ಬೆಂಗಳೂರು ಕಸದ ಸಮಸ್ಯೆ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ?
ಬೆಂಗಳೂರಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕಸದ ಸಮಸ್ಯೆ ವಿಪರೀತವಾಗಿದೆ. ಅದರಲ್ಲೂ ಬೆಂಗಳೂರಿನ ಹಲವು ಭಾಗಗಳಲ್ಲಿ ಕಸ ಸಂಗ್ರಹದಲ್ಲಿ ಭಾರೀ ವ್ಯತ್ಯಾಸವಾಗುತ್ತಿದೆ. ಹಸಿಕಸ ಹಾಗೂ ಒಣಕಸ ಸಂಗ್ರಹ ಮಾಡುವ ಬದಲು ಕೆಲವು ಭಾಗದಲ್ಲಿ ಮಿಶ್ರ ಕಸ ಸಂಗ್ರಹ ಮಾಡಲಾಗುತ್ತಿದೆ. ಅಲ್ಲದೇ ಬೆಂಗಳೂರಿನ ವಿವಿಧ ಭಾಗದಲ್ಲಿ ಬ್ಲಾಕ್ಸ್ಪಾಟ್ ಹೆಚ್ಚಳವಾಗಿದೆ.
ವಿಧಾನ ಪರಿಷತ್ತು ಅಧಿವೇಶನದ ಕಾರ್ಯಕಲಾಪದಲ್ಲಿ ಬೆಂಗಳೂರಿನ ಕಸ ವಿಲೇವಾರಿಗೆ ಸಂಬಂಧಿಸಿದ ಪ್ರಶ್ನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉತ್ತರ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೊದಲಿನಿಂದಲೂ ಕಸದ ಸಮಸ್ಯೆ ವಿಪರೀತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ. ಇದೀಗ ಈ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಲೋಪವೆಸಗುತ್ತಿದೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರವಾಗಬೇಕು ಎಂದು ಬೆಂಗಳೂರಿಗರು ಮೊದಲಿನಿಂದಲೂ ಆಗ್ರಹಿಸುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್ಗಳಾಗಿ ಟೆಂಡರ್
ಬೆಂಗಳೂರು ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನ ಕಸದ ಸಮಸ್ಯೆ ನಿವಾರಿಸಲು ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಿಗೆ ಹೋಗಿ ಕಸ ವಿಲೇವಾರಿ ಮಾದರಿಯನ್ನು ನೋಡಿಕೊಂಡು ಬಂದಿದ್ದೇನೆ. ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ. ಕಸ ವಿಲೇವಾರಿಗೆಂದು ಆಧುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದನ್ನು ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಬೇಕು ಎನ್ನುವ ಆಲೋಚನೆಯಿದೆ.
35,000 ಸಾವಿರ ಜನರಿಂದ ಕಾಂಪೋಸ್ಟ್
ಇನ್ನು ಬೆಂಗಳೂರಿನಲ್ಲಿ ಕಸದ ಸಮಸ್ಯೆ ಗಂಭೀರವಾಗಿದೆ ಎಂದು ಹೇಳುತ್ತಿರುವಾಗಲೇ ಬೆಂಗಳೂರಿನ ಬರೋಬ್ಬರಿ 35,000 ಸಾವಿರ ಜನ ತಮ್ಮ ಮನೆ ಅಥವಾ ಅಂಗಡಿ ಮತ್ತು ಅಪಾರ್ಟ್ಮೆಂಟ್ಗಳಲ್ಲಿ ಉತ್ಪತ್ತಿಯಾಗುವ ಹಸಿಕಸವನ್ನು ತಾವೇ ಕಾಂಪೋಸ್ಟ್ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ನಗರದಲ್ಲಿ 35,000 ಸಾವಿರ ಜನರು ಕಸವನ್ನು ತಾವೇ ವಿಲೇವಾರಿ ಮಾಡಿಕೊಳ್ಳುವುದಾಗಿ ಸ್ವಯಂ ಘೋಷಣೆ ಮಾಡಿದ್ದಾರೆ. ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಇದರ ಬಗ್ಗೆಯೂ ಟೆಂಡರ್ ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
-
Cat: ಬೆಂಗಳೂರಲ್ಲಿ ಬೆಕ್ಕುಗಳ ಪ್ರೇಮ ಪ್ರಕರಣ - ಇತ್ಯರ್ಥಕ್ಕೆ ಪೊಲೀಸರೇ ಬರಬೇಕಾಯ್ತು, ವೈರಲ್ ಸುದ್ದಿ -
ಬೆಂಗಳೂರು ಹೆಬ್ಬಾಳದ ಮೆಟ್ರೋ ಏಕೀಕೃತ ಸಾರಿಗೆ: 55 ಎಕರೆ ಭೂ ವಿವಾದ - ಸಿಬಿಐ ತನಿಖೆಗೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications