ಎಂಡೋಸಲ್ಫಾನ್ ಸಂತ್ರಸ್ತರು ಸರ್ಕಾರದ ಮುಂದಿಟ್ಟ ಬೇಡಿಕೆಯೇನು?

ಬೆಂಗಳೂರು, ನವೆಂಬರ್, 19 : ಪರಿಹಾರ ಹಣ, ಮಾಸಾಶನ ಹೆಚ್ಚಳ, ಉಚಿತ ಚಿಕಿತ್ಸೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಂಡೋಸಲ್ಫೋನ್ ಎಂಬ ಮಹಾರೋಗಕ್ಕೆ ತುತ್ತಾಗಿ ನರಕಯಾತನೆ ಅನುಭವಿಸುತ್ತಿರುವ ಪೀಡಿತರು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಎಂಡೋ ಸಲ್ಫಾನ್ ಸಿಂಪಡಣೆಯಿಂದ ವಿವಿಧ ಸಮಸ್ಯೆಗೆ ಒಳಗಾಗಿದ್ದ ಜಿಲ್ಲೆಯ ಮಂದಿಗೆ ಪರಿಹಾರ ನೀಡಬೇಕು ಎಂದು ಕಳೆದ ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ ಸೂಕ್ತ ರೀತಿಯ ಪರಿಹಾರ ಲಭ್ಯವಾಗುತ್ತಿಲ್ಲ. ಸರ್ಕಾರ ಭರವಸೆಯ ಆಶಾಗೋಪುರವನ್ನೇ ಕಟ್ಟಿತೇ ಹೊರತು ಅದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.[ಕೊಕ್ಕಡದಲ್ಲಿ ನರಕ ಸೃಷ್ಟಿಸಿರುವ ಎಂಡೋಸಲ್ಫಾನ್]

ಎಂಡೋಸಲ್ಫಾನ್ ಪೀಡಿತರ ಹೋರಾಟಕ್ಕೆ ಸಿನಿಮಾ ಧಾರವಾಹಿ ನಟರು ಸೇರಿದಂತೆ ಅನೇಕರು ಭಾಗವಹಿಸಿದ್ದು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ, ಶಾಸಕರಾದ ಸಿ.ಟಿ ರವಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಕುಂತಲಾ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು.


ಎಂಡೋ ಸಲ್ಫಾನ್ ಸಂತ್ರಸ್ತರು ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳೇನು?

* ಎಂಡೋ ಸಲ್ಫಾನ್ ಪೀಡಿತರಿಗೆ ನೀಡುತ್ತಿರುವ ಮಾಸಾಶನವನ್ನು 3 ರಿಂದ 5 ಸಾವಿರಕ್ಕೆ ಏರಿಸಬೇಕು
* 5 ರಿಂದ 10 ಲಕ್ಷ ಪರಿಹಾರ ಹಣವನ್ನು ಕುಟುಂಬಕ್ಕೆ ನೀಡಬೇಕು
*1600 ಮಂದಿಗೆ 6 ತಿಂಗಳಿನಿಂದ ತಡೆ ಹಿಡಿದಿರುವ ಮಾಸಾಶನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು
* ಚಿಕಿತ್ಸೆಗೆ ಹೋಗಿಬರಲು ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್ ಮತ್ತು ರೈಲು ಪಾಸ್ ವಿತರಿಸಬೇಕು
* ಎಂಡೋಲ್ಫಾನ್ ಬಾದಿತ ಪ್ರತಿ ಕುಟುಂಬಕ್ಕೆ ತಿಂಗಳಿಗೆ 50 ಕೆಜಿ ಪೌಷ್ಠಿಕ ಆಹಾರ ಒದಗಿಸಬೇಕು
* ಕುಟುಂಬದವರಿಗೆ ಬಡ್ಡಿ ರಹಿತ ಸಾಲ ನೀಡಬೇಕು ಮತ್ತು ಉಚಿತ ಶಿಕ್ಷಣ ಕಲ್ಪಿಸಬೇಕು
* ಎಂಡೋಸಲ್ಫಾನ್ ಬಾದಿತ ಮಕ್ಕಳನ್ನು ನೋಡಿಕೊಳ್ಳುವವರಿಗೆ 2000 ಹಣವನ್ನು ಸರ್ಕಾರವೇ ನೀಡಬೇಕು
* ಶಾಶ್ವತ ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಬೇಕು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+