ಬೆಂಗಳೂರು ಕೇಂದ್ರ ಭಾಗದ ಅಭಿವೃದ್ಧಿ ಬಗ್ಗೆ ಸಾರ್ವಜನಿಕರು ಹೇಳೋದೇನು?
Recommended Video

ಬೆಂಗಳೂರು, ಮಾರ್ಚ್ 28: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಆಗಿದೆ. ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ. ಇದಕ್ಕೆ ಸಾರ್ವಜನಿಕರು ಏನಂತಾರೆ ನೋಡೋಣ..
ಚುನಾವಣಾ ಪೂರ್ವ ಒನ್ ಇಂಡಿಯಾ ಕನ್ನಡ ಟೀಮ್ ನಡೆಸಿರುವ ಸಮೀಕ್ಷೆಯಲ್ಲಿ ಸಾರ್ವಜನಿಕರು ಹೇಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಗಮನಿಸೋಣ.
ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳ್ತಾನೇ ಇದಾರೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಇವೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅಭಿವೃದ್ಧಿ ಸ್ವಲ್ಪ ಮಟ್ಟಿಗೆ ಆಗಿದೆ ಎಂದು ಸಮಾಧಾನಪಟ್ಟುಕೊಂಡಿದ್ದಾರೆ.

ಅನಂತಕುಮಾರ್ ಇದ್ದಾಗ ನಮಗೆ ಅನುಕೂಲವಾಗಿತ್ತು ಈಗ ಅಭಿವೃದ್ಧಿ ಕುಂಠಿತವಾಗಿದೆ ಅಂತ ಎನ್ನಿಸ್ತಿದೆ. ಪಿಸಿ ಮೋಹನ್ ಬಂದ ಬಳಿಕ ಸ್ವಲ್ಪ ಅಭಿವೃದ್ಧಿಯಾಗಿದೆ ಹಾಗಿದ್ದರೂ ಯಾರೇ ನಿಂತರೂ ನರೇಂದ್ರ ಮೋದಿಯವರ ಮುಖ ನೋಡಿ ಅವರಿಗೆ ಮತ ಹಾಕುತ್ತೇವೆ ಎಂದು ಆಟೋ ಚಾಲಕರೊಬ್ಬರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಏನೇ ದೂರು ನೀಡದರೂ ಬೇಗ ಪ್ರತಿಕ್ರಿಯೆ ನೀಡಿ ಅದನ್ನು ಸರಿಪಡಿಸುತ್ತಾರೆ,ರಸ್ತೆಯನ್ನು ಕೂಡ ಸರಿಪಡಿಸಿದ್ದಾರೆ. ನೀರಿನ ವ್ಯವಸ್ಥೆ ಮಾಡಿದ್ದಾರೆ. ಅಭಿವೃದ್ಧಿಯೂ ಆಗಿದೆ ಎಂದು ಕಾಂಗ್ರೆಸ್ಗೆ ಕೆಲವರು ಬೆಂಬಲ ಸೂಚಿಸಿದ್ದಾರೆ. ಒಟ್ಟಿನಲ್ಲಿ ಬೆಂಗಳೂರು ಕೇಂದ್ರದಲ್ಲಿ ಮೈತ್ರಿ ಹಾಗೂ ಬೆಜೆಪಿ ನಡುವೆ ತೀವ್ರ ಹಣಾಹಣಿ ನಡೆಯುವುದಂತೂ ಸತ್ಯ.











Click it and Unblock the Notifications