ಕರ್ನಾಟಕ ಬಜೆಟ್ 2019: ಬೆಂಗಳೂರಿನ ವಿವಿಧ ಇಲಾಖೆಗಳಿಗೆ ದೊರೆತಿದ್ದೇನು?
ಬೆಂಗಳೂರು, ಫೆಬ್ರವರಿ 8: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ 2019-20ನೇ ಸಾಲಿನ ಬಜೆಟ್ನ್ನು ಶುಕ್ರವಾರ ಮಂಡಿಸಿದ್ದಾರೆ.
ಅದರಲ್ಲಿ ಬೆಂಗಳೂರಿಗೆ ಒಟ್ಟು 8015ಕೋಟಿ ಮೀಸಲಿಟ್ಟಿದ್ದು ವಿವಿಧ ಇಲಾಖೆಗಳಿಗೆ ವಿವಿಧ ಅನುದಾನವನ್ನು ಘೋಷಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ
ಮೆಟ್ರೋ ಮತ್ತು ಬಸ್ ಸೇವೆಗಳಲ್ಲಿ ಬಳಸಬಹುದಾದ ಚಾಲನೆ ಕಾರ್ಡ್ಗಳ ಪ್ರಾರಂಭ, 3 ಕೋಚ್ಗಳಿರುವ ಎಲ್ಲಾ 50 ರೈಲು ಸೆಟ್ಗಳನ್ನು 6 ಕೋಚ್ಗಳ ಸೆಟ್ಗಳಾಗಿ ಪರಿವರ್ತನೆ ಮಾಡಲಾಗುತ್ತದೆ.
- ಆಯ್ದ 10 ಮೆಟ್ರೋ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನಗಳಿಗೆ ವಿದ್ಯುತ್ ಚಾರ್ಜಿಂಗ್ ಸೌಕರ್ಯ.
- ಕೊನೆಯ ಮೈಲಿನ ಸಂಪರ್ಕ ಸೇವೆಗಾಗಿ ಆಯ್ದ 10 ಮೆಟ್ರೋ ನಿಲ್ದಾಣಗಳಲ್ಲಿ ಬಿಎಂಟಿಸಿ ಇಂದ ಸಣ್ಣ ಸಾಮರ್ಥ್ಯದ ಬಸ್ಗಳ ಸೌಲಭ್ಯ
-ಯಶವಂತಪುರದಲ್ಲಿ ರೈಲ್ವೇ ಮತ್ತು ಮೆಟ್ರೋ ನಿಲ್ದಾಣಗಳ ನಡುವೆ ಪಾದಚಾರಿ ಮೇಲ್ಸೇತುವೆ
ನಿರ್ಮಾಣ.
-ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರಂ ಮತ್ತು ಹೆಬ್ಬಾಳ ಮಾರ್ಗವಾಗಿ ಹೊರ ವರ್ತುಲ ರಸ್ತೆ - ವಿಮಾನ ನಿಲ್ದಾಣ ಮಾರ್ಗ ನಿರ್ಮಾಣ; 16,579 ಕೋಟಿ ರೂ. ಅನುದಾನ.
- ಕೆಂಗೇರಿ ನಮ್ಮ ಮೆಟ್ರೋ ಜಾಲದ ಪಶ್ಚಿಮ ತುದಿ ವಿಸ್ತರಿಸಿ ಚಲ್ಲಘಟ್ಟದಲ್ಲಿ ಹೆಚ್ಚುವರಿ ನಿಲ್ದಾಣವನ್ನು ಸ್ಥಾಪಿಸಲಾಗುವುದು.

ಬೆಂಗಳೂರಿನ ಚಲನಶೀಲತೆ ಯೋಜನೆ
ಬೆಂಗಳೂರಿನ ಚಲನಶೀಲತೆಗಾಗಿ ಸಮಗ್ರ ಯೋಜನೆ ಜಾರಿ; ಸಾರ್ವಜನಿಕ ಸಾರಿಗೆ ಮತ್ತು ಸುಸ್ಥಿರತೆಗೆ ಆಯವ್ಯತ; ಎಲ್ಲ ರೀತಿಯ ಚಾಲನಾ ಸೌಲಭ್ಯಗಳನ್ನು ಒಳಗೊಂಡ ಯೋಜನೆ, ಬಿಎಂಟಿಸಿಗೆ ಬಸ್ ಸಂಖ್ಯೆ ಹೆಚ್ಚಳ ಮುಂದಿನ ವರ್ಷಗಳಲ್ಲಿ ಅನುದಾನ, ಕನಿಷ್ಠ 50 ಕಿ.ಮೀ. ಕಾಲುದಾರಿಗಳ ಅಭಿವೃದ್ಧಿ. ಇದಕ್ಕಾಗಿ 50
ಕೋಟಿ ರೂ. ಅನುದಾನ ನೀಡಲಾಗುತ್ತದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಿಕ್ಕಿದ್ದೇನು?
- 8015 ಕೋಟಿ ರೂ. ಅಂದಾಜು ವೆಚ್ಚದ ನವ ಬೆಂಗಳೂರು
-ಕ್ರಿಯಾ ಯೋಜನೆ ಅನುಷ್ಠಾನಕ್ಕೆ 2019-20ರಲ್ಲಿ 2,300 ಕೋಟಿ ರೂ ಅನುದಾನ
- ಎಲಿವೇಟೆಡ್ ಕಾರಿಡಾರ್ ಯೋಜನೆಗೆ 2019-20ನೇ ಸಾಲಿನಲ್ಲಿ
1,000 ಕೋಟಿ ರೂ. ಅನುದಾನ.
- ಬೆಂಗಳೂರಿನಲ್ಲಿ 5 ಲಕ್ಷ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗಿ ಪರಿವರ್ತನೆ.
- ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಹಾಗೂ ಬ್ರಿಗೇಡ್
-ರಸ್ತೆಗಳನ್ನು ಪಾದಚಾರಿ ರಸ್ತೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ
- ಬೆಂಗಳೂರಿನಲ್ಲಿ ಕೆ.ಪಿ.ಸಿ.ಎಲ್ ವತಿಯಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ 400 ಮೆಟ್ರಿಕ್ ಟನ್ ಸಾಮರ್ಥ್ಯವುಳ್ಳ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಸ್ಥಾಪನೆ.
- ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನಾ ನೀತಿ ಜಾರಿ; 10,000 ವಾಹನಗಳ, ನಿಲುಗಡೆಗೆ 87 ಆಯ್ದ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ
- 195 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಮತ್ತು ಕೆ.ಆರ್.ಪುರಂ ಫ್ಲೈ ಓವರ್ ಗಳಲ್ಲಿ ಹೆಚ್ಚುವರಿ ಲೂಪ್ ನಿರ್ಮಾಣ
-ಗೊರಗುಂಟೆಪಾಳ್ಯದಲ್ಲಿ ಹೊಸ ಅಂಡರ್ ಪಾಸ್ ನಿರ್ಮಾಣ.

ಬೆಂಗಳೂರು ಸಬರ್ಬನ್ ರೈಲ್ವೆ ವ್ಯವಸ್ಥೆ
-23,093 ಕೋಟಿ ರೂ. ಅಂದಾಜು ಮೊತ್ತದ ಬೆಂಗಳೂರು ಉಪ
ನಗರ ರೈಲು ಸೇವೆ ಯೋಜನೆಗೆ ಚಾಲನೆ ನೀಡಲಾಗಿದೆ.
-ವಿಶೇಷ ಉದ್ದೇಶಿತ ವಾಹಕ, ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ಕ್ರಮ.
-ಹೆಬ್ಬಾಳ, ಬೈಯಪ್ಪನಹಳ್ಳು, ಕೆ.ಆರ್.ಪುರಂ, ಕಾಡುಗೋಡಿ, ಚಲ್ಲಘಟ್ಟ ಮತ್ತು ಪೀಣ್ಯ ಪ್ರದೇಶಗಳಲ್ಲಿ ಬಹುಮಾದರಿ ಪ್ರಯಾಣ ಹಬ್ ಕಾರ್ಯಸಾಧ್ಯತೆ ಅಧ್ಯಯನ.
- ಬೆಂಗಳೂರಿನ ಪ್ರಮುಖ ಸ್ಥಳಗಳಾದ ಯಶವಂತಪುರ, ಬನಶಂಕರಿ, ವಿಜಯನಗರ, ಪೀಣ್ಯ ಮತ್ತು ಇತರೆ ಪ್ರದೇಶಗಳಲ್ಲಿ ಮೆಟ್ರೊ ರೈಲು ಒತ್ತು ಟಿ.ಟಿ.ಎಂ.ಸಿ.ಗಳ ಅಂತರ್ ನಿಗಮ ಸಂಯೋಜನೆ ವಿನ್ಯಾಸ ಹಾಗೂ ಮೂಲಸೌಕರ್ಯ ಅಭಿವೃದ್ಧಿ.
- ಟೈರ್-2 ನಗರಗಳಲ್ಲಿ ಒಂದು ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನೆ ಜಾರಿ ಹಾಗೂ ಸುಧಾರಿತ ಸಂಚಾರ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆಯ ಅಧ್ಯಯನಕ್ಕೆ ಕ್ರಮ/
- ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಮೆಟ್ರೋ ರೈಲು ಯೋಜನೆ ಬಗ್ಗೆ ಪೂರ್ವ ಕಾರ್ಯ ಸಾಧ್ಯತಾ ವರದಿ ತಯಾರಿಕೆ ಪರಿಶೀಲನೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
17,200 ಕೋಟಿ ರೂ. ವೆಚ್ಚದ ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2019-20ನೇ ಸಾಲಿಗೆ 1,000 ಕೋಟಿ ರೂ. ಅನುದಾನ.

ಬೆಂಗಳೂರು ಜಲಮಂಡಳಿ
-ಬೆಂಗಳೂರಿನಲ್ಲಿರುವ ಜಲ ಸಂಪನ್ಮೂಲ ಬಳಸಿ, ಅರ್ಕಾವತಿ ಮತ್ತು ದಕ್ಷಿಣ ಪಿನಾಕಿನಿ ನದಿಗಳಲ್ಲಿ ಮತ್ತೆ ನೀರು ಒದಗಿಸುವ ಯೋಜನೆ
- ಬಿಎಂಆರ್ಡಿಎ ಪ್ರದೇಶದಲ್ಲಿ ಮಳೆ ನೀರು ಕೊಯ್ಲು, ಎಲ್ಲ ಕರೆ ಹಾಗೂ ನೀರು ನಿಲ್ಲುವ ತಾಣಗಳ ಸಂರಕ್ಷಣೆ, ತ್ಯಾಜ್ಯ ನೀರು ಮರುಬಳಕೆ, ಅರ್ಕಾವತಿ ಮತ್ತು ದಕ್ಷಿಣ ಪಿನಾಕಿನಿ ನದಿಗಳ ಪಕ್ಕ ಇರುವ ಸಾರ್ವಜನಿಕ ಸ್ಥಳಗಳನ್ನು ಶುಚಿಯಾಗಿಡಲು ಕ್ರಮ .
-ಇದರಿಂದ 1400 ಎಂಎಲ್ಡಿ ನೀರು ಹೆಚ್ಚುವರಿಯಾಗಿ ಲಭ್ಯ. ಈ ಯೋಜನೆ ಅಅನುಷ್ಠಾನಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯ ಸಮಿತಿ ರಚನೆ; ಯೋಜನೆಗೆ 50 ಕೋಟಿ ರೂ. ಅನುದಾನ. ಜೈಕಾ ನೆರವಿನೊಂದಿಗೆ 5550 ಕೋಟಿ ರೂ. ಗಳ ಕಾವೇರಿ
-ನೀರು ಸರಬರಾಜು ಯೋಜನೆಯ 5ನೇ ಹಂತ ಅನುಷ್ಠಾನನಕ್ಕೆ 019-20ರಲ್ಲಿ 500 ಕೋಟಿ ರೂ. ಅನುದಾನ
-ಬೆಂಗಳೂರು ನಗರದಲ್ಲಿ 914 ಸ್ಥಳಗಳಲ್ಲಿ ಮಳೆನೀರು ನೀರು ಗುಂಡಿಗೆ ತ್ಯಾಜ್ಯನೀರು ¸ಹೋಗುವುದನ್ನು ತಡೆಗಟ್ಟಲು 2 ವರ್ಷದಲ್ಲಿ 76.55 ಕೋಟಿ ರೂ. ಕಾಮಗಾರಿ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
-ಮಂಡಳಿಯ ಒಂದೇ ಸೂರಿನಡಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಗಟು ನೀರು ಸರಬರಾಜು ಯೋಜನೆಗಳ ಸಮಗ್ರ ನಿರ್ವಹಣೆ, ಎಸ್ಎಫ್ಸಿ ಅನುದಾನದಡಿ ವೆಚ್ಚ ಭರಿಸಲು ಕ್ರಮ.
- ನಗರ ಪ್ರದೇಶದ ತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ವಹಣೆ , ಆರ್ಧ್ರಬಾವಿಗಳು ಮತ್ತು ಒಳಚರಂಡಿ ಯೋಜನೆಯಡಿ ಸಂಯೋಜಿತ ಕಾಮಗಾರಿಗಳ ನಿರ್ವಹಣಾ ವೆಚ್ಚ ಎಸ್ಎಫ್ಸಿ ಅನುದಾನದಡಿ ಭರಿಸಲು ಕ್ರಮ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications