ಕಬಿನಿಯಿಂದ ತಮಿಳುನಾಡಿಗೆ ಅಕ್ರಮವಾಗಿ ನೀರು ಹರಿವು: ಸಿಎಂ ಏನಂದ್ರು?
ಬೆಂಗಳೂರು, ಫೆಬ್ರವರಿ 28: ಕಬಿನಿಯಿಂದ ತಮಿಳುನಾಡಿಗೆ ಅಕ್ರಮವಾಗಿ ನೀರು ಸರಬರಾಜಾಗಲು ಸಾಧ್ಯವೇ ಇಲ್ಲ ಇದೆಲ್ಲವೂ ಸತ್ಯಕ್ಕೆ ದೂರವಾದದ್ದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
Recommended Video
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಅಕ್ರಮವಾಗಿ ನೀರು ಹರಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಅದಕ್ಕೆ ಕಿವಿಗೊಡಬೇಡಿ ಎಂದರು.
ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ
ಬಹಳ ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಮಹಾದಾಯಿ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಮೋದಿ, ಅಮಿತ್ ಶಾ ಯೋಜನೆಗೆ ಅನುಮತಿ ನೀಡಿದ್ದಾರೆ. ಬಹಳ ವರ್ಷಗಳ ಬೇಡಿಕೆ ಈಗ ಈಡೇರಿಕೆಯ ಕಾಲ ಬಂದಿದೆ.
ಈ ಅಧಿಸೂಚನೆಯಿಂದ ಹುಬ್ಬಳ್ಳಿ ಭಾಗದ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿಗೆ ಅನುಕೂಲವಾಗುತ್ತದೆ.ಅಧಿಸೂಚನೆ ಹೊರಡಿಸಿರುವುದರಿಂದ 13.5 ಟಿಎಂಸಿ ನೀರು ನಮಗೆ ಸಿಗುತ್ತದೆ. ಈ ನೀರಿನಿಂದ ಆ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ. ಅನೇಕ ವರ್ಷಗಳ ಹೋರಾಟದಿಂದ ಈ ಅಧಿಸೂಚನೆ ಆಗಿದೆ.
ಮಹಾದಾಯಿಗೆ ಈ ಬಜೆಟ್ನಲ್ಲಿ ಹಣ ನೀಡುತ್ತೇನೆ, ಆದಷ್ಟು ಬೇಗ ಕೆಲಸವನ್ನು ಪ್ರಾರಂಭಿಸುತ್ತೇನೆ ಎನ್ನುವ ಭರವಸೆಯನ್ನು ಆ ಭಾಗದ ಜನರಿಗೆ ನೀಡುತ್ತೇನೆ ಎಂದು ಹೇಳಿದರು.