ಯುಕೆ ನೂತನ ಪ್ರಧಾನಿ, ಅಳಿಯ ರಿಷಿ ಸುನಕ್ ಕುರಿತು ನಾರಾಯಣ ಮೂರ್ತಿ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 25: ಬ್ರಿಟನ್ ದೇಶಕ್ಕೆ ನೂತನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್ ಅವರು ಭಾರತದ ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್ನ ಮುಖ್ಯಸ್ಥರಾದ ನಾರಾಯಣ ಮೂರ್ತಿ ಅವರು ಅಳಿಯರಾಗಿದ್ದಾರೆ.
ತಮ್ಮ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ಅವರು, ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ ಮತ್ತು ಅವರ ಯಶಸ್ಸನ್ನು ಬಯಸುತ್ತೇವೆ ಎಂದು ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ ರಿಷಿ ಅವರ ಅತ್ತೆ ಸುಧಾ ಮೂರ್ತಿ ಅವರು ಕೂಡ ಅಳಿಯನಿಗೆ ಶುಭಾಶಯ ಕೋರಿದ್ದಾರೆ.
42 ವರ್ಷದ ರಿಷಿ ಸುನಕ್, ಭಾನುವಾರ ಕನ್ಸರ್ವೇಟಿವ್ ಪಕ್ಷವನ್ನು ಮುನ್ನಡೆಸುವ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ. ಈಗ ಭಾರತೀಯ ಮೂಲದ ಬ್ರಿಟನ್ನ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಸಿದ್ಧರಾಗಿದ್ದಾರೆ. ರಿಷಿಗೆ ಅಭಿನಂದನೆಗಳು. ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ ಮತ್ತು ಅವರು ಯಶಸ್ಸನ್ನು ಬಯಸುತ್ತೇವೆ. ಯುನೈಟೆಡ್ ಕಿಂಗ್ಡಂನ ಜನರಿಗೆ ಅವರು ತಮ್ಮ ಕೈಲಾದಷ್ಟು ಸೇವೆ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ನಾರಾಯಣ ಮೂರ್ತಿ ಹೇಳಿದರು.

ಫಾರ್ಮಸಿಸ್ಟ್ ತಾಯಿ ಮತ್ತು ವೈದ್ಯ ತಂದೆಯ ಮಗ ರಿಷಿ ಸುನಕ್ ಇಂಗ್ಲೆಂಡ್ನ ಅತ್ಯಂತ ಪ್ರಸಿದ್ಧ ಶಾಲೆಗಳಲ್ಲಿ ಒಂದಾದ ವಿಂಚೆಸ್ಟರ್ ಮತ್ತು ನಂತರ ಆಕ್ಸ್ಫರ್ಡ್ನಲ್ಲಿ ಶಿಕ್ಷಣ ಪಡೆದರು. ಅವರು ಗೋಲ್ಡ್ಮನ್ ಸ್ಯಾಚ್ಸ್ ಗ್ರೂಪ್ ಇಂಕ್ನಲ್ಲಿ ಮೂರು ವರ್ಷಗಳನ್ನು ಕಳೆದರು. ನಂತರ ಕ್ಯಾಲಿಫೋರ್ನಿಯಾದ ಸ್ಟ್ಯಾನ್ಫೋರ್ಡ್ನಿಂದ ಎಂಬಿಎ ಪಡೆದರು.

ಅಲ್ಲಿ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯನ್ನು ಭೇಟಿಯಾದರು. ಅವರು 2009 ರಲ್ಲಿ ಅಕ್ಷತಾ ಅವರನ್ನು ವಿವಾಹವಾದರು ಮತ್ತು ದಂಪತಿಗೆ ಕೃಷ್ಣ ಮತ್ತು ಅನುಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ರಿಷಿ ಸುನಕ್ ಅವರು ಮಂಗಳವಾರ ಈ ವರ್ಷ ಬ್ರಿಟನ್ನ ಮೂರನೇ ಪ್ರಧಾನ ಮಂತ್ರಿಯಾಗಿ ನೇಮಿಸಲ್ಪಡುತ್ತಾರೆ. ಕೇವಲ ಏಳು ವಾರಗಳ ನಂತರ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ಬದಲಿಗೆ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.
Congratulations rishi pic.twitter.com/pBpFYipjt9
— Sudha_murthy (@sudhamurty) October 24, 2022
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications