ಪಶ್ಚಿಮಘಟ್ಟ ಸೂಕ್ಷ್ಮ ವಲಯ ಅಧಿಸೂಚನೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ
ಬೆಂಗಳೂರು, ಜುಲೈ 18: ಕೇಂದ್ರ ಪರಿಸರ ಖಾತೆಯು ಹೊರಡಿಸಿದ, ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ, ಅಧಿಸೂಚನೆ ಕುರಿತು, ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆದೇಶವನ್ನು ವಿರೋಧಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇನ್ನು ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಮಂಡಿಸಿ ಅನುಮೋದನೆಯನ್ನು ಪಡೆಯಲು ತೀರ್ಮಾನಿಸಲಾಗಿದೆ.
ಕೇಂದ್ರ ಪರಿಸರ ಸಚಿವಾಲಯ, ಪಶ್ಚಿಮಘಟ್ಟ ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆ ವಿರುದ್ಧ, ಕಾನೂನಿನ ಹೋರಾಟ ನಡೆಸಲು, ಮಲೆನಾಡು ಹಾಗೂ ಕರಾವಳಿ ಪ್ರದೇಶದ ಸಚಿವರು ಹಾಗೂ ಶಾಸಕರ ನಿರ್ಧಾರವನ್ನು ಮಾಡಿದ್ದಾರೆ. ಈ ಕುರಿತು, ಗೃಹ ಸಚಿವ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಿದ್ದು, ಅಧಿಸೂಚನೆ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಲಾಗಿದೆ.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, "ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ಕುರಿತು, ಸಭೆಯಲ್ಲಿ, ಪಕ್ಷ ಬೇಧ ಮರೆತು, ಒಕ್ಕೊರಲಿನ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಅಧಿಸೂಚನೆ ವಿರುದ್ಧ ಕಾನೂನಿನ ಹೋರಾಟ ಮಾಡುವುದಲ್ಲದೆ, ಜನಾಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ," ಎಂದು ಹೇಳಿದರು.

ಅಧಿಸೂಚನೆ ವಿರುದ್ಧ, ಪರಿಸರ ಸಚಿವರ ಬಳಿಗೆ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ, ಲೊಕಸಭಾ ಸದಸ್ಯರ ಹಾಗೂ ಶಾಸಕರನ್ನು ಒಳಗೊಂಡ ನಿಯೋಗವನ್ನು ತೆಗೆದುಕೊಂಡು ಹೋಗಲಾಗುತ್ತದೆ.
ವರದಿಯ ಬಗ್ಗೆ ಈ ಹಿಂದೆ ವ್ಯಕ್ತವಾದ ಯಾವುದೇ ಆಕ್ಷೇಪಣೆ ಗಳನ್ನು ಪರಿಗಣಿಸಿಲ್ಲ ಎಂದ ಸಚಿವರು, ಸರಿಯಾದ ಹಾಗೂ ವೈಜ್ಞಾನಿಕ ಸರ್ವೇ ಕಾರ್ಯ ನಡೆದಿಲ್ಲವೆಂದು ಹೇಳಿದರು.

ಒಂದು ವೇಳೆ ಅಧಿಸೂಚನೆ ಅನುಷ್ಠಾನ ಗೊಂಡರೆ ಗ್ರಾಮೀಣ ಭಾಗದ ಜನತೆಯ ಬದುಕು ಅಸಹನೀಯ ವಾಗುತ್ತದೆ ಎಂದ ಸಚಿವರು, ಅಧಿಸೂಚನೆಯನ್ನು ಶತಾಯ ಗತಾಯ ವಿರೋದಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ, ಸಂಪುಟ ಸದಸ್ಯರಾದ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಎಸ್ ಅಂಗಾರ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್, ಶಾಸಕರು ಭಾಗವಹಿಸಿದ್ದರು.

ಕೇಂದ್ರ ಸರಕಾರದ 5ನೇ ಅಧಿಸೂಚನೆ
ಕೇಂದ್ರ ಪರಿಸರ ಖಾತೆಯಿಂದ ಐದನೇ ಸಲ ಅಧಿಸೂಚನೆಯನ್ನು ಹೊರಡಿಸಲಾಗಿದೆ. 20,668 ಚದರ ಕಿ.ಮೀ ವ್ಯಾಪ್ತಿಯ ಪಶ್ಚಿಮಘಟ್ಟವನ್ನು ಸೂಕ್ಷ್ಮವಲಯ ಎಂದು ಪರಿಗಣಿಸಿದ ಅಧಿಸೂಚನಯನ್ನೇ ಮರಳಿ ನೀಡಲಾಗಿದೆ.

ಕೇಂದ್ರ ಅಧಿಸೂಚನೆ ಪಾಲನೆ ಕಷ್ಟ
ಕೇಂದ್ರ ಅಧಿಸೂಚನೆಯಂತೆ ಪಾಲನೆಯನ್ನು ಮಾಡಿದರೆ ಮಲೆನಾಡು, ಪಶ್ಚಿಮಘಟ್ಟದ ವ್ಯಾಪ್ತಿಯಲ್ಲಿ ಬದುಕುವ ಜನರ ಬದುಕು ಮೂರಾಬಟ್ಟೆಯಾಗಲಿದೆ. ಜನರನ್ನು ಒಕ್ಕಲೆಬ್ಬಿಸುವ ಕೆಲಸವಾಗುತ್ತದೆ. ರಸ್ತೆ ಸೇರಿ ಮನೆಗಳನ್ನು ನಿರ್ಮಿಸುವಂತಿಲ್ಲ. ಆಸ್ಪತ್ರೆಗಳನ್ನು ಕಟ್ಟುವಂತಿಲ್ಲ. ರಸ್ತೆ ನಿರ್ಮಾಣ ಮಾಡುವಂತಿಲ್ಲ. 1500ಕ್ಕೂ ಹೆಚ್ಚು ಹಳ್ಳಿಯ ಜನರ ಬದು ಬೀದಿಗೆ ಬೀಳುತ್ತದೆ. ಉದ್ಯಮ ಸ್ಥಾಪನೆಯನ್ನು ಮಾಡಬೇಕಾದ ಕೇಂದ್ರದ ಅನುಮತಿ ಪಡೆಯಬೇಕು. ಜಮೀನು ಮಾಡಬೇಕಾದರೆ ಗೊಬ್ಬರ ಸೇರಿದಂತೆ ಕೆಲವು ಕೆಮಿಕಲ್ ಬಳಸುವಂತಿಲ್ಲ. ಹೀಗೆ ಪಟ್ಟಿಯನ್ನು ಮಾಡಿದರೇ ಜನರು ಬದುಕು ಹಾಳಾಗುವುದು ಖಚಿತವಾಗಲಿದೆ. ಇದರಿಂದಾಗಿಯೇ ಪಶ್ಚಿಮ ಘಟ್ಟ ವ್ಯಾಪ್ತಿಯ ಎಲ್ಲಾ ಶಾಸಕರು ಈ ಅಧಿಸೂಚನೆಯನ್ನು ವಿರೋಧಿಸುತ್ತಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications