೊಲೀಸರು ಆರೋಪಿಯಿಂದ ನಾಲ್ಕು ಲಕ್ಷ ಮೌಲ್ಯದ ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.
ಆಡುಗೋಡಿ, ಭಾರತೀನಗರ ಸುತ್ತಮುತ್ತ ಬೈಕ್ ಕದಿದ್ದ್ ಆರೋಪಿ, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಬಲೆಬೀಸಿದ್ದ ಜ್ಞಾನಭಾರತಿ ಪೊಲೀಸರು 4 ಲಕ್ಷ ಮೌಲ್ಯದ ಬೈಕ್ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯ ಕೃಷ್ಣಮೂರ್ತಿ ಎಂ.ಎಲ್ ಅಂಡ್ ಟೀಮ್ ಯಶಸ್ವಿಯಾಗಿದ್ದಾರೆ.
ಕಳೆದ ಏಪ್ರಿಲ್ 13 ರಂದು ಸಂಜೆ 7:30 ಗಂಟೆ ಸಮಯದಲ್ಲಿ ಮನೆಮುಂದೆ ರಸ್ತೆಯಲ್ಲಿ ನಿಲ್ಲಿಸಿದ್ದ ಕೆಟಿಎಂ ಡ್ಯೂಕ್ 200 ಎಬಿಎಸ್ ಬೈಕ್ ಬೆಳಗ್ಗೆ ಎದ್ದು ನೋಡಿದಾಗ ಕಳ್ಳತನವಾಗಿರುತ್ತದೆ. ಕೂಡಲೇ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು.

ಒಂದೂವರೆ ತಿಂಗಳು ನಂತರ ಆಂಧ್ರ ಮೂಲದ ಲಕ್ಷ್ಮೀಪತಿ ಎಂಬುವನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆಡುಗೋಡಿ, ಭಾರತೀನಗರ ಸುತ್ತಮುತ್ತ ಬೈಕ್ ಕದಿದ್ದ್ ಆರೋಪಿ, ಜ್ಞಾನಭಾರತೀನಗರ ಠಾಣೆ ವ್ಯಾಪ್ತಿಯಲ್ಲೂ ತನ್ನ ಕೈಚಳಕ ತೋರಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.
6.5 ಲಕ್ಷದ ಬೈಕ್ಗಳ ಕಳ್ಳತನ
ಸುಬ್ರಮಣ್ಯಪುರ, ಚಂದ್ರಾಲೇಔಟ್, ಬಂಡೆಪಾಳ್ಯ, ಬ್ಯಾಟರಾಯನಪುರ ಸೇರಿ ನಗರದ ಹಲವೆಡೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಯುಸೂಫ್ ಮತ್ತು ಫರ್ಧೀನ್ ಖಾನ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 6 ಲಕ್ಷದ 50 ಸಾವಿರ ಮೌಲ್ಯದ 8 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬೈಕ್ ಕಳೆದುಕೊಂಡು ಠಾಣೆ ಮೆಟ್ಟಿಲೇರುವವರ ಸಂಖ್ಯೆ ಹೆಚ್ಚಾಗಿದೆ. ಮನೆಮುಮದೆ ನಿಲ್ಲಿಸಿದ ಬೈಕ್ ಗಳನ್ನೇ ಎಸ್ಕೇಪ್ ಮಾಡುತ್ತಿದ್ದ ಚಾಲಾಕಿ ಬೈಕ್ ಖದೀಮರ ಎಡೆಮುರಿ ಕಟ್ಟಲು ಬೆಂಗಳೂರು ನಗರ ಪೊಲಿಸರು ಇದೀಗ ಬಲೆ ಬೀಸಿದ್ದಾರೆ.
Recommended Video
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಒಟ್ಟು 10 ಲಕ್ಷದ 50 ಸಾವಿರದ ಮೌಲ್ಯದ ಕಳ್ಳತನ ಬೈಕ್ಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ. ಸದ್ಯ ಮೂವರು ಆರೋಪಿಗಳನ್ನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ನಗರ ವಿವಿಧ ಭಾಗಗಳಲ್ಲಿ ಬೈಕ್ ಕಳ್ಳತನವಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪಶ್ಚಿಮ ವಿಭಾಗದಲ್ಲಿ ಈ ಖದೀಮರ ಕೈಚಳಕ ತೋರಿದ್ದು, ಬೆಂಗಳೂರಿನ ಹಲವು ಭಾಗಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications