ಐದು ವರ್ಷಗಳಲ್ಲಿ ಕಳಪೆ ಸಾಧನೆ ಮಾಡಿದ ಕರ್ನಾಟಕ ಸಂಸದರು: ಸ್ಫೋಟಕ ಅದ್ಯಯನ ಹೇಳೋದೇನು?
ಬೆಂಗಳೂರು, ಏಪ್ರಿಲ್, 20: ಈಗಾಗಲೇ ನಿನ್ನೆ (ಏಪ್ರಿಲ್ 19) ದೇಶದ ಹಲವೆಡೆ ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಕರ್ನಾಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ರಾಜ್ಯದ ಎಲ್ಲ 28 ಸಂಸದರ ಕಾರ್ಯವೈಖರಿ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ. ಈ ಪೈಕಿ ಬಹುತೇಕ ಮಂದಿ ತಮ್ಮ ಅಧಿಕಾರಾವಧಿಯ 5 ವರ್ಷಗಳಲ್ಲಿ ಕಳಪೆ ಸಾಧನೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಂಸತ್ತಿನಲ್ಲಿ ಅವರ ಹಾಜರಾತಿ, ಕೇಳಿದ ಪ್ರಶ್ನೆಗಳು, ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿಕೆ ಮತ್ತು ಅವರ ಕ್ಷೇತ್ರಗಳಲ್ಲಿನ ಕಾರ್ಯಕ್ಷಮತೆಯನ್ನು ಸಮೀಕ್ಷೆ ಪರಿಗಣಿಸಿದೆ.

ಎಲ್ಲ ಸಂಸದರ ಸರಾಸರಿ ಹಾಜರಾತಿ ಶೇಕಡಾ 71ರಷ್ಟಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಸಂಸದ ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ್ ಜೋಶಿ ಮತ್ತು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರು ಸದನದಲ್ಲಿ ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ್ದು ಬಿಟ್ಟರೆ ಪ್ರಶ್ಯನ್ನೇ ಮಾಡಿಲ್ಲ ಎನ್ನುವ ಮಾಹಿತಿ ಬಹಿರಂಗವಾಗಿದೆ.
ಅನಂತ್ಕುಮಾರ್ ಹೆಗಡೆ, ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ರಮೇಶ್ ಜಿಗಜಿಣಗಿ, ಶ್ರೀನಿವಾಸ ಪ್ರಸಾದ್ ಮತ್ತು ಬಚ್ಚೇಗೌಡ ಚರ್ಚೆಯಲ್ಲಿ ಭಾಗವಹಿಸಲಿಲ್ಲ ಎಂದು ವಿಶ್ಲೇಷಣೆ ಹೇಳಿದೆ. ಇನ್ನು ಮಂಗಳಾ ಅಂಗಡಿ (ಬೆಳಗಾವಿ ಸಂಸದೆ) ಅವರು ಒಂದು ಚರ್ಚೆಯಲ್ಲಿ ಭಾಗವಹಿಸಿದ್ದು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ವಿಮಾನಗಳನ್ನು ಕೋರಿದರು ಎಂದು ತಿಳಿಸಿದೆ.
ಎಆರ್ ವಾಸವಿ ಮತ್ತು ಜಾನಕಿ ನಾಯರ್ ಅವರು ಈ ವಿಶ್ಲೇಷಣೆಯನ್ನು ನಡೆಸಿದ್ದು, ಶುಕ್ರವಾರ (ಏಪ್ರಿಲ್ 19) ನಾಗರಿಕ ಸಮಾಜದ ಗುಂಪು ಸಂವಿಧಾನದ ಅಡಿಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಇದನ್ನು ಬಿಡುಗಡೆಗೊಳಿಸಲಾಗಿದ್ದು, ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ) ಮತ್ತು ಪ್ರಲ್ಹಾದ್ ಜೋಶಿ ಅವರು ಕೋವಿಡ್ ಸಮಯದಲ್ಲಿ ಜನರಿಗೆ ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಅವರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
11 ಸಂಸದರು ಸಭೆಗಳಿಗೆ ಹಾಜರಾಗುವ ಮೂಲಕ ಸೀಮಿತ ಬೆಂಬಲವನ್ನು ನೀಡಿದರು. 15 ಮಂದಿಯನ್ನು ಕಳಪೆ ಎಂದು ಪರಿಗಣಿಸಿದರೆ, ಇಬ್ಬರು ಅಂದರೆ ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ) ಮತ್ತು ಶ್ರೀನಿವಾಸ ಪ್ರಸಾದ್ ನಕಾರಾತ್ಮಕ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದು ಅವರ ವಿಶ್ಲೇಷಣೆ ಹೇಳಿದೆ. ವಾಸವಿ ಮತ್ತು ಜಾನಕಿ ಅವರು, ರಾಜ್ಯಕ್ಕೆ ಜಿಎಸ್ಟಿ ಕೊಡುಗೆಗಳು ಮತ್ತು ಹಂಚಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುರೇಶ್ ಮತ್ತು ಸದಾನಂದ ಗೌಡ ಅವರು ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಉತ್ತೇಜಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪರಿಗಣಿಸಲಾಗಿದೆ ಎಂದು ಹೇಳಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications