Actor Darshan: ಡೈಲಿ ಗುಂಡು, ತುಂಡಿನಲ್ಲೇ ಮುಳುಗುತ್ತಿದ್ದ ದರ್ಶನ್ ಈಗ ಜೈಲಿನಲ್ಲಿ ಏನ್ ಮಾಡ್ತಾನೆ?
Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿ ಎ2 ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದು (ಜೂನ್ 22) ಅಂತ್ಯವಾಗಿದ್ದು, ಅವರನ್ನು ಕೋರ್ಟ್ಗೆ ಕರೆದೊಯ್ಯಲಾಗಿತ್ತು. ಇನ್ನು ಈ ನಾಲ್ವರು ಆರೋಪಿಗಳಿಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಹಾಗಾದರೆ ಡೈಲಿ ಗುಂಡು, ತುಂಡಿನಲ್ಲೇ ಮುಳುಗಿರುತ್ತಿದ್ದ ನಟ ದರ್ಶನ್ ಈಗ ಜೈಲಿನಲ್ಲಿ ಏನು ಮಾಡುತ್ತಾನೆ ಎನ್ನುವ ಪ್ರಶ್ನೆಗಳು ಎದ್ದಿವೆ.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶದ ಕಳುಹಿಸಿದ್ದಾರೆ ಎನ್ನುವ ಕಾರಣಕಗಕೆ ಚಿತ್ರದುರ್ಗ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರೆದೊಯ್ದು ನಟ ದರ್ಶನ್ ಮತ್ತು ಗ್ಯಾಂಗ್ ಅವರನ್ನು ಭೀಕರವಾಗಿ ಕೊಲೆ ಮಾಡಿದೆ ಎನ್ನುವ ಆರೋಪದ ಮೇಲೆ ಈಗಾಗಲೇ ಪ್ರಕರಣದ ಎ1 ಆರೋಪಿಯಾದ ಪವಿತ್ರಾ ಗೌಡ ಜೈಲು ಪಾಲಾಗಿದ್ದು, ಇಂದು (ಜೂನ್ 22) ಕೋರ್ಟ್ ಆದೇಶದ ಮೇರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದೆ.

ಇನ್ನು ಹಲವರು ಹೇಳುವ ಪ್ರಕಾರ ಸಂಜೆ ಆಯಿತೆಂದರೆ ಸಾಕು ನಟ ದರ್ಶನ್ ಗುಂಡು, ತುಂಡಿನಲ್ಲೇ ಮುಳುಗಿರುತ್ತಿದ್ದ. ಅಷ್ಟೇ ಅಲ್ಲದೆ, ಯಾರ ಜೊತೆಗಾದರೂ ಕಿರಿಕ್ ಮಾಡಿಕೊಳ್ಳುವುದನ್ನೇ ಅಭ್ಯಾಸ ಮಾಡಿಕೊಂಡಿದ್ದ. ದೇಹಕ್ಕೆ ಎಣ್ಣೆ ಸೇರ್ತು ಅಂದ್ರೆ ಸಾಕು ದರ್ಶನ್ ಮನುಷ್ಯನಾಗಿರುತ್ತಿರಲಿಲ್ಲ. ಬದಲಿಗೆ ತುಕಡಿ ಗ್ಯಾಂಗ್ ಕಟ್ಟಿಕೊಂಡು ಗಲಾಟೆ ಮಾಡುವುದೇ ಇವನ ಕೆಲಸವಾಗಿತ್ತು ಎನ್ನುವ ಗಂಭೀರ ಆರೋಪಗಳು ಈಗಾಗಲೇ ಕೇಳಿಬರುತ್ತಲೇ ಇವೆ.
ಇಂತಹ ಆರೋಪಗಳನ್ನು ಮಾಡುತ್ತಿರುವವರು ಒಬ್ಬರನ್ನ ಇಬ್ಬರಲ್ಲ, ಅವರನ್ನು ಹತ್ತಿರದಿಂದ ನೋಡಿರುವ ಪ್ರತಿಯೊಬ್ಬರ ಬಾಯಲ್ಲೂ ಬರುವುದೇ ದರ್ಶನ್ ಗುಂಡು, ತುಂಡಿನ ದಾಸನಾಗಿದ್ದ. ಅವನಿಗೆ ಕತ್ತಲಾಯಿತಂದರೆ ಸಾಕು ಕುಡಿದು ತೂರಾಡುವುದೇ ವೃತ್ತಿ ಮಾಡಿಕೊಂಡಿದ್ದ. ಅಪ್ಪನಿಗೆ ತಕ್ಕ ಮಗನಂತೆ ಬದುಕಲಿಲ್ಲ. ಅಪ್ಪ ನಟನೆಯಲ್ಲಿ ಖಳನಾಯಕನಾಗಿದ್ದು, ನಿಜ ಜೀವನದಲ್ಲಿ ನಾಯಕರಾಗಿದ್ದರು. ಇನ್ನು ಮಗ ದರ್ಶನ್ ಸಿನಿಮಾನಗಳಲ್ಲಿ ನಾಯಕನಾಗಿದ್ದರೆ, ನಿಜಜೀವನದಲ್ಲಿ ಮಾತ್ರ ಖಳನಾಯಕನಾಗಿದ್ದಾನೆ ಎಂದು ದೂರುವವರೇ ಹೆಚ್ಚಾಗಿದ್ದಾರೆ.
ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14 ದಿನಗಳ ಕಾಲ ನಟ ದರ್ಶನ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಸದಾ ಗುಂಡು, ತುಂಡಿನಲ್ಲೇ ಮುಳುಗಿರುತ್ತಿದ್ದ ದರ್ಶನ್ ಈಗ ಜೈಲಿನಲ್ಲಿ ಏನು ಮಾಡುತ್ತಾರೆ ಎನ್ನುವ ಪ್ರಶ್ನೆಗಳು ಎದ್ದಿದೆ. ಯಾಕೆ ಈ ಪ್ರಶ್ನೆ ಎಂದರೆ ಸಾಮಾವ್ಯವಾಗಿ ಕುಡಿತದ ಚಟದಿಂದ ಹೊರಬರುವುದು ತುಂಬಾನೇ ಕಷ್ಟ. ಅದರಲ್ಲೂ ದಿನಗುಡುಕರು ಒಂದು ದಿನ ಎಣ್ಣೆ ಬಿಟ್ಟರೆ ಅವರ ಕೈ, ಕಾಲು ನಡುಗುತ್ತವೆ ಎನ್ನುವ ಮಾತುಗಳಿವೆ. ಹಾಗೆಯೇ ದರ್ಶನ್ ಪಾಡು ಇದೀಗ ಏನು ಎನ್ನುವ ಪ್ರಶ್ನೆಗಳು ಎದ್ದಿವೆ.
ಜೈಲಿನಲ್ಲಿ ಎಲ್ಲಾ ಕೈದಿಗಳಿಗೂ ಏನು ಊಟ ಕೊಡುತ್ತಾರೋ (ಮುದ್ದೆ, ಚಪಾತಿ, ಸಾಂಬಾರ್) ಅದನ್ನೇ ನಟ ದರ್ಶನ್ಗೂ ಕೊಡಲಾಗುತ್ತದೆ. ಇದಕ್ಕೆ ದರ್ಶನ್ ಹೇಗೆ ಹೊಂದಿಕೊಳ್ಳುತ್ತಾರೋ ಅಂತಲೂ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಪ್ರಶ್ನೆಗಳ ಸರಮಾಲೆಯೇ ಎದ್ದಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications