ರಾಜ್ಯದ 'ಮಹಾ' ಮಳೆಗೆ ಪಶ್ಚಿಮ ಘಟ್ಟ ಕಾರಣ
ಬೆಂಗಳೂರು, ನ. 15: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಂಭವಿಸುವ ಭಾರೀ ಮಳೆಗೆ ಕರ್ನಾಟಕದ ಹೆಮ್ಮೆಯ ಪಶ್ಚಿಮ ಘಟ್ಟಗಳೇ ಕಾರಣ.
ಹೀಗೆಂದು ಅಭಿಪ್ರಾಯಪಟ್ಟಿದ್ದಾರೆ ಬೆಂಗಳೂರಿನ ಐಐಎಸ್ಸಿ ಸಂಸ್ಥೆಯ ಇಬ್ಬರು ಸಂಶೋಧಕರು. ಪಶ್ಚಿಮ ಘಟ್ಟಗಳ ಭಾರೀ ಗುಡ್ಡ ಪ್ರದೇಶಗಳು ಮೋಡಗಳಿಗೆ ತಡೆಯೊಡ್ಡುತ್ತವೆ. ಇದು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಜೂನ್ ಹಾಗೂ ಜುಲೈ ತಿಂಗಳುಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತಿವೆ. ಆದರೆ, ಈ ಅಂಶವನ್ನು ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡುವಾಗ ಪರಿಗಣಿಸುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಳೆದ 14 ವರ್ಷಗಳ ಮಳೆ ಅಂಕಿ ಅಂಶಗಳನ್ನು ಪರಿಗಣಿಸಿದಾಗ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಬೆಂಗಳೂರು ಹಾಗೂ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ರಿಮೋಟ್ ಸೆನ್ಸಿಂಗ್, ಡೆಹ್ರಾಡೂನ್ ಸಂಸ್ಥೆಗಳು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಮೂರು ಭಾರೀ ಮಳೆಯಾಗುವ ಸ್ಥಳಗಳನ್ನು ಗುರುತಿಸಿವೆ. ಆದರೆ, ಕೇರಳ ಹಾಗೂ ತಮಿಳುನಾಡಿನಲ್ಲಿ ಇಂತಹ ಒಂದೂ ಸ್ಥಳ ಕಂಡುಬಂದಿಲ್ಲ. [ಶಿರಸಿ ಸೋಂದಾ ಮಠದಲ್ಲಿ ಕೆರೆ ಸಮ್ಮೇಳನ]
ಗುಡ್ಡ ಪ್ರದೇಶಗಳಿಗೆ ಶಕ್ತಿಯುತ ಗಾಳಿಯು ಅಪ್ಪಳಿಸಿದಾಗ ಮೋಡಗಳು ಪಶ್ಚಿಮ ಘಟ್ಟಗಳಿಗಿಂತ ಮೇಲಕ್ಕೆ ಹೋಗಲು ಆರಂಭಿಸುತ್ತವೆ. ಇದು ಭಾರೀ ಮಳೆ ಬೀಳಲು ಕಾರಣವಾಗುತ್ತವೆ. ಬೇಸಿಗೆಯ ಮಾರ್ಚ್ ಮತ್ತು ಮೇ ತಿಂಗಳುಗಳಲ್ಲಿ ಪಶ್ಚಿಮ ಘಟ್ಟಗಳು ಬಿಸಿಯಾಗುತ್ತವೆ. ಈ ಮೂಲಕ ಸಮುದ್ರ ಪ್ರದೇಶದಿಂದ ತೇವಾಂಶ ಭರಿತ ಗಾಳಿಯನ್ನು ಆಕರ್ಷಿಸುತ್ತವೆ. ಇದು ಜೂನ್ ಹಾಗೂ ಜುಲೈ ತಿಂಗಳಲ್ಲಿ ಭಾರೀ ಮಳೆಯಾಗಲು ಕಾರಣವಾಗುತ್ತವೆ. ಮಳೆಯ ನಂತರ ಉಷ್ಣಾಂಶದ ವ್ಯತ್ಯಾಸವು ಕಡಿಮೆಯಾಗುತ್ತದೆ ಮತ್ತು ದೊಡ್ಡ ಮೋಡದ ರಚನೆಗಳು ಕರಗುತ್ತವೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು












Click it and Unblock the Notifications