ಕುಮಾರಸ್ವಾಮಿ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು
Recommended Video
ಬೆಂಗಳೂರು, ಡಿಸೆಂಬರ್ 10: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲದ ಜೆಡಿಎಸ್ ಪಕ್ಷದ ಸ್ಥಿತಿ ಈಗ ಹೇಳತೀರದಾಗಿದೆ. ಅದರಲ್ಲೂ ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯದ ಕೆ.ಆರ್.ಪೇಟೆಯ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲ ಮನ್ನಾ ಮಾಡಿದರೂ ಜನ ನಮ್ಮ ಕೈ ಹಿಡಿಯಲಿಲ್ಲ, ನಮ್ಮ ತಂದೆ ಮಾಡಿದ ಅನ್ಯಾಯವಾದರೂ ಏನು ಎಂದು ಪ್ರಶ್ನಿಸಿ ಕಣ್ಣೀರು ಹಾಕಿದರು.
ಉಪ ಚುನಾವಣೆ ಫಲಿತಾಂಶ ನೋಡಿ ಮನಸ್ಸಿಗೆ ತುಂಬಾ ದುಃಖ ಆಗಿದೆ, ಕುಮಾರಣ್ಣ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ರು, 38 ಸ್ಥಾನ ಪಡೆದು ನಮ್ಮ ತಂದೆ ಸಿಎಂ ಆಗಿದ್ದರು, ಹೇಳಿದ ಹಾಗೆ ಸಾಲ ಮಾಡಿದರೂ ರಾಜ್ಯದ ಜನತೆ ಕುಮಾರಣ್ಣನ ಕೈಹಿಡಿಯಲಿಲ್ಲ ಎಂದರು.

ಈ ಉಪ ಚನಾವಣೆಯ ಫಲಿತಾಂಶದ ಸೋಲು ಕಂಡು ನಮ್ಮ ತಂದೆ ತುಂಬಾ ನೊಂದುಕೊಂಡಿದ್ದಾರೆ. ನಮ್ಮ ಕೆ.ಆರ್.ಪೇಟೆ ಜನ ಸಹ ನಮ್ಮ ಕೈ ಬಿಟ್ಟಿದ್ದು ಯಾಕೆ ಎಂದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅವರು ಅನುಭವಿಸುತ್ತಿರುವ ನೋವು ನನ್ನನ್ನು ಕಾಡುತ್ತಿದೆ ಎಂದು ಹೇಳಿದರು.
ಇಂದು ಕುಮಾರಣ್ಣನ ಆರೋಗ್ಯದ ಸ್ಥಿತಿಯ ಬಗ್ಗೆ ನಾನು ಮಾತನಾಡಲ್ಲ, ಕನಿಕರ ಪಡೆದು ಮತ ಹಾಕಿಸಿಕೊಳ್ಳುವ ನೀಚರು ನಾವಲ್ಲ ಎಂದರು. ಕುಮಾರಸ್ವಾಮಿಯವರು ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ನಾನು ನನ್ನ ಆರೋಗ್ಯ ಲೆಕ್ಕಿಸದೇ ಅವರನ್ನು ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಉಪ ಚುನಾವಣೆಯ ಪ್ರಚಾರದಲ್ಲಿ ನಿರಂತರ 14 ದಿನಗಳ ಕಾಲ ತಿರುಗಾಡಿದ್ದಾರೆ, ಒಂದು ಕ್ಷಣವೂ ಮಲಗಿಲ್ಲ. ರಾಜ್ಯದ ಜನ ಅನರ್ಹರಿಗೆ ಪಾಠ ಕಲಿಸುತ್ತಾರೆ ಎಂದು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಆದರೆ ಇಂದು ಅನರ್ಹರಿಗೆ ಗೆಲುವಾಗಿದೆ, ಮತದಾರರಿಗೆ ಸೋಲಾಗಿದೆ ಎಮದು ಅಸಮಾಧಾನ ವ್ಯಕ್ತಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications