ಬೆಂಗಳೂರು ಸೆಂಟ್ರಲ್: ಠೇವಣಿ ಕಳೆದುಕೊಂಡ ಪ್ರಕಾಶ್ ರೈಗೆ ಬಿದ್ದ ಮತಗಳೆಷ್ಟು?
Recommended Video
ಬೆಂಗಳೂರು, ಮೇ 23: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದದ ಅಭಿಯಾನದಲ್ಲಿ ಮಂಚೂಣಿಯಲ್ಲಿದ್ದ ಪ್ರಕಾಶ್ ರೈ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ.
ಗ್ಯಾಲರಿ: ಭರ್ಜರಿ ಜಯದೊಂದಿಗೆ ಸಂಭ್ರಮಾಚರಣೆಯಲ್ಲಿ ಬಿಜೆಪಿ
ಸೋಲು ಖಚಿತವಾಗುತ್ತಿದ್ದಂತೆಯೇ, ಮತಎಣಿಕೆ ಕೇಂದ್ರದಿಂದ ಹೊರನಡೆದ ಪ್ರಕಾಶ್ ರೈ, ಈ ಸೋಲು ನನಗಾದ ಕಪಾಳಮೋಕ್ಷ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಕಾಶ್ ರೈ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಬಹುದು ಎನ್ನುವ ನಿರೀಕ್ಷೆ ಸುಳ್ಳಾಗಿದೆ.
ಒಂದು ಹಂತದಲ್ಲಿ ರಿಜ್ವಾನ್ ಅರ್ಷದ್ ಮುನ್ನಡೆಯನ್ನು ಸಾಧಿಸಿದರೂ, ಕೊನೆಗೆ ಬಿಜೆಪಿ ಈ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಮೂವರು ಅಭ್ಯರ್ಥಿಗಳಿಗೆ ಬಿದ್ದ ಮತಗಳೆಷ್ಟು?

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು
ಸರ್ವಜ್ಞ ನಗರ, ಸಿ ವಿ ರಾಮನ್ ನಗರ, ಶಿವಾಜಿ ನಗರ, ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ ಮತ್ತು ಮಹದೇವಪುರ ಅಸೆಂಬ್ಲಿ ಕ್ಷೇತ್ರವನ್ನು ಹೊಂದಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿ ಕಣದಲ್ಲಿದ್ದರು.

ಹತ್ತೊಂಬತ್ತು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು
ಬಿಜೆಪಿ, ಕಾಂಗ್ರೆಸ್, ಬಿಎಸ್ಪಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು ಹತ್ತೊಂಬತ್ತು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು. ಇದರಲ್ಲಿ ಪ್ರಕಾಶ್ ರೈ ಕೂಡಾ ಒಬ್ಬರು. ಒಂದು ಮಟ್ಟಿನ ಸ್ಪರ್ಧೆಯನ್ನು ಪ್ರಕಾಶ್ ರೈ ಒಡ್ದಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಠೇವಣಿ ಉಳಿಸಿಕೊಳ್ಳುವುದರಲ್ಲೂ ಪ್ರಕಾಶ್ ರೈ ವಿಫಲರಾಗಿದ್ದಾರೆ.

ಕ್ಷೇತ್ರವನ್ನು ಉಳಿಸಿಕೊಂಡ ಪಿ ಸಿ ಮೋಹನ್
ಮೊದಲ ಕೆಲವು ಸುತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದರೆ, ನಂತರ ಹಂತಹಂತವಾಗಿ ಬಿಜೆಪಿ ಮುನ್ನಡೆಯನ್ನು ಪಡೆಯಲಾರಂಭಿಸಿತು. ಪಿ ಸಿ ಮೋಹನ್ 70,968 ಮತಗಳ ಅಂತರದಿಂದ ಗೆದ್ದು ಕ್ಷೇತ್ರವನ್ನು ಉಳಿಸಿಕೊಂಡರು.

ಠೇವಣಿ ಕಳೆದುಕೊಂಡ ಪ್ರಕಾಶ್ ರೈ
ಪಿ ಸಿ ಮೋಹನ್ 602,853, ರಿಜ್ವಾನ್ ಅರ್ಷದ್ 531,885 ಮತ್ತು ನೋಟಾಗೆ 10,760 ಮತಗಳು ಬಿದ್ದಿವೆ. ಉಳಿದಂತೆ ಕೆಲವರು ನಾಲ್ಕು ಅಂಕಿ ದಾಟಿದ್ದರೆ, ಇನ್ನುಳಿದವರು ಮೂರಂಕೆಗೆ ತೃಪ್ತಿ ಪಡಬೇಕಾಗಿದೆ. ಪ್ರಕಾಶ್ ರೈ 28,906 ಮತಗಳನ್ನು ಪಡೆದು ಠೇವಣಿಯನ್ನು ಕಳೆದುಕೊಂಡಿದ್ದಾರೆ.
|
ನನ್ನ ಮುಖಕ್ಕೆ ಇದು ಬಲವಾದ ಗುದ್ದು
ಮತಎಣಿಕೆ ನಡೆಯುತ್ತಿದ್ದಾಗಲೇ ಪ್ರಕಾಶ್ ರೈ, ಮತಎಣಿಕೆ ಕೇಂದ್ರದಿಂದ ಹೊರನಡೆದು ನಂತರ ಟ್ವೀಟ್ ಮಾಡಿದ್ದಾರೆ. ನನ್ನ ಮುಖಕ್ಕೆ ಇದು ಬಲವಾದ ಗುದ್ದು. ಹೆಚ್ಚು ನಿಂದನೆಗಳು, ಟ್ರಾಲ್, ಅಪಮಾನಗಳು ನನಗೆ ಎದುರಾಗಲಿವೆ. ಆದರೆ, ನನ್ನ ನಿಲುವಿಗೆ ನಾನು ಬದ್ಧನಾಗಿರುತ್ತೇನೆ. ಜಾತ್ಯತೀತ ಭಾರತಕ್ಕಾಗಿ ನನ್ನ ಹೋರಾಟವು ಮುಂದುವರಿಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ಎರಡ್ಮೂರು ತಿಂಗಳಿನಿಂದ ಪ್ರಕಾಶ್ ರೈ, ಕ್ಷೇತ್ರದಲ್ಲಿ ಭಾರೀ ಪ್ರಚಾರವನ್ನು ನಡೆಸಿದ್ದರು
ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಯಾವುದೇ ಹಂತದಲ್ಲಿ ಪೈಪೋಟಿ ನೀಡಲು ಸಾಧ್ಯವಾಗದೆ ಹೀನಾಯ ಸೋಲೊಪ್ಪಿಕೊಂಡಿದ್ದಾರೆ. ಕಳೆದ ಎರಡ್ಮೂರು ತಿಂಗಳಿನಿಂದ ಪ್ರಕಾಶ್ ರೈ, ಕ್ಷೇತ್ರದಲ್ಲಿ ಭಾರೀ ಪ್ರಚಾರವನ್ನು ನಡೆಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications