ತರಕಾರಿ ಬೆಲೆ ದಿಢೀರ್ ಏರಿಕೆ, ಕಾರಣವೇನು ಗೊತ್ತಾ
ಬೆಂಗಳೂರಲ್ಲಿ ಏಕಾಏಕಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಹಲವು ತರಕಾರಿಗಳ ಬೆಲೆ ಗಗನಮುಖಿಯಾಗಿದೆ. ಅಷ್ಟೇ ಅಲ್ಲ ಸಾಲು ಸಾಲು ಹಬ್ಬಗಳಿದ್ದು, ಈ ಸಂದರ್ಭದಲ್ಲಿ ಧಾರಾಕಾರ ಮಳೆಯಾಗುತ್ತಿರುವುದು ವ್ಯಾಪಾರಿಗಳನ್ನೂ ಕಂಗಾಲಾಗಿಸಿದೆ.
ರಾಜ್ಯದಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಅಲ್ಲದೇ ಬಿಟ್ಟು ಬಿಡದೆ ಮಳೆಯಾಗುತ್ತಿರುವುದರಿಂದ ವ್ಯಾಪಾರ ಕುಸಿತ ಕಂಡಿದೆ. ಬೆಂಗಳೂರಿನ ಕೆಲವು ಪ್ರಮುಖ ಪ್ರದೇಶಗಳಲ್ಲಿನ ರಸ್ತೆಗಳಲ್ಲಿ ಇನ್ನೂ ನೀರು ನಿಂತಿದ್ದು, ವಾಹನ ಸವಾರರು ಹಾಗೂ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಸಂಕಷ್ಟಗಳ ನಡುವೆ ಇದೀಗ ಹಲವು ತರಕಾರಿಗಳ ಬೆಲೆ ಏಕಾಏಕಿ ಹೆಚ್ಚಳವಾಗಿದೆ.

ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ದೀಪಾವಳಿ ಹಬ್ಬಕ್ಕೆ ಇನ್ನು ಒಂದು ವಾರ ಮಾತ್ರ ಬಾಕಿ ಉಳಿದಿದೆ. ಇತಂಹ ಸಂದರ್ಭದಲ್ಲಿ ಧಾರಾಕಾರ ಮಳೆಯಾಗುತ್ತಿರುವುದು ಜನರಲ್ಲಿ ಹಾಗೂ ವ್ಯಾಪಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಹಬ್ಬದ ಸೀಸನ್ಗಳಲ್ಲಿ ತರಕಾರಿ ಹಾಗೂ ಹೂವು ಹೆಚ್ಚು ಮಾರಾಟವಾಗುತ್ತದೆ.
ದೀಪವಾವಳಿ ಹಿಂದೂಗಳ ಪಾಲಿಗೆ ವಿಶೇಷವಾದ ಹಬ್ಬವಾಗಿದೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಅಕ್ಟೋಬರ್ 27ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ತರಕಾರಿ ಬೆಲೆ ಇನ್ನಷ್ಟು ಹೆಚ್ಚಳವಾಗುವ ಆತಂಕವೂ ಎದುರಾಗಿದೆ.
ಇನ್ನು ಬೆಂಗಳೂರಿನಲ್ಲಿ ನಿರಂತರ ಮಳೆಯ ಪ್ರಭಾವದಿಂದಾಗಿ ಹಲವು ತರಕಾರಿಗಳ ಬೆಲೆಯು ಗಗಮುಖಿಯಾಗಿದೆ. ನಿರಂತರ ಮಳೆಯಿಂದಾಗಿ ತರಕಾರಿ ಬೆಲೆ ಹೆಚ್ಚಳವಾಗಿದೆ. ಮಳೆಯಿಂದಾಗಿ ತರಕಾರಿ ಪೂರೈಕೆ ವ್ಯತ್ಯಾಸವಾಗಿದೆ. ಅಲ್ಲದೇ ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ. ಇದರಿಂದ ಬೇಡಿಕೆ ಹೆಚ್ಚಿದ್ದರೂ, ಪೂರೈಕೆ ಕಡಿಮೆಯಾಗಿದೆ. ತರಕಾರಿ ಪೂರೈಕೆ ಹಾಗೂ ಬೇಡಿಕೆ ನಡುವಿನ ವ್ಯತ್ಯಾಸದಿಂದಾಗಿ ಸಹಜವಾಗಿಯೇ ಬೆಲೆ ಏರಿಕೆಯಾಗಿದೆ.

ಮಳೆಯಿಂದಾಗಿ ಈರುಳ್ಳಿ, ಟೊಮೆಟೊ ಹಾಗೂ ಆಲೂಗಡ್ಡೆ ಸೇರಿದಂತೆ ಅಗತ್ಯ ತರಕಾರಿ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಬೆಳ್ಳುಳ್ಳಿ ಹಾಗೂ ಶುಂಠಿ ಬೆಲೆ ಹೆಚ್ಚಳವಾಗಿದೆ. ಬೆಳ್ಳುಳ್ಳಿ ಬೆಲೆ ಕೆಜಿಗೆ 320 ರೂಪಾಯಿಯಿಂದ 440 ರೂಪಾಯಿಗೆ ಹೆಚ್ಚಳವಾಗಿದೆ. ಶುಂಠಿ ಬೆಲೆಯು 75ರಿಂದ 100 ರೂಪಾಯಿ ಆಗಿದೆ. ಅಲ್ಲದೇ, ಈರುಳ್ಳಿ ಬೆಲೆ ಪ್ರತಿ ಕೆಜಿಗೆ 70 ರೂಪಾಯಿಯಿಂದ 80 ರೂಪಾಯಿಗೆ ಏಕಾಏಕಿ ಹೆಚ್ಚಳವಾಗಿದೆ.
ಆಲೂಗಡ್ಡೆ ಬೆಲೆ 50 ರೂಪಾಯಿಯಿ 70 ರೂಪಾಯಿ ಆಗಿದ್ದರೆ, ಟೊಮೆಟೊ ಬೆಲೆ ಪ್ರತಿ ಕೆಜಿಗೆ 60ರಿಂದ 85 ರೂಪಾಯಿ ಆಗಿದೆ. ಹಸಿಮೆಣಸಿನಕಾಯಿ ಬೆಲೆ 50ರೂಪಾಯಿಂದ 70 ರೂಪಾಯಿ ಆಗಿದೆ. ಬೀಟ್ರೂಟ್ ಬೆಲೆ 45 ರೂಪಾಯಿಯಿಂದ 60 ರೂಪಾಯಿ ತಲುಪಿದೆ. ಕ್ಯಾಪ್ಸಿಕಂ (ದೊಡ್ಡ ಮೆಣಸಿನಕಾಯಿ) 50 ರೂಪಾಯಿಯಿಂದ 65 ರೂಪಾಯಿ, ಹಾಗಲಕಾಯಿ ಪ್ರತಿ ಕೆಜಿಗೆ 45ರಿಂದ 65 ರೂಪಾಯಿ ಆಗಿದೆ.
ಇನ್ನು ಸೌತೆಕಾಯಿ ಬೆಲೆ 45ರಿಂದ 55 ರೂಪಾಯಿ ಆಗಿದೆ. ಡಬಲ್ ಬೀನ್ಸ್ 35ರಿಂದ 50 ರೂಪಾಯಿ, ಬದನೆಕಾಯಿ 40ರಿಂದ 55 ರೂಪಾಯಿ ತಲುಪಿದೆ. ಇದರೊಂದಿಗೆ ವಿವಿಧ ತರಕಾರಿಗಳ ಬೆಲೆಯೂ ಹೆಚ್ಚಳವಾಗಿದೆ.
ಚಿಲ್ಲರೆ ಹಣದುಬ್ಬರ: ಇನ್ನು ದೇಶದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಮೊದಲ ಬಾರಿಗೆ, ತರಕಾರಿ ಹಣದುಬ್ಬರವು ಹೆಚ್ಚಳವಾಗಿದೆ. ತರಕಾರಿ ಹಣದುಬ್ಬರವು ಶೇಕಡಾ 9.24ಕ್ಕೆ ಏರಿಕೆಯಾಗಿದೆ. ಈ ಎಲ್ಲಾ ಕಾರಣಗಳಿಂದ ತರಕಾರಿ ಬೆಲೆಯು ಏಕಾಏಕಿ ಹೆಚ್ಚಳವಾಗಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications